8:16 AM Thursday30 - April 2026
ಬ್ರೇಕಿಂಗ್ ನ್ಯೂಸ್
ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು

ಇತ್ತೀಚಿನ ಸುದ್ದಿ

ಹಿಂದಿ ಕಲಿತು ಬನ್ನಿ ಎಂದ ಯೂನಿಯನ್ ಬ್ಯಾಂಕ್ ಮೆನೇಜರ್ ಗೆ ತರಾಟೆ: ಕನ್ನಡಪರ ಸಂಘಟನೆಗಳಿಂದ ಭಾರಿ ಪ್ರತಿಭಟನೆ

02/09/2021, 10:29

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಅಥಣಿ ಪಟ್ಟಣದ ಯೂನಿಯನ್ (ಕಾರ್ಪೋರೇಷನ್) ಬ್ಯಾಂಕ್ ಮ್ಯಾನೇಜರ್ ಕನ್ನಡದಲ್ಲಿ ಮಾತನಾಡದೆ ಕನ್ನಡಿಗರಿಗೆ ಹಿಂದಿ ಕಲಿತುಬನ್ನಿ ಎಂದು ಹೇಳುವ ಮೂಲಕ ಕನ್ನಡಪರ ಸಂಘಟನೆಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ.  

ಕನ್ನಡ ಮಾತನಾಡದ ಮತ್ತು ಕನ್ನಡಿಗರಿಗೆ ಅವಮಾನ ಮಾಡಿದ ಬ್ಯಾಂಕ್ ಮ್ಯಾನೆಜರ್ ಅವರನ್ನ ತಕ್ಷಣ ವರ್ಗಾವಣೆ ಮಾಡಿ ಕನ್ನಡಿಗ ಅಧಿಕಾಯನ್ನ ನೇಮಿಸುವಂತೆ ಆಗ್ರಹಿಸಿ  ಕನ್ನಡಪರ ಸಂಘಟನೆಗಳು ಯೂನಿಯನ್ ಬ್ಯಾಂಕ್ ಎದುರು ಪ್ರತಿಭಟನೆ ನಡೆಸಿದರು.

ಇನ್ನೂ ಪ್ರತಿಭಟನಾ ಸ್ಥಳಕ್ಕೆ ಅಥಣಿ ಪಿಎಸ್ಐ ಕುಮಾರ್ ಹಾಡಕರ್ ಆಗಮಿಸಿ ಬ್ಯಾಂಕ್ ಮ್ಯಾನೇಜರ್ ಮತ್ತು ಸಿಬ್ಬಂದಿಗಳಿಗೆ ಕನ್ನಡದಲ್ಲಿ ವಿಚರಣಾ ಕೌಂಟರ್ ಮಾಡುವಂತೆ ತಿಳಿಸಿ ಕನ್ನಡ ಭಾಷೆಯಲ್ಲಿ ವ್ಯವಹರಿಸುವಂತೆ ಹೇಳಿ ಪರಿಸ್ಥಿತಿ ತಿಳಿಗೊಳಿಸಿದರು. 

ಇದೆ ಸಂದರ್ಭದಲ್ಲಿ ಕರವೇ ಅಧ್ಯಕ್ಷ ಅಣ್ಣಾಸಾಬ ತೇಲಸಂಗ ಮಾತನಾಡಿ, ಕನ್ನಡಿಗರಿಗೆ ಅವಮಾನ ಮಾಡಿದ ಬ್ಯಾಂಕ್ ಮ್ಯಾನೇಜರ್ ಅವರನ್ನ ತಕ್ಷಣ ವರ್ಗಾವಣೆ ಮಾಡಬೇಕು ಮತ್ತು ಪ್ರತಿ ಬ್ಯಾಂಕ್ ಗಳಲ್ಲಿ ಶೇಕಡಾ ಅರವತ್ತರಷ್ಟು ಕನ್ನಡಿಗ ಸಿಬ್ಬಂದಿಗಳನ್ನ ನೇಮಿಸುವಂತೆ ರಾಜ್ಯ ಸರ್ಕಾರವನ್ನ ಆಗ್ರಹಿಸಿದರು.

ಇನ್ನೂ ಬ್ಯಾಂಕ್ ಮ್ಯಾನೇಜರ್ ಜೈ ಕರ್ನಾಟಕ ಎಂದು ಘೋಷಣೆ ಕೂಗಿ ಆದಷ್ಟು ಬೇಗನೆ ಕನ್ನಡ ಭಾಷೆ ಕಲಿಯುವುದಾಗಿ ತಿಳಿಸಿ ಕ್ಷಮೆ ಕೇಳಿದ್ದರಿಂದ ಪ್ರತಿಭಟನೆ ಹಿಂಪಡೆಯಲಾಯಿತು

ಇದೇ ಸಂದರ್ಭದಲ್ಲಿ ಕನ್ನಡಪರ ಸಂಘಟನೆಯ ಪದಾಧಿಕಾರಿಗಳಾದ ದೀಪಕ ಬುರ್ಲಿ, ಚಿದಾನಂದ ಶೇಗುಣಶಿ, ಶಶಿಧರ ಬರ್ಲಿ, ಜಗನ್ನಾಥ ಬಾಮನೆ, ದೀಪಕ್ ಸಿಂಧೆ, ಮಹಾಂತೇಶ ಬಾಡಗಿ, ಸೇರಿದಂತೆ ಹಲವರು ಉಪಸ್ಥಿತರಿದ್ದರು

ಇತ್ತೀಚಿನ ಸುದ್ದಿ

ಜಾಹೀರಾತು