7:51 AM Friday31 - July 2026
ಬ್ರೇಕಿಂಗ್ ನ್ಯೂಸ್
ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ…

ಇತ್ತೀಚಿನ ಸುದ್ದಿ

ಹಿಜಾಬ್ ಸಂವಿಧಾನಬದ್ಧ ಹಕ್ಕು, ಯಾವುದೇ ಬೆಲೆ ತೆತ್ತಾದರೂ ರಕ್ಷಿಸಲಾಗುವುದು: ಮುಸ್ಲಿಂ ಒಕ್ಕೂಟ

07/02/2022, 09:49

ಮಂಗಳೂರು(reporterkarnataka.com): .ಹಿಜಾಬ್ ಹಕ್ಕನ್ನು ಯಾವುದೇ ಬೆಲೆ ತೆತ್ತಾದರೂ ರಕ್ಷಿಸಲಾಗುವುದು. ಮುಸ್ಲಿಂ ವಿದ್ಯಾರ್ಥಿನಿಯರ ಶೈಕ್ಷಣಿಕ ಭವಿಷ್ಯಕ್ಕೆ ತಡೆಯೊಡ್ಡುವ ಈ ಷಡ್ಯಂತ್ರವನ್ನು ದ.ಕ.ಜಿಲ್ಲಾ ಮುಸ್ಲಿಂ ಒಕ್ಕೂಟ ತೀವ್ರವಾಗಿ ಖಂಡಿಸುತ್ತದೆ. ಮಾತ್ರವಲ್ಲ ಈ ಅನ್ಯಾಯದ ವಿರುದ್ಧ ಪ್ರಬಲ ಹೋರಾಟ ಮಾಡಲಿದ್ದೇವೆ ಎಂದು ದ.ಕ. ಮುಸ್ಲಿಂ ಒಕ್ಕೂಟದ ಅಧ್ಯಕ್ಷ ಕೆ. ಅಶ್ರಫ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸರಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ನೂರಾರು ವರ್ಷಗಳಿಂದ ಮುಸ್ಲಿಂ ವಿದ್ಯಾರ್ಥಿನಿಯರು ಧರಿಸುತ್ತಾ ಬರುತ್ತಿರುವ ಮತ್ತು ಭಾರತದ ಸಂವಿಧಾನದಲ್ಲೂ ಅವಕಾಶ ಕಲ್ಪಿಸಲಾದ ಹಿಜಾಬ್, ಸ್ಕಾರ್ಫ್ ನ ಬಗ್ಗೆ ತೀರಾ ಅನಗತ್ಯವಾದ ವಿವಾದವನ್ನು ಸೃಷ್ಟಿಸಿ ವಿದ್ಯಾರ್ಥಿಗಳ ಮನಸ್ಸಿನಲ್ಲಿ ಕೋಮು ವಿಷಬೀಜವನ್ನು ಬಿತ್ತುವ ಹುನ್ನಾರ ನಡೆಯುತ್ತಿರುವುದು
ವಿಷಾದನೀಯ ಎಂದು ಅವರು ಹೇಳಿದ್ದಾರೆ.

ಸಂವಿಧಾನ ಬದ್ಧವಾದ ಹಿಜಾಬ್ ಧರಿಸುವ ಪ್ರಕ್ರಿಯೆಗೆ ತಡೆಯೊಡ್ಡುವವರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು. ಶಿಕ್ಷಣ ಸಂಸ್ಥೆಗಳಲ್ಲಿ ಸೌಹಾರ್ದ ವಾತಾವರಣ ಶಾಶ್ವತ ವಾಗಿರುವಂತೆ ನೋಡಿಕೊಳ್ಳಬೇಕು ಎಂದು ಅಶ್ರಫ್ ಒತ್ತಾಯಿಸಿದ್ದಾರೆ. 

ಹಿಜಾಬ್ ಧಾರಣೆ ಮುಸ್ಲಿಮ್ ಧರ್ಮದ ಧಾರ್ಮಿಕ ಮತ್ತು ಸಾಂವಿಧಾನಿಕ ಹಕ್ಕು.ಇದನ್ನು ಯಾವುದೇ ಬೆಲೆ ತೆತ್ತು ಸಂರಕ್ಷಿಸ ಲಾಗುವುದು. ಹಿಜಾಬ್ ಸಂಬಂಧಿತ ವಿವಾದ ಕರ್ನಾಟಕ ಉಚ್ಛನ್ಯಾಯಲಯ ದಲ್ಲಿ ಇದ್ದು, ತೀರ್ಪನ್ನು ಗೌರವಿಸಲಾಗುವುದು. ಭಾರತ ದ ಸಂವಿಧಾನದಲ್ಲಿ ಧಾರ್ಮಿಕ ಆಚರಣೆಗೆ ಮುಕ್ತ ಸ್ವಾತಂತ್ರ್ಯ ವಿರುವುದರಿಂದ ಸಂವಿಧಾನದ ಆಶಯವನ್ನು ನ್ಯಾಯಾಲಯ ಎತ್ತಿ ಹಿಡಿಯಲಿದೆ ಎಂಬ ಆಶಾ ಭಾವನೆ ಇದೆ ಎಂದು ಅಶ್ರಫ್ ರವರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು