2:11 AM Monday22 - September 2025
ಬ್ರೇಕಿಂಗ್ ನ್ಯೂಸ್
ಮುಂದಿನ ಒಲಂಪಿಕ್ಸ್ ಪದಕ ವಿಜೇತರಿಗೆ ಸರ್ಕಾರದಿಂದ 6 ಕೋಟಿ ನಗದು ಬಹುಮಾನ: ಮುಖ್ಯಮಂತ್ರಿ… ಜಿಎಸ್ ಟಿ ಜಾರಿ ಮಾಡಿದ್ದೂ ಮೋದಿ, ಜಿಎಸ್ ಟಿ ಹೆಚ್ಚೆಚ್ಚು ವಿಧಿಸಿದ್ದೂ ಮೋದಿಯವರೇ,… ಅಂತಾರಾಷ್ಟ್ರೀಯ ಬಾಲ್ಯ ಕ್ಯಾನ್ಸರ್ ಜಾಗೃತಿ: ಬೆಂಗಳೂರು ಇಸ್ಕಾನ್ ದೇವಾಲಯಕ್ಕೆ ಚಿನ್ನದ ಬಣ್ಣದ ಬೆಳಕು ನವೆಂಬರ್ ನಿಂದ ಮಾಹಿತಿ ಹಕ್ಕು ಅದಾಲತ್: ಮಾಹಿತಿ ಹಕ್ಕು ಅರ್ಜಿಗಳನ್ನು ಶೂನ್ಯಕ್ಕಿಳಿಸಲು ಗುರಿ ಪಿಡಿಒ ಜೇಷ್ಠಾತಾ ಪಟ್ಟಿ ನ್ಯಾಯಸಮ್ಮತವಾಗಿ ಅಂತಿಮಗೊಳಿಸಲು ಸೂಕ್ತ ಕ್ರಮ: ಸಚಿವ ಪ್ರಿಯಾಂಕ್‌ ಖರ್ಗೆ ಮಂಗಳೂರಿನಲ್ಲಿ ಧರ್ಮದ ಹೆಸರಲ್ಲಿ ಜೈಲಿಗೆ ಹೋದವರು, ಕೊಲೆ ಆದವರೆಲ್ಲಾ ಹಿಂದುಳಿದವರೇ ಆಗಿದ್ದಾರೆ: ಸಿಎಂ… ವಿರಾಜಪೇಟೆ ಆರೆಂಜ್ ಸ್ಪಾ -ಬ್ಯೂಟಿ ಪಾರ್ಲರ್ ದಾಳಿ ಪ್ರಕರಣ: ನಾಲ್ವರು ಪ್ರಮುಖ ಆರೋಪಿಗಳ… Kodagu | ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ದಾರುಣ ಸಾವು ಮಡಿಕೇರಿ ನಗರಸಭೆಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ: ಸಾರ್ವಜನಿಕರ ದೂರಿಗೆ ಸ್ಪಂದನೆ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್: ತಡೆ ಕೋರಿ ಸಲ್ಲಿಸಿದ ಅರ್ಜಿ ಸುಪ್ರೀಂಕೋರ್ಟ್…

ಇತ್ತೀಚಿನ ಸುದ್ದಿ

ಹಿಂದೂಗಳನ್ನು ದುರ್ಬಲಗೊಳಿಸುವ ಕಾಂಗ್ರೆಸ್ ನೀತಿಯಿಂದ ಪಾಕಿಸ್ಥಾನ, ಅಪಘಾನಿಸ್ಥಾನ ನಿರ್ಮಾಣ: ಯತೀಂದ್ರ ಸಿದ್ದರಾಮಯ್ಯ ಹೇಳಿಕೆಗೆ ಸಿ.ಟಿ.ರವಿ ತಿರುಗೇಟು

04/01/2024, 10:58

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಹಿಂದೂಗಳನ್ನು ದುರ್ಬಲ ಗೊಳಿಸುವ ಕಾಂಗ್ರೆಸ್ ನೀತಿಯಿಂದ ಪಾಕಿಸ್ಥಾನ, ಅಪಘಾನಿಸ್ರಾನ ನಿರ್ಮಾಣಕ್ಕೆ ಕಾರಣವಾಗುತ್ತದೆ ಎಂದು ಮಾಜಿ ಶಾಸಕ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರಯತೀಂದ್ರ ಸಿದ್ದರಾಮಯ್ಯ ಹೇಳಿಕೆಗೆ ಬಿಜೆಪಿ ನಾಯಕ ಸಿ.ಟಿ.ರವಿ ತಿರುಗೇಟು ನೀಡಿದ್ದಾರೆ.
ಚಿಕ್ಕಮಗಳೂರಿನಲ್ಲಿ ಮಾಧ್ಯಮ ಜತೆ ಮಾತನಾಡಿದ ಅವರು, ಇತಿಹಾಸ ಅರಿಯದವನು ಇತಿಹಾಸ ಸೃಷ್ಟಿಸಲಾರ. ಒಂದು ಕಾಲದಲ್ಲಿ ಪಾಕಿಸ್ತಾನ, ಅಫ್ಘಾನಿಸ್ತಾನ, ಬಾಂಗ್ಲಾದೇಶ ಅಖಂಡ ಭಾರತದ ಭಾಗವಾಗಿತ್ತು. ಅಲ್ಲಿ ನೂರಕ್ಕೆ ನೂರು ಹಿಂದೂಗಳಿದ್ದರು, ಗಾಂಧಾರಿಯ ತವರು ಮನೆ ಆಫ್ಘಾನಿಸ್ತಾನ ಆಗಿತ್ತು ಎಂದರು.
ಭಾರತದಲ್ಲಿ ಹಿಂದೂಗಳು ಕಡಿಮೆ ಆದಾಗ ಅದು ಮೊಗಲ್ ಸ್ಥಾನ ಅಥವಾ ಪಾಕಿಸ್ಥಾನ ಆಗುತ್ತದೆ. ಹಿಂದೂಗಳನ್ನು ಒಡೆದಾಳುವ ನೀತಿ ಆಫ್ಘಾನಿಸ್ತಾನ, ನಿರ್ಮಾಣಕ್ಕೆ ಕಾರಣವಾಗುತ್ತೆ. ಹಿಂದೂಗಳು ಒಗ್ಗಟ್ಟಾಗಿದ್ದರೆ ಪಾಕಿಸ್ಥಾನ ಅನ್ನೋ, ವಿಚಾರವೇ ತಲೆ ಎತ್ತುವುದಿಲ್ಲ ಎಂದು ಅವರು ಹೇಳಿದರು.
ಕಾಂಗ್ರೆಸ್ ನದ್ದು ಎಸ್.ಡಿ.ಪಿ.ಐ, ಪಿ ಎಫ್.ಐ ಬೆಂಬಲಿಸುವ ನೀತಿ. ಪಾಕಿಸ್ಥಾನ ನಿರ್ಮಾಣಕ್ಕೆ ಕಾರಣವಾಗುತ್ತೀರಿ. ನೀವು ಮತ್ತು ನಿಮ್ಮ ಮಕ್ಕಳು ಸುರಕ್ಷಿತವಾಗಿ ಇರಬೇಕಾದರೆ, ಕಾಂಗ್ರೆಸ್ ಕೆಟ್ಟ ನೀತಿ ಮಾಡಬಾರದು. ಹಿಂದೂ ಬಹು ಸಂಖ್ಯಾತನಾಗಿದ್ದರೆ, ಭಾರತ, ಸಂವಿಧಾನ ಉಳಿಯುತ್ತೆ. ಹಿಂದೂ ಅಲ್ಪ ಸಂಖ್ಯಾತನಾದರೆ ಭಾರತ, ಸಂವಿಧಾನ ಉಳಿಯುವುದಿಲ್ಲ. ಹಿಂದೂ ರಾಷ್ಟ್ರವಾದರೆ ಆಫ್ಘಾನಿಸ್ತಾನ ಆಗಲು ಜಾಗವೇ ಇರಲ್ಲ. ನಿಮ್ಮ ಮನಸ್ಸಿನಿಂದ ತಾಲಿಬಾನ್ ಚಿಂತನೆ ತೆಗೆದು ಹಾಕಿ ಎಂದು ಸಿ.ಟಿ.ರವಿ ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು