3:05 PM Friday4 - July 2025
ಬ್ರೇಕಿಂಗ್ ನ್ಯೂಸ್
ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್‌ ಸುಳಿವು ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ Accident | ಸುರತ್ಕಲ್ ಬಳಿ ಎರಡು ಖಾಸಗಿ ಬಸ್ಸುಗಳು ಮುಖಾಮುಖಿ ಡಿಕ್ಕಿ: 28… Chikkaballapura | ರಾಜ್ಯ ಸಚಿವ ಸಂಪುಟ ಸಭೆ: ಮುಖ್ಯಮಂತ್ರಿ ಘೋಷಿಸಿದ ಯೋಜನೆ, ತೀರ್ಮಾನಗಳೇನು? JDS Protest | ರಾಜ್ಯದಲ್ಲಿ ಆರ್ಥಿಕ ಅರಾಜಕತೆ: ಬೆಂಗಳೂರು ಪ್ರತಿಭಟನೆಯಲ್ಲಿ ಜೆಡಿಎಸ್ ಆರೋಪ Dharwad | ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ: ಕಾರ್ಮಿಕ… ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ Karnataka CM | ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಮುಖ್ಯಮಂತ್ರಿ…

ಇತ್ತೀಚಿನ ಸುದ್ದಿ

ಹಿಜಾಬ್ ಸಂವಿಧಾನಬದ್ಧ ಹಕ್ಕು, ಯಾವುದೇ ಬೆಲೆ ತೆತ್ತಾದರೂ ರಕ್ಷಿಸಲಾಗುವುದು: ಮುಸ್ಲಿಂ ಒಕ್ಕೂಟ

07/02/2022, 09:49

ಮಂಗಳೂರು(reporterkarnataka.com): .ಹಿಜಾಬ್ ಹಕ್ಕನ್ನು ಯಾವುದೇ ಬೆಲೆ ತೆತ್ತಾದರೂ ರಕ್ಷಿಸಲಾಗುವುದು. ಮುಸ್ಲಿಂ ವಿದ್ಯಾರ್ಥಿನಿಯರ ಶೈಕ್ಷಣಿಕ ಭವಿಷ್ಯಕ್ಕೆ ತಡೆಯೊಡ್ಡುವ ಈ ಷಡ್ಯಂತ್ರವನ್ನು ದ.ಕ.ಜಿಲ್ಲಾ ಮುಸ್ಲಿಂ ಒಕ್ಕೂಟ ತೀವ್ರವಾಗಿ ಖಂಡಿಸುತ್ತದೆ. ಮಾತ್ರವಲ್ಲ ಈ ಅನ್ಯಾಯದ ವಿರುದ್ಧ ಪ್ರಬಲ ಹೋರಾಟ ಮಾಡಲಿದ್ದೇವೆ ಎಂದು ದ.ಕ. ಮುಸ್ಲಿಂ ಒಕ್ಕೂಟದ ಅಧ್ಯಕ್ಷ ಕೆ. ಅಶ್ರಫ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸರಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ನೂರಾರು ವರ್ಷಗಳಿಂದ ಮುಸ್ಲಿಂ ವಿದ್ಯಾರ್ಥಿನಿಯರು ಧರಿಸುತ್ತಾ ಬರುತ್ತಿರುವ ಮತ್ತು ಭಾರತದ ಸಂವಿಧಾನದಲ್ಲೂ ಅವಕಾಶ ಕಲ್ಪಿಸಲಾದ ಹಿಜಾಬ್, ಸ್ಕಾರ್ಫ್ ನ ಬಗ್ಗೆ ತೀರಾ ಅನಗತ್ಯವಾದ ವಿವಾದವನ್ನು ಸೃಷ್ಟಿಸಿ ವಿದ್ಯಾರ್ಥಿಗಳ ಮನಸ್ಸಿನಲ್ಲಿ ಕೋಮು ವಿಷಬೀಜವನ್ನು ಬಿತ್ತುವ ಹುನ್ನಾರ ನಡೆಯುತ್ತಿರುವುದು
ವಿಷಾದನೀಯ ಎಂದು ಅವರು ಹೇಳಿದ್ದಾರೆ.

ಸಂವಿಧಾನ ಬದ್ಧವಾದ ಹಿಜಾಬ್ ಧರಿಸುವ ಪ್ರಕ್ರಿಯೆಗೆ ತಡೆಯೊಡ್ಡುವವರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು. ಶಿಕ್ಷಣ ಸಂಸ್ಥೆಗಳಲ್ಲಿ ಸೌಹಾರ್ದ ವಾತಾವರಣ ಶಾಶ್ವತ ವಾಗಿರುವಂತೆ ನೋಡಿಕೊಳ್ಳಬೇಕು ಎಂದು ಅಶ್ರಫ್ ಒತ್ತಾಯಿಸಿದ್ದಾರೆ. 

ಹಿಜಾಬ್ ಧಾರಣೆ ಮುಸ್ಲಿಮ್ ಧರ್ಮದ ಧಾರ್ಮಿಕ ಮತ್ತು ಸಾಂವಿಧಾನಿಕ ಹಕ್ಕು.ಇದನ್ನು ಯಾವುದೇ ಬೆಲೆ ತೆತ್ತು ಸಂರಕ್ಷಿಸ ಲಾಗುವುದು. ಹಿಜಾಬ್ ಸಂಬಂಧಿತ ವಿವಾದ ಕರ್ನಾಟಕ ಉಚ್ಛನ್ಯಾಯಲಯ ದಲ್ಲಿ ಇದ್ದು, ತೀರ್ಪನ್ನು ಗೌರವಿಸಲಾಗುವುದು. ಭಾರತ ದ ಸಂವಿಧಾನದಲ್ಲಿ ಧಾರ್ಮಿಕ ಆಚರಣೆಗೆ ಮುಕ್ತ ಸ್ವಾತಂತ್ರ್ಯ ವಿರುವುದರಿಂದ ಸಂವಿಧಾನದ ಆಶಯವನ್ನು ನ್ಯಾಯಾಲಯ ಎತ್ತಿ ಹಿಡಿಯಲಿದೆ ಎಂಬ ಆಶಾ ಭಾವನೆ ಇದೆ ಎಂದು ಅಶ್ರಫ್ ರವರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು