6:31 AM Saturday15 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

ಹಿಜಾಬ್: ಉಡುಪಿ ಎಂಜಿಎಂ ಕಾಲೇಜಿಗೆ ಅನಿರ್ದಿಷ್ಟಾವಧಿ ರಜೆ; ಶಿವಮೊಗ್ಗದಲ್ಲಿ 144 ಸೆಕ್ಷನ್ ಜಾರಿ; ಕೋರ್ಟ್ ಏನು ಹೇಳುತ್ತದೆ?

08/02/2022, 18:52

ಉಡುಪಿ(reporterkarnataka.com): ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಎಂಜಿಎಂ ಕಾಲೇಜಿಗೆ ಅನಿರ್ದಿಷ್ಟಾವಧಿ ರಜೆ ಘೋಷಿಸಲಾಗಿದೆ.

ಹಿಜಾಬ್ -ಕೇಸರಿ ನಡುವಿನ ಗಲಾಟೆ ಪರಿಸ್ಥಿತಿಯನ್ನು ಹತೋಟಿಗೆ ತರುವ ಉದ್ದೇಶದಿಂದ ಅನಿರ್ಧಿಷ್ಟಾವಧಿವರೆಗೆ ಕಾಲೇಜಿಗೆ ರಜೆ ಕೊಟ್ಟಿದ್ದೇವೆ. ಕೋರ್ಟ್ ಆದೇಶ ಏನು ಬರುತ್ತದೆ ಎಂಬುವುದನ್ನು ಕಾದುನೋಡುತ್ತೇವೆ. ಮುಂದಿನ ತೀರ್ಮಾನ ಆಡಳಿತ ಮಂಡಳಿ ತೆಗೆದುಕೊಳ್ಳುತ್ತದೆ. ಅಲ್ಲಿಯವರೆಗೆ ಪಿಯುಸಿ ಹಾಗೂ ಪದವಿ ಕಾಲೇಜಿಗೆ ರಜೆ ಘೋಷಣೆ ಮಾಡಿದ್ದೇವೆ ಎಂದು ಉಡುಪಿ ಎಂಜಿಎಂ ಕಾಲೇಜಿನ ಡಾ. ದೇವಿದಾಸ್ ಎಸ್. ನಾಯ್ಕ್ ತಿಳಿಸಿದ್ದಾರೆ.

ತ್ರಿವರ್ಣ ಬದಲಿಗೆ ಕೇಸರಿ ಧ್ವಜ:  ಕೇಸರಿ ಹಿಜಾಬ್ ವಿವಾದಗಳ ನಡುವೆ ಶಿವಮೊಗ್ಗದ ಸರ್ಕಾರಿ ಪದವಿ ಕಾಲೇಜಿನಲ್ಲಿ ತ್ರಿವರ್ಣ ಧ್ವಜ ಹಾರಿಸುವ ಧ್ವಜಸ್ತಂಭದಲ್ಲಿ ಕೇಸರಿ ಬಾವುಟ ಹಾರಿಸಿದ ಘಟನೆ ನಡೆದಿದೆ. ಎಸ್.ಪಿ.ಲಕ್ಷ್ಮೀಪ್ರಸಾದ್ ಹಾಗು ಪೋಲೀಸರು ಕಾರ್ಯಪ್ರವೃತ್ತರಾಗಿ ಲಾಠಿ ಬೀಸಿದ್ದು, ಗುಂಪುಗಳನ್ನು ಚದುರಿಸಿದ್ದಾರೆ.ನಗರದಲ್ಲಿ ಲಾಂಗ್ ಮಚ್ಚುಗಳ ವಶ :ಶಿವಮೊಗ್ಗದಲ್ಲಿ ಭುಗಿಲೆದ್ದಿರುವ ಹಿಜಾಬ್ ಮತ್ತು ಕೇಸರಿ ಶಾಲಿನ ವಿಚಾರದಲ್ಲಿ ಇಂದು ಮತ್ತು ನಾಳೆನೂ ಸೆಕ್ಷನ್ 144 ಜಾರಿಯಾಗಿದ್ದು ಲಷ್ಕರ್ ಮೊಹಲ್ಲಾದಲ್ಲಿ

ಯುವಕರು ರಸ್ತೆಗಿಳಿದು ದಿಡೀರನೇ ಪ್ರತಿಭಟನೆ ನಡೆಸಿದ್ದು, ಲಾಂಗು ಮಚ್ಚು ಗಳನ್ನ ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಕೋರ್ಟ್ ಏನು ಹೇಳಿದೆ?: 

ರಾಜ್ಯ ಹೈಕೋರ್ಟ್ ನಲ್ಲಿ ವಿಚಾರಣೆ ನಡೆಯಿತ್ತಿದ್ದು, ವಾದ ಪ್ರತಿವಾದಗಳನ್ನು ಆಲಿಸಿದ ನ್ಯಾಯಾಲಯ ವಿಚಾರಣೆಯನ್ನು ನಾಳೆಗೆ ಮುಂದೂಡಿದೆ.

ವಿವಾದ ಸಂಬಂಧ ಸಲ್ಲಿಕೆಯಾಗಿರುವ ನಾಲ್ಕು ಅರ್ಜಿಗಳನ್ನು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್‌ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸುತ್ತಿದ್ದು, ಎಲ್ಲ ಭಾವನೆಗಳನ್ನು ಪಕ್ಕಕ್ಕೆ ಇರಿಸಿ. ಸಂವಿಧಾನ ಏನು ಹೇಳುತ್ತದೋ ಅದರಂತೆ ನಡೆಯುತ್ತೇವೆ. ಭಗದ್ಗೀತೆಗಿಂತ ಸಂವಿಧಾನವೇ ಮೇಲು ಎಂದು ವಿಚಾರಣೆ ವೇಳೆ ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು