7:57 AM Monday15 - December 2025
ಬ್ರೇಕಿಂಗ್ ನ್ಯೂಸ್
ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ…

ಇತ್ತೀಚಿನ ಸುದ್ದಿ

ಹಿಜಾಬ್ ವಿವಾದ: ಬಾಗಲಕೋಟೆಯ ಉರ್ದು ವಿಭಾಗದಲ್ಲಿ ಇಡೀ ಕ್ಲಾಸ್​ಗೆ ಒಬ್ಬಳೇ ವಿದ್ಯಾರ್ಥಿನಿ..!

15/02/2022, 22:19

ಬಾಗಲಕೋಟೆ(reporterkarnataka.com): ಹಿಜಾಬ್ ವಿವಾದ ಬಿಸಿ ಇಡೀ ರಾಜ್ಯಕ್ಕೆ ಹಬ್ಬಿದ್ದು, ಇದಕ್ಕೆ ಸಾಕ್ಷಿ ಎನ್ನುವಂತೆ ಬಾಗಲಕೊಟೆಯ ಸರಕಾರಿ ಬಾಲಕಿಯರ ಪ್ರೌಢಶಾಲೆ ಹುಬ್ಬೇರಿಸುವಂತೆ ಮಾಡಿದೆ. ಇಲ್ಲಿನ ಉರ್ದು ವಿಭಾಗದ 10ನೇ ತರಗತಿಯ 19 ವಿದ್ಯಾರ್ಥಿಗಳ ಪೈಕಿ ಒಬ್ಬಳು ಮಾತ್ರ ಹಾಜರಾಗಿದ್ದಾಳೆ.

ಇಡೀ ಕ್ಲಾಸ್ ನಲ್ಲಿ ಒಬ್ಬಳೇ ಒಬ್ಬಳು ವಿದ್ಯಾರ್ಥಿನಿ ತರಗತಿಗೆ ಹಾಜರಾಗಿದ್ದು, ಶಿಕ್ಷಕ ಶಿಕ್ಷಕಿಯರು ಇವಳಿಗೆ ಪಾಠ ಮಾಡುತ್ತಿದ್ದಾರೆ‌. ಒಟ್ಟು 19 ಜನ ವಿದ್ಯಾರ್ಥಿನಿಯರಿದ್ದು ಒಬ್ಬಳನ್ನು ಬಿಟ್ಟು ಎಲ್ಲರೂ ಗೈರಾಗಿದ್ದಾರೆ‌.

ಇನ್ನು ಶಾಲೆಗೆ ಬಂದ ಏಕೈಕ ವಿದ್ಯಾರ್ಥಿನಿ ಜಬೀನ್ ಮಕಾಂದಾರ, “ತರಗತಿಗೆ ನಾನು ಒಬ್ಬಳೇ ಬಂದಿದ್ದೇನೆ, ನನ್ನ ಸ್ನೇಹಿತೆಯರು ಯಾರೂ ಬಂದಿಲ್ಲ. ಇದು ಬೇಸರ ತರಿಸಿದೆ‌. ಯಾವುದೇ ಭಯ ಬೇಡ ಕ್ಲಾಸ್ ಗೆ ಬನ್ನಿ” ಅಂತ ಆಕೆಯ ಸಹಪಾಠಿಗಳಿಗೆ ಮನವಿ ಮಾಡಿದ್ದಾರೆ.

ಮನೆಯಿಂದ ಹಿಜಾಬ್ ಧರಿಸಿಕೊಂಡು ಬರೋದು ಪುನಃ ಶಾಲೆಯಲ್ಲಿ ಅದನ್ನು ತೆಗೆಯೋದು ಈ ಎಲ್ಲ ಮುಜುಗರ ಯಾಕೆ ಅಂತ ವಿದ್ಯಾರ್ಥಿನಿಯರು ಶಾಲೆಗೆ ಹೋಗದೆ ಇರೋದೆ ಒಳ್ಳೆಯದು ಅಂತ ವಿದ್ಯಾರ್ಥಿನಿಯರು, ಪೋಷಕರು ನಿರ್ಧರಿಸಿದ್ದಾರೆ‌ ಎಂದು ಮಾಹಿತಿ ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು