11:28 AM Wednesday26 - November 2025
ಬ್ರೇಕಿಂಗ್ ನ್ಯೂಸ್
ಛಲವಾದಿ ಹಾಗೂ ಆರ್. ಅಶೋಕ್ ಗೆ ರಾಜಕೀಯ ವಿವೇಕ ಇಲ್ಲ: ಸಚಿವ ಎನ್.… ಸಂತಾನ ಹರಣ ಚಿಕಿತ್ಸೆ ಬಳಿಕವೂ ಗರ್ಭಿಣಿಯಾದ ಪತ್ನಿ: ಪತಿಯಿಂದ ವೈದ್ಯರಿಗೆ ಬೆದರಿಕೆ ಆರೋಪ:… ರಾಜ್ಯದ ಕ್ರಿಕೆಟ್ ಪಟುಗಳಿಗೆ ತಲಾ 10 ಲಕ್ಷ ನಗದು ಬಹುಮಾನ ಜತೆಗೆ ಸರ್ಕಾರಿ… ಹೈವಿಷನ್ ಇಂಡಿಯಾ ಜತೆ ಕೊರಿಯನ್ ಸಂಸ್ಥೆ ಜಿಟಿಟಿಸಿ ಒಪ್ಪಂದಕ್ಕೆ ಸಹಿ |ರಾಜ್ಯದ ಪ್ರವಾಸಿ… ಗಗನಯಾನಿಯಾಗಲು ದೈಹಿಕ, ಮಾನಸಿಕ ಆರೋಗ್ಯ ಬಹಳ ಮುಖ್ಯ: ಶುಭಾಂಶು ಶುಕ್ಲಾ Kodagu | ಅಪಘಾತಕ್ಕೆ ಈಡಾಗಿ ಗಂಭೀರ ಸ್ಥಿತಿಯಲ್ಲಿ ಪುತ್ರ: ನೊಂದ ತಾಯಿ ಕೆರೆಗೆ… ಅಕ್ರಮ‌ ಆಸ್ತಿ ಸಂಪಾದನೆ ಆರೋಪ: ಕೊಡಗು ಪಿಡಬ್ಲ್ಯುಡಿ ಎಂಜಿನಿಯರ್ ಕಚೇರಿ, ಮನೆ ಮೇಲೆ… Yadagiri | ವಿದ್ಯುತ್ ಕಳ್ಳತನ ನಿಯಂತ್ರಣ, ಟಿಸಿಗಳ ಸಮರ್ಪಕ ನಿರ್ವಹಣೆಗೆ ಇಂಧನ ಸಚಿವ… ಹಿಂದೂ ಧರ್ಮ ಮತ್ತು ಭಾರತೀಯತೆ ಎರಡೂ ಒಂದೇ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಉಡುಪಿಗೆ ನ.28ರಂದು ಪ್ರಧಾನಿ ಮೋದಿ ಭೇಟಿ: ಸಾರ್ವತ್ರಿಕ ರಜೆ ಘೋಷಿಸಲು ಶಾಸಕ ಯಶ್…

ಇತ್ತೀಚಿನ ಸುದ್ದಿ

ಹಿಜಾಬ್: ಉಡುಪಿ ಎಂಜಿಎಂ ಕಾಲೇಜಿಗೆ ಅನಿರ್ದಿಷ್ಟಾವಧಿ ರಜೆ; ಶಿವಮೊಗ್ಗದಲ್ಲಿ 144 ಸೆಕ್ಷನ್ ಜಾರಿ; ಕೋರ್ಟ್ ಏನು ಹೇಳುತ್ತದೆ?

08/02/2022, 18:52

ಉಡುಪಿ(reporterkarnataka.com): ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಎಂಜಿಎಂ ಕಾಲೇಜಿಗೆ ಅನಿರ್ದಿಷ್ಟಾವಧಿ ರಜೆ ಘೋಷಿಸಲಾಗಿದೆ.

ಹಿಜಾಬ್ -ಕೇಸರಿ ನಡುವಿನ ಗಲಾಟೆ ಪರಿಸ್ಥಿತಿಯನ್ನು ಹತೋಟಿಗೆ ತರುವ ಉದ್ದೇಶದಿಂದ ಅನಿರ್ಧಿಷ್ಟಾವಧಿವರೆಗೆ ಕಾಲೇಜಿಗೆ ರಜೆ ಕೊಟ್ಟಿದ್ದೇವೆ. ಕೋರ್ಟ್ ಆದೇಶ ಏನು ಬರುತ್ತದೆ ಎಂಬುವುದನ್ನು ಕಾದುನೋಡುತ್ತೇವೆ. ಮುಂದಿನ ತೀರ್ಮಾನ ಆಡಳಿತ ಮಂಡಳಿ ತೆಗೆದುಕೊಳ್ಳುತ್ತದೆ. ಅಲ್ಲಿಯವರೆಗೆ ಪಿಯುಸಿ ಹಾಗೂ ಪದವಿ ಕಾಲೇಜಿಗೆ ರಜೆ ಘೋಷಣೆ ಮಾಡಿದ್ದೇವೆ ಎಂದು ಉಡುಪಿ ಎಂಜಿಎಂ ಕಾಲೇಜಿನ ಡಾ. ದೇವಿದಾಸ್ ಎಸ್. ನಾಯ್ಕ್ ತಿಳಿಸಿದ್ದಾರೆ.

ತ್ರಿವರ್ಣ ಬದಲಿಗೆ ಕೇಸರಿ ಧ್ವಜ:  ಕೇಸರಿ ಹಿಜಾಬ್ ವಿವಾದಗಳ ನಡುವೆ ಶಿವಮೊಗ್ಗದ ಸರ್ಕಾರಿ ಪದವಿ ಕಾಲೇಜಿನಲ್ಲಿ ತ್ರಿವರ್ಣ ಧ್ವಜ ಹಾರಿಸುವ ಧ್ವಜಸ್ತಂಭದಲ್ಲಿ ಕೇಸರಿ ಬಾವುಟ ಹಾರಿಸಿದ ಘಟನೆ ನಡೆದಿದೆ. ಎಸ್.ಪಿ.ಲಕ್ಷ್ಮೀಪ್ರಸಾದ್ ಹಾಗು ಪೋಲೀಸರು ಕಾರ್ಯಪ್ರವೃತ್ತರಾಗಿ ಲಾಠಿ ಬೀಸಿದ್ದು, ಗುಂಪುಗಳನ್ನು ಚದುರಿಸಿದ್ದಾರೆ.ನಗರದಲ್ಲಿ ಲಾಂಗ್ ಮಚ್ಚುಗಳ ವಶ :ಶಿವಮೊಗ್ಗದಲ್ಲಿ ಭುಗಿಲೆದ್ದಿರುವ ಹಿಜಾಬ್ ಮತ್ತು ಕೇಸರಿ ಶಾಲಿನ ವಿಚಾರದಲ್ಲಿ ಇಂದು ಮತ್ತು ನಾಳೆನೂ ಸೆಕ್ಷನ್ 144 ಜಾರಿಯಾಗಿದ್ದು ಲಷ್ಕರ್ ಮೊಹಲ್ಲಾದಲ್ಲಿ

ಯುವಕರು ರಸ್ತೆಗಿಳಿದು ದಿಡೀರನೇ ಪ್ರತಿಭಟನೆ ನಡೆಸಿದ್ದು, ಲಾಂಗು ಮಚ್ಚು ಗಳನ್ನ ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಕೋರ್ಟ್ ಏನು ಹೇಳಿದೆ?: 

ರಾಜ್ಯ ಹೈಕೋರ್ಟ್ ನಲ್ಲಿ ವಿಚಾರಣೆ ನಡೆಯಿತ್ತಿದ್ದು, ವಾದ ಪ್ರತಿವಾದಗಳನ್ನು ಆಲಿಸಿದ ನ್ಯಾಯಾಲಯ ವಿಚಾರಣೆಯನ್ನು ನಾಳೆಗೆ ಮುಂದೂಡಿದೆ.

ವಿವಾದ ಸಂಬಂಧ ಸಲ್ಲಿಕೆಯಾಗಿರುವ ನಾಲ್ಕು ಅರ್ಜಿಗಳನ್ನು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್‌ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸುತ್ತಿದ್ದು, ಎಲ್ಲ ಭಾವನೆಗಳನ್ನು ಪಕ್ಕಕ್ಕೆ ಇರಿಸಿ. ಸಂವಿಧಾನ ಏನು ಹೇಳುತ್ತದೋ ಅದರಂತೆ ನಡೆಯುತ್ತೇವೆ. ಭಗದ್ಗೀತೆಗಿಂತ ಸಂವಿಧಾನವೇ ಮೇಲು ಎಂದು ವಿಚಾರಣೆ ವೇಳೆ ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು