6:42 AM Saturday12 - September 2026
ಬ್ರೇಕಿಂಗ್ ನ್ಯೂಸ್
ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;…

ಇತ್ತೀಚಿನ ಸುದ್ದಿ

ಹಿಂದಿ ಕಲಿತು ಬನ್ನಿ ಎಂದ ಯೂನಿಯನ್ ಬ್ಯಾಂಕ್ ಮೆನೇಜರ್ ಗೆ ತರಾಟೆ: ಕನ್ನಡಪರ ಸಂಘಟನೆಗಳಿಂದ ಭಾರಿ ಪ್ರತಿಭಟನೆ

02/09/2021, 10:29

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಅಥಣಿ ಪಟ್ಟಣದ ಯೂನಿಯನ್ (ಕಾರ್ಪೋರೇಷನ್) ಬ್ಯಾಂಕ್ ಮ್ಯಾನೇಜರ್ ಕನ್ನಡದಲ್ಲಿ ಮಾತನಾಡದೆ ಕನ್ನಡಿಗರಿಗೆ ಹಿಂದಿ ಕಲಿತುಬನ್ನಿ ಎಂದು ಹೇಳುವ ಮೂಲಕ ಕನ್ನಡಪರ ಸಂಘಟನೆಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ.  

ಕನ್ನಡ ಮಾತನಾಡದ ಮತ್ತು ಕನ್ನಡಿಗರಿಗೆ ಅವಮಾನ ಮಾಡಿದ ಬ್ಯಾಂಕ್ ಮ್ಯಾನೆಜರ್ ಅವರನ್ನ ತಕ್ಷಣ ವರ್ಗಾವಣೆ ಮಾಡಿ ಕನ್ನಡಿಗ ಅಧಿಕಾಯನ್ನ ನೇಮಿಸುವಂತೆ ಆಗ್ರಹಿಸಿ  ಕನ್ನಡಪರ ಸಂಘಟನೆಗಳು ಯೂನಿಯನ್ ಬ್ಯಾಂಕ್ ಎದುರು ಪ್ರತಿಭಟನೆ ನಡೆಸಿದರು.

ಇನ್ನೂ ಪ್ರತಿಭಟನಾ ಸ್ಥಳಕ್ಕೆ ಅಥಣಿ ಪಿಎಸ್ಐ ಕುಮಾರ್ ಹಾಡಕರ್ ಆಗಮಿಸಿ ಬ್ಯಾಂಕ್ ಮ್ಯಾನೇಜರ್ ಮತ್ತು ಸಿಬ್ಬಂದಿಗಳಿಗೆ ಕನ್ನಡದಲ್ಲಿ ವಿಚರಣಾ ಕೌಂಟರ್ ಮಾಡುವಂತೆ ತಿಳಿಸಿ ಕನ್ನಡ ಭಾಷೆಯಲ್ಲಿ ವ್ಯವಹರಿಸುವಂತೆ ಹೇಳಿ ಪರಿಸ್ಥಿತಿ ತಿಳಿಗೊಳಿಸಿದರು. 

ಇದೆ ಸಂದರ್ಭದಲ್ಲಿ ಕರವೇ ಅಧ್ಯಕ್ಷ ಅಣ್ಣಾಸಾಬ ತೇಲಸಂಗ ಮಾತನಾಡಿ, ಕನ್ನಡಿಗರಿಗೆ ಅವಮಾನ ಮಾಡಿದ ಬ್ಯಾಂಕ್ ಮ್ಯಾನೇಜರ್ ಅವರನ್ನ ತಕ್ಷಣ ವರ್ಗಾವಣೆ ಮಾಡಬೇಕು ಮತ್ತು ಪ್ರತಿ ಬ್ಯಾಂಕ್ ಗಳಲ್ಲಿ ಶೇಕಡಾ ಅರವತ್ತರಷ್ಟು ಕನ್ನಡಿಗ ಸಿಬ್ಬಂದಿಗಳನ್ನ ನೇಮಿಸುವಂತೆ ರಾಜ್ಯ ಸರ್ಕಾರವನ್ನ ಆಗ್ರಹಿಸಿದರು.

ಇನ್ನೂ ಬ್ಯಾಂಕ್ ಮ್ಯಾನೇಜರ್ ಜೈ ಕರ್ನಾಟಕ ಎಂದು ಘೋಷಣೆ ಕೂಗಿ ಆದಷ್ಟು ಬೇಗನೆ ಕನ್ನಡ ಭಾಷೆ ಕಲಿಯುವುದಾಗಿ ತಿಳಿಸಿ ಕ್ಷಮೆ ಕೇಳಿದ್ದರಿಂದ ಪ್ರತಿಭಟನೆ ಹಿಂಪಡೆಯಲಾಯಿತು

ಇದೇ ಸಂದರ್ಭದಲ್ಲಿ ಕನ್ನಡಪರ ಸಂಘಟನೆಯ ಪದಾಧಿಕಾರಿಗಳಾದ ದೀಪಕ ಬುರ್ಲಿ, ಚಿದಾನಂದ ಶೇಗುಣಶಿ, ಶಶಿಧರ ಬರ್ಲಿ, ಜಗನ್ನಾಥ ಬಾಮನೆ, ದೀಪಕ್ ಸಿಂಧೆ, ಮಹಾಂತೇಶ ಬಾಡಗಿ, ಸೇರಿದಂತೆ ಹಲವರು ಉಪಸ್ಥಿತರಿದ್ದರು

ಇತ್ತೀಚಿನ ಸುದ್ದಿ

ಜಾಹೀರಾತು