2:38 AM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಹಿಜಾಬ್ ವಿವಾದವನ್ನು ಕಾಂಗ್ರೆಸ್ ರಾಜಕೀಯಗೊಳಿಸಲು ಯತ್ನಿಸುತ್ತಿದೆ: ಕೇಂದ್ರ ಗೃಹ ಸಚಿವ ಅಮಿತ್ ಶಾ ಆರೋಪ

21/02/2022, 23:49

ಹೊಸದಿಲ್ಲಿ(reporterkarnataka.com): ಹಿಜಾಬ್ ವಿವಾದವನ್ನು ಕಾಂಗ್ರೆಸ್ ಮತ್ತಿತರ ವಿಪಕ್ಷಗಳು ರಾಜಕೀಯಗೊಳಿಸಲು ನಡೆಸುವ ಯತ್ನ ಸಫಲವಾಗದು ಎಂದಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, ಎಲ್ಲ ವಿದ್ಯಾರ್ಥಿಗಳು -ಅವರು ಯಾವುದೇ ಜಾತಿ,ಮತ, ಧರ್ಮಕ್ಕೆ ಸೇರಿರಲಿ ಶಾಲಾ ಸಮವಸ್ತ್ರ ನಿಯಮವನ್ನು ಪಾಲಿಸುವುದು ಅತ್ಯಗತ್ಯ ಎಂಬುದು ನನ್ನ ಅಭಿಪ್ರಾಯ ಎಂದು ಹೇಳಿದ್ದಾರೆ. ಅವರು ಸಿಎನ್‌ಎನ್ ನ್ಯೂಸ್ ಗೆ ನೀಡಿದ ಸಂದರ್ಶನವೊಂದರಲ್ಲಿ ಕೇಳಲಾದ ಪ್ರಶ್ನೆಗೆ ಪ್ರತಿಕ್ರಿಯಿಸಿದರು.

ಶಾಲೆಗಳಲ್ಲಿ ಧರ್ಮ-ನಂಬಿಕೆಗಳಿಗೆ ಮೀರಿದ ನಡವಳಿಕೆ ವಿದ್ಯಾರ್ಥಿಗಳದಾಗಿರಬೇಕು. ಹಿಜಾಬ್ ಪ್ರಕರಣವೀಗ ನ್ಯಾಯಾಲಯದಲ್ಲಿದೆ. ಇದನ್ನು ಎಲ್ಲರೂ ಒಪ್ಪಬೇಕು. ತೀರ್ಪು ಬರುವವರೆಗೂ ನನ್ನ ವೈಯಕ್ತಿಕ ಅಭಿಪ್ರಾಯವೆಂದರೆ, ವಿದ್ಯಾರ್ಥಿಗಳು ಯಾವುದೇ ನಂಬಿಕೆ, ಮತ, ಧರ್ಮಕ್ಕೆ ಸೇರಿದ್ದರೂ ಶಾಲಾ ಸಮವಸ್ತ್ರ ನಿಯಮಕ್ಕೆ ಬದ್ಧರಾಗಿರಬೇಕು .ನ್ಯಾಯಾಲಯ ತೀರ್ಪು ನೀಡಿದ ಅನಂತರ ಎಲ್ಲರೂ ಅದನ್ನು ಸ್ವೀಕರಿಸಬೇಕು ಎಂದು ಶಾ ಹೇಳಿದರು.

ಉಡುಪಿಯ ಸರಕಾರಿ ಕಾಲೇಜಿನಲ್ಲಿನ ಸುಮಾರು 100 ಮುಸ್ಲಿಂ ಬಾಲಕಿಯರ ಪೈಕಿ ಆರು ಮಂದಿ ಹಿಜಾಬ್ ಹೆಸರಿನಲ್ಲಿ ವಿವಾದ ಸೃಷ್ಟಿಸಿದ ಬಳಿಕ , ಮತೀಯವಾದಿ ಗುಂಪು ಮತ್ತು ವಿಪಕ್ಷ ಕಾಂಗ್ರೆಸ್ ಕುಮ್ಮಕ್ಕಿನೊಂದಿಗೆ ಇದು ಹಲವೆಡೆ ವಿಸ್ತರಿಸಿ ರಾಜ್ಯದಲ್ಲಿ ಶಾಲಾ ಶಿಕ್ಷಣಕ್ಕೆ ಭಾರೀ ಅಡಚಣೆ ಉಂಟು ಮಾಡಿರುವುದಿಲ್ಲಿ ಉಲ್ಲೇಖನೀಯ.

ಇತ್ತೀಚಿನ ಸುದ್ದಿ

ಜಾಹೀರಾತು