10:04 PM Sunday3 - August 2025
ಬ್ರೇಕಿಂಗ್ ನ್ಯೂಸ್
Kodagu | ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ: ರ್‍ಯಾಂಬುಟನ್ ಹಣ್ಣು ಮಾರಾಟಕ್ಕೆ ನಿರ್ಬಂಧ; ವ್ಯಾಪಾರಸ್ಥರ… SIT | ಧರ್ಮಸ್ಥಳ ಪ್ರಕರಣ: ದೂರು ನೀಡಲು ಮತ್ತೊಬ್ಬ ದೂರುದಾರ ಎಸ್ಐಟಿ ಕಚೇರಿಗೆ… ಸುಹಾಸ್ ಶೆಟ್ಟಿ ಮರ್ಡರ್ ಕೇಸ್: ಕಾಫಿನಾಡು ಕಳಸದಲ್ಲಿ ಎನ್ಐಎ ಅಧಿಕಾರಿಗಳಿಂದ ಮಾಹಿತಿ ಸಂಗ್ರಹ Bangaluru | ನಮ್ಮ ಮೆಟ್ರೋದಲ್ಲಿ ಮೊದಲ ಬಾರಿಗೆ ಯಕೃತ್‌ ರವಾನೆ: ಸ್ಪರ್ಶ್‌ ಆಸ್ಪತ್ರೆಯಲ್ಲಿ… ರಾಹುಲ್ ಗಾಂಧಿ ನೀಡಿರುವ ‘ಮತ ಕಳ್ಳತನ’ ಪದವು ಭಾರತೀಯ ರಾಜಕೀಯ ಶಬ್ದಕೋಶಕ್ಕೆ ಸೇರ್ಪಡೆ:… ಸ್ಪಾಟ್ 1ರಲ್ಲಿ ದೊರೆತ ಡೆಬಿಟ್, ಪಾನ್ ಕಾರ್ಡ್ ವಾರಸುದಾರರು ಪತ್ತೆ; ಧರ್ಮಸ್ಥಳ ಪ್ರಕರಣಕ್ಕೂ… ಚುನಾವಣೆಯಲ್ಲಿ ಅಕ್ರಮಗಳನ್ನು ಪರಿಚಯಿಸಿದ್ದೇ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆರೋಪ ಮತಗಳ್ಳತನ ಬಗ್ಗೆ ರಾಹುಲ್ ಗಾಂಧಿಯವರ ಬಳಿ ಸಾಕ್ಷಿ ಇದೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಮತಗಳ್ಳತನದ ವಿರುದ್ಧ ರಾಹುಲ್ ನೇತೃತ್ವದಲ್ಲಿ ಆ.5ರಂದು ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ: ಡಿಸಿಎಂ… ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ಮುಂದುವರಿಯಲಿರುವ ಉತ್ಖನನ ಪ್ರಕ್ರಿಯೆ; ತಾತ್ಕಾಲಿಕ ಶೆಡ್ ನಿರ್ಮಾಣ

ಇತ್ತೀಚಿನ ಸುದ್ದಿ

ಹಿಂದೂ ಭಾವನೆಗಳಿಗೆ ಧಕ್ಕೆ; ಶಿಕ್ಷಕಿ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ತೀವ್ರ ಹೋರಾಟ: ಶಾಸಕ ಡಾ. ಭರತ್ ಶೆಟ್ಟಿ ಎಚ್ಚರಿಕೆ

11/02/2024, 20:26

ಮಂಗಳೂರು(reporterkarnataka.com): ಕ್ರಿಶ್ಚಿಯನ್ ಮಿಷಿನರಿ ಶಾಲೆಗಳಲ್ಲಿ ಹಿಂದೂ ವಿರೋಧಿ ಭಾವನೆ ವ್ಯಕ್ತವಾಗುತ್ತಿರುವುದು ಇದೇ ಮೊದಲೇನಲ್ಲ.
ಹಿಂದೂ ಸಾಂಪ್ರದಾಯಿಕ ಹೂ ಮುಡಿಯಲು, ಬಳೆ ಹಾಕಲು, ತಿಲಕ ಹಾಕಲು ಹೀಗೆ ಹಲವು ಆಚಾರಗಳನ್ನು ನಮ್ಮ ಹೆಣ್ಮಕಳ್ಳಿಂದ ದೂರ ಮಾಡಿದ ಕ್ರಿಶ್ಚಿಯನ್ ಮಿಷನರಿಗಳು ಇದೀಗ ರಾಮ ಮಂದಿರದ ವಿರುದ್ದದ ದ್ವೇಷ ಭಾವನೆ ಪಸರಿಸಲು ಹೂಡುತ್ತಿರುವ ಷಡ್ಯಂತ್ರ ಸಹಿಸಲು ಅಸಾಧ್ಯ.
ಸಂಬಂಧಪಟ್ಟ ಶಾಲೆಯ ಶಿಕ್ಷಕಿ ವಿರುದ್ದ ಆಡಳಿತ ಮಂಡಳಿ ಕ್ರಮ ಜರುಗಿಸ ಇಲ್ಲದಿದ್ದಲ್ಲಿ ತೀವ್ರ ಹೋರಾಟ ಅನಿವಾರ್ಯ ಎಂದು ಡಾ.ಭರತ್ ಶೆಟ್ಟಿ ವೈ.ಎಚ್ಚರಿಸಿದ್ದಾರೆ.
ನಗರದ ಖಾಸಗಿ ಶಾಲೆಯ ಶಿಕ್ಷಕಿ ಶ್ರೀರಾಮ ಹಾಗೂ ಮಂದಿರದ ವಿರುದ್ದ ವಿದ್ಯಾರ್ಥಿಗಳ ಮುಂದೆ ಆಡಿದರು ಎನ್ನಲಾದ ಹಿಂದೂ ಭಾವನೆಗೆ ಧಕ್ಕೆ ತರುವ ಮಾತುಗಳನ್ನು ಶಾಸಕರು‌ ಖಂಡಿಸಿದ್ದಾರೆ.
ಇಂತಹ ಹಿಂದೂ ವಿರೋಧಿ ಶಾಲೆಗಳನ್ನು ತ್ಯಜಿಸಿ ,ನಮ್ಮ ಸಂಪ್ರದಾಯಕ್ಕೆ ಮನ್ನಣೆ ನೀಡುವ ಶಾಲಾ, ಕಾಲೇಜುಗಳಿಗೆ ಸೇರಿ ವಿದ್ಯಾಭ್ಯಾಸ ಮಾಡುವ ಬಗ್ಗೆ ಒಮ್ಮತದ ಅಭಿಪ್ರಾಯ ಮೂಡಬೇಕಿದೆ.ಈ ಬಗ್ಗೆ ಪೋಷಕರು ಚಿಂತಿಸಲು ಇದು ಸಕಾಲ ಎಂದು ಡಾ.ಭರತ್ ಶೆಟ್ಟಿ ವೈ ಹೇಳಿದ್ದಾರೆ.
ಕೃಷ್ಣಾಪುರ ಶಾಲೆಯಲ್ಲಿ ರಕ್ಷಾ ಬಂಧನ ಕಿತ್ತು ಎಸೆಯಲಾಯಿತು.ಇದೀಗ ರಾಮನ ಕುರಿತಂತೆ ನಿಂದನೆ ಸಹಿಸಲು ಅಸಾಧ್ಯ.ಇದೇ ಬಗ್ಗೆ ಜೀಸಸ್ ಹಾಗೂ ಅವರ ಮೂರ್ತಿ ಪೂಜೆಯ ಬಗ್ಗೆ ಮಾತನಾಡಿದರೆ ಇಷ್ಟರವರೆಗೆ ಡೋಂಗಿ ಜಾತ್ಯತೀತ ಹೋರಾಟಗಾರರು ಬೀದಿಗೆ ಬರುತ್ತಿದ್ದರು. ಕಾಂಗ್ರೆಸ್ ಪಕ್ಷದ ನಾಯಕರೂ ಕೂಡ ಮೌನ ವಹಿಸಿದ್ದು, ಹಿಂದೂ ವಿರೋಧಿ ಭಾವನೆಯನ್ನು ತೋರಿಸಿದ್ದಾರೆ ಎಂದು ಟೀಕಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು