12:29 PM Monday29 - June 2026
ಬ್ರೇಕಿಂಗ್ ನ್ಯೂಸ್
2 ದಿನಗಳ ರಾಜ್ಯ ಪ್ರವಾಸ ಮುಗಿಸಿದ ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರಿಗೆ… ಆರೆಸ್ಸೆಸ್ ವಿರುದ್ಧ ಪೋಸ್ಟ್ : ಗೃಹ ಸಚಿವ ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಕೋರ್ಟ್… ಕ್ರಿಪ್ಟೋ ಹೂಡಿಕೆ ಹೆಸರಿನಲ್ಲಿ ಕೋಟ್ಯಂತರ ರೂ. ವಂಚನೆ ಆರೋಪ: ತೀರ್ಥಹಳ್ಳಿ ಕಾಲೇಜು ಪ್ರಾಧ್ಯಾಪಕ… ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ತೂರಿದ ಪ್ರಕರಣ | 4 ಮಂದಿ… ಮುಂಬೈ | ಮೊಹರಂ ವೇಳೆ ಸಾಮೂಹಿಕ ವಿಷಪ್ರಾಶನಕ್ಕೆ ಸಂಚು: 14,900 ಕ್ಯಾಪ್ಸುಲ್‌ ವಶಕ್ಕೆ;… ತೀರ್ಥಹಳ್ಳಿ: ಪಲ್ಸ್ ಪೋಲಿಯೋ ಅಭಿಯಾನಕ್ಕೆ ಶಾಸಕ ಆರಗ ಜ್ಞಾನೇಂದ್ರ ಚಾಲನೆ ಟ್ರೆಕ್ಕಿಂಗ್ ವೇಳೆ ದುರಂತ: ಹೃದಯಾಘಾತದಿಂದ ಚಿತ್ರ ನಿರ್ಮಾಪಕ ಭಾ ಮಾ ಹರೀಶ್ ಪುತ್ರ… ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ…

ಇತ್ತೀಚಿನ ಸುದ್ದಿ

ಬಾಳೆಬೈಲು – ಕುರುವಳ್ಳಿ ಬೈಪಾಸ್ ರಸ್ತೆಯಲ್ಲಿ ಕುಸಿಯುತ್ತಿರುವ ಗುಡ್ಡ: ಬ್ಯಾರಿಕೆಡ್ ಹಾಕಿರುವ ಪೊಲೀಸರು

28/07/2025, 18:31

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.ಕಂ

ಕುರುವಳ್ಳಿ – ಬಾಳೇಬೈಲಿನ ರಾಷ್ಟ್ರೀಯ ಹೆದ್ದಾರಿ 169ಎ ಮಾರ್ಗದಲ್ಲಿ ನಿರ್ಮಿಸಿರುವ 56 ಕೋಟಿ ರೂ .ವೆಚ್ಚದ ತುಂಗಾ ಸೇತುವೆಯ ಬೈಪಾಸ್ ರಸ್ತೆಯಲ್ಲಿ ಈಗ ಮತ್ತೊಮ್ಮೆ ಗುಡ್ಡ ಕುಸಿಯುತ್ತಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸರು ಬ್ಯಾರಿಕೇಡ್ ಹಾಕಿದ್ದಾರೆ.


56 ಕೋಟಿ ವೆಚ್ಚದಲ್ಲಿ ಹೊಸ ತುಂಗಾ ಸೇತುವೆ ಹಾಗೂ ಬೈಪಾಸ್ ರಸ್ತೆ ನಿರ್ಮಿಸಲಾಗಿತ್ತು. ಈಗ ಅತಿಯಾದ ಮಳೆಯಿಂದ ಗುಡ್ಡ ಜರಿಯುತ್ತಿದ್ದ ಮುನ್ನೆಚ್ಚರಿಕೆಯಿಂದ ತೀರ್ಥಹಳ್ಳಿ ಪೊಲೀಸರು ಬ್ಯಾರಿಕೆಡ್ ಅಳವಡಿಕೆ ಮಾಡಿದ್ದಾರೆ. ಈಗಾಗಲೇ ವಾಹನಗಳು ಸಂಚರಿಸುತ್ತಿದ್ದರು ಸಹ ತೀವ್ರ ಮಟ್ಟದಲ್ಲಿ ಗುಡ್ಡ ಕುಸಿದರೆ ಬೈಪಾಸ್ ರಸ್ತೆ ಮತ್ತೊಮ್ಮೆ ನಿರ್ಬಂಧಿಸಬೇಕಾಗುತ್ತದೆ. ಕಳೆದ ವರ್ಷ ಎರಡು ಬಾರಿ ರಸ್ತೆ ಬಂದ್ ಮಾಡಲಾಗಿತ್ತು.
ಕಳೆದ ವರ್ಷ ಉದ್ಘಾಟನೆಗೊಂಡು ಕೆಲವೇ ತಿಂಗಳ ಒಳಗಾಗಿ ತಡೆಗೋಡೆ ಕುಸಿದು ಬಿದ್ದಿತ್ತು. ನಂತರ ಎತ್ತರದಲ್ಲಿ ತಡೆಗೋಡೆ ನಿರ್ಮಾಣ ಮಾಡಿ ಗುಡ್ಡ ಜರಿಯಾದಂತೆ ಮಾಡಲಾಗಿತ್ತು. ಆದರೆ ಈಗ ಮತ್ತೆ ಜರಿಯುತ್ತಿದೆ. ಪ್ರತಿ ವರ್ಷ ಗುಡ್ಡ ಕುಸಿಯುತ್ತಿದ್ದರೆ ಇಂಜಿನಿಯರ್ ಗಳು ಮಾಡಿದ ಕೆಲಸವಾದರೂ ಏನು? ಎಂಬುದೇ ಯಕ್ಷ ಪ್ರೆಶ್ನೆಯಾಗಿ ಉಳಿದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು