8:45 AM Friday27 - March 2026
ಬ್ರೇಕಿಂಗ್ ನ್ಯೂಸ್
1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌…

ಇತ್ತೀಚಿನ ಸುದ್ದಿ

ಹಿಜಾಬ್: ಮಧ್ಯಂತರ ಪರಿಹಾರ ಕೋರಿ ಭಂಡಾರ್ಕರ್ಸ್‌ ಕಾಲೇಜಿನ ಪದವಿ ವಿದ್ಯಾರ್ಥಿನಿಯರ ಮನವಿ; ಹೈಕೋರ್ಟ್‌ ತಿರಸ್ಕಾರ

23/02/2022, 11:24

ಬೆಂಗಳೂರು(reporterkarnataka.com): ಉಡುಪಿಯ ಭಂಡಾರ್ಕಾರ್ಸ್ ಕಾಲೇಜ್ ಆಫ್ ಆರ್ಟ್ಸ್ ಎಂಡ್ ಸಾಯನ್ಸ್ ಇಲ್ಲಿನ ಇಬ್ಬರು ಪದವಿ ವಿದ್ಯಾರ್ಥಿನಿಯರು ತಮಗೆ ತರಗತಿಗಳಿಗೆ ಹಿಜಾಬ್ ಧರಿಸಿ ಆಗಮಿಸಲು ಅನುಮತಿಲು ಕಾಲೇಜಿಗೆ ಸೂಚನೆ ನೀಡಬೇಕೆಂದು ಕೋರಿ ಹೈಕೋರ್ಟಿಗೆ ಸಲ್ಲಿಸಲಾಗಿದ್ದ ಅರ್ಜಿಗೆ ಸಂಬಂಧಿಸಿದಂತೆ ಅರ್ಜಿದಾರರಿಗೆ ಮಧ್ಯಂತರ ಪರಿಹಾರ ಒದಗಿಸಲು ಜಸ್ಟಿಸ್ ಕೃಷ್ಣ ಎಸ್. ದೀಕ್ಷಿತ್ ಅವರ ಏಕ ಸದಸ್ಯ ಪೀಠ ಸೋಮವಾರ ನಿರಾಕರಿಸಿದೆ.

ಹೈಕೋರ್ಟಿನ ಪೂರ್ಣ ಪೀಠ ಫೆಬ್ರವರಿ 10ರಂದು ಹೊರಡಿಸಿದ ಮಧ್ಯಂತರ ಆದೇಶ ಈಗ ಊರ್ಜಿತದಲ್ಲಿರುವುದರಿಂದ ಹಾಗೂ ಹಿಜಾಬ್ ಪ್ರಕರಣದ ವಿಚಾರಣೆಯನ್ನು ಪೂರ್ಣ ಪೀಠ ಮುಂದುವರಿಸಿರುವುದರಿಂದ ತನಗೆ ಈ ಹಂತದಲ್ಲಿ ಮಧ್ಯಂತರ ಆದೇಶ ನೀಡಲು ಸಾಧ್ಯವಿಲ್ಲ ಎಂದು ಏಕಸದಸ್ಯ ಪೀಠ ಹೇಳಿದೆ.

ಅರ್ಜಿದಾರರು ಕಾಲೇಜಿನಲ್ಲಿ ಬಿಬಿಎ ಕೋರ್ಸ್ ಓದುತ್ತಿದ್ದು ಹಾಗೂ ಪ್ರವೇಶಾತಿ ಪಡೆದಂದಿನಿಂದ ಅವರು ಕಾಲೇಜು ಸಮವಸ್ತ್ರದ ಜೊತೆಗೆ ಹಿಜಾಬ್ ಧರಿಸುತ್ತಿದ್ದರು ಹಾಗೂ ಮುಸ್ಲಿಂ ವಿದ್ಯಾರ್ಥಿಗಳಿಗೆ ಹಿಜಾಬ್ ಧರಿಸಲು ಅನುಮತಿ ನೀಡುವ ನಿರ್ದಿಷ್ಟ ನಿಯಮವಿದೆ. ಆದರೂ ಅರ್ಜಿದಾರರು ಮತ್ತು ಇತರ ಮುಸ್ಲಿಂ ವಿದ್ಯಾರ್ಥಿನಿಯರನ್ನು ಮೊದಲ ಬಾರಿ ಫೆಬ್ರವರಿ 3ರಂದು ಕಾಲೇಜಿನ ಪ್ರಾಂಶುಪಾಲರು ಮತ್ತು ಸಿಬ್ಬಂದಿ ತಡೆದಿದ್ದರು, ಕರ್ನಾಟಕ ರಾಜ್ಯ ವಿವಿ ಕಾಯಿದೆ ಅಥವಾ ಯುಜಿಸಿ ಕಾಯಿದೆಯಡಿ ಅಸಭ್ಯ ಉಡುಗೆ ಧರಿಸಬಾರದೆಂಬ ನಿಯಮದ ಹೊರತಾಗಿ ಯಾವುದೇ ಸಮವಸ್ತ್ರ ನಿರ್ದಿಷ್ಟಪಡಿಸಲಾಗಿಲ್ಲ ಎಂದೂ ಅರ್ಜಿದಾರರು ವಾದಿಸಿದ್ದಾರೆ.

“ಕಾನೂನಿನ ಪ್ರಮುಖ ಪ್ರಶ್ನೆಗಳು ಪೂರ್ಣ ಪೀಠದ ಮುಂದೆ ದಿನನಿತ್ಯದ ಆಧಾರದ ಮೇಲೆ ಚರ್ಚೆಯಾಗುತ್ತಿರುವಾಗ, ಪೂರ್ಣ ಪೀಠವು ನೀಡಿದ ಒಂದು ಮಧ್ಯಂತರ ಪರಿಹಾರವನ್ನು ಹೊರತುಪಡಿಸಿ ಅರ್ಜಿದಾರರಿಗೆ ಯಾವುದೇ ಮಧ್ಯಂತರ ಪರಿಹಾರವನ್ನು ನೀಡಲಾಗುವುದಿಲ್ಲ” ಎಂದು ಏಕಸದಸ್ಯ ಪೀಠ ಹೇಳಿದೆ.

ಇತ್ತೀಚಿನ ಸುದ್ದಿ

ಜಾಹೀರಾತು