1:58 PM Wednesday12 - November 2025
ಬ್ರೇಕಿಂಗ್ ನ್ಯೂಸ್
ಕುಶಾಲನಗರದಲ್ಲಿ 8.60 ಕೋಟಿ ವೆಚ್ಚದ ಪ್ರಜಾಸೌಧ ತಾಲೂಕು ಆಡಳಿತ ಭವನ ನಿರ್ಮಾಣಕ್ಕೆ ಭೂಮಿ… ತಾಲ್ಲೂಕು ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇರಬೇಕು; ತಪ್ಪಿದವರ ವಿರುದ್ಧ ವರದಿ ನೀಡಲು ಡಿಸಿಗೆ… Mysore | ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಬೇಟೆ: ಕೊಡಗು ಜಿಲ್ಲೆಯ ಇಬ್ಬರ… ಕೇಂದ್ರ ಸರ್ಕಾರದ ಸಾಲ ಕೊಡಿಸುವುದಾಗಿ ಮಹಿಳೆಯರಿಗೆ ಲಕ್ಷಕ್ಕೂ ಅಧಿಕ ವಂಚನೆ: ಮಡಿಕೇರಿ ನಿವಾಸಿ… Sports | ಖೇಲೋ ಇಂಡಿಯಾ ಮಹಿಳಾ ಹಾಕಿ ಟೂರ್ನಿ: ಕುಶಾಲನಗರದ ದಿಶಾ ನಿಡ್ಯಮಲೆ… ಸದ್ಯದಲ್ಲಿ ಸರ್ಕಾರಿ ಶಾಲೆಗಳಿಗೆ ಶಿಕ್ಷಕರ ನೇಮಕಾತಿ: ಸಚಿವ ಮಧು ಬಂಗಾರಪ್ಪ ಕಬ್ಬು ಬೆಳೆಗಾರರ ಕಿವಿಗೆ ಹೂವು ಇಟ್ಟ ರಾಜ್ಯ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ಜವಾಬ್ದಾರಿಯಿಂದ ನುಣುಚಿಕೊಳ್ಳಲು ಪ್ರಧಾನಿಗೆ ಸಿಎಂ ಪತ್ರ: ಕೇಂದ್ರ ಸಚಿವ ಕುಮಾರಸ್ವಾಮಿ ಆರೋಪ ಯುವಕನ ಅನುಮಾನಾಸ್ಪದ ಸಾವು : ರಾಷ್ಟ್ರೀಯ ಹೆದ್ದಾರಿಯಲ್ಲಿ ಮೃತದೇಹ ಇಟ್ಟು ಪ್ರತಿಭಟನೆ ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್…

ಇತ್ತೀಚಿನ ಸುದ್ದಿ

ಹಿಜಾಬ್ ವಿವಾದವನ್ನು ಕಾಂಗ್ರೆಸ್ ರಾಜಕೀಯಗೊಳಿಸಲು ಯತ್ನಿಸುತ್ತಿದೆ: ಕೇಂದ್ರ ಗೃಹ ಸಚಿವ ಅಮಿತ್ ಶಾ ಆರೋಪ

21/02/2022, 23:49

ಹೊಸದಿಲ್ಲಿ(reporterkarnataka.com): ಹಿಜಾಬ್ ವಿವಾದವನ್ನು ಕಾಂಗ್ರೆಸ್ ಮತ್ತಿತರ ವಿಪಕ್ಷಗಳು ರಾಜಕೀಯಗೊಳಿಸಲು ನಡೆಸುವ ಯತ್ನ ಸಫಲವಾಗದು ಎಂದಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, ಎಲ್ಲ ವಿದ್ಯಾರ್ಥಿಗಳು -ಅವರು ಯಾವುದೇ ಜಾತಿ,ಮತ, ಧರ್ಮಕ್ಕೆ ಸೇರಿರಲಿ ಶಾಲಾ ಸಮವಸ್ತ್ರ ನಿಯಮವನ್ನು ಪಾಲಿಸುವುದು ಅತ್ಯಗತ್ಯ ಎಂಬುದು ನನ್ನ ಅಭಿಪ್ರಾಯ ಎಂದು ಹೇಳಿದ್ದಾರೆ. ಅವರು ಸಿಎನ್‌ಎನ್ ನ್ಯೂಸ್ ಗೆ ನೀಡಿದ ಸಂದರ್ಶನವೊಂದರಲ್ಲಿ ಕೇಳಲಾದ ಪ್ರಶ್ನೆಗೆ ಪ್ರತಿಕ್ರಿಯಿಸಿದರು.

ಶಾಲೆಗಳಲ್ಲಿ ಧರ್ಮ-ನಂಬಿಕೆಗಳಿಗೆ ಮೀರಿದ ನಡವಳಿಕೆ ವಿದ್ಯಾರ್ಥಿಗಳದಾಗಿರಬೇಕು. ಹಿಜಾಬ್ ಪ್ರಕರಣವೀಗ ನ್ಯಾಯಾಲಯದಲ್ಲಿದೆ. ಇದನ್ನು ಎಲ್ಲರೂ ಒಪ್ಪಬೇಕು. ತೀರ್ಪು ಬರುವವರೆಗೂ ನನ್ನ ವೈಯಕ್ತಿಕ ಅಭಿಪ್ರಾಯವೆಂದರೆ, ವಿದ್ಯಾರ್ಥಿಗಳು ಯಾವುದೇ ನಂಬಿಕೆ, ಮತ, ಧರ್ಮಕ್ಕೆ ಸೇರಿದ್ದರೂ ಶಾಲಾ ಸಮವಸ್ತ್ರ ನಿಯಮಕ್ಕೆ ಬದ್ಧರಾಗಿರಬೇಕು .ನ್ಯಾಯಾಲಯ ತೀರ್ಪು ನೀಡಿದ ಅನಂತರ ಎಲ್ಲರೂ ಅದನ್ನು ಸ್ವೀಕರಿಸಬೇಕು ಎಂದು ಶಾ ಹೇಳಿದರು.

ಉಡುಪಿಯ ಸರಕಾರಿ ಕಾಲೇಜಿನಲ್ಲಿನ ಸುಮಾರು 100 ಮುಸ್ಲಿಂ ಬಾಲಕಿಯರ ಪೈಕಿ ಆರು ಮಂದಿ ಹಿಜಾಬ್ ಹೆಸರಿನಲ್ಲಿ ವಿವಾದ ಸೃಷ್ಟಿಸಿದ ಬಳಿಕ , ಮತೀಯವಾದಿ ಗುಂಪು ಮತ್ತು ವಿಪಕ್ಷ ಕಾಂಗ್ರೆಸ್ ಕುಮ್ಮಕ್ಕಿನೊಂದಿಗೆ ಇದು ಹಲವೆಡೆ ವಿಸ್ತರಿಸಿ ರಾಜ್ಯದಲ್ಲಿ ಶಾಲಾ ಶಿಕ್ಷಣಕ್ಕೆ ಭಾರೀ ಅಡಚಣೆ ಉಂಟು ಮಾಡಿರುವುದಿಲ್ಲಿ ಉಲ್ಲೇಖನೀಯ.

ಇತ್ತೀಚಿನ ಸುದ್ದಿ

ಜಾಹೀರಾತು