11:20 PM Tuesday22 - April 2025
ಬ್ರೇಕಿಂಗ್ ನ್ಯೂಸ್
ಕಾಶ್ಮೀರದಲ್ಲಿ ಕನ್ನಡಿಗರ ಮೇಲೆ ಉಗ್ರರ ದಾಳಿಗೆ ಶಿವಮೊಗ್ಗದ ಉದ್ಯಮಿ ಸಾವು: ಮುಖ್ಯಮಂತ್ರಿ ತುರ್ತುಸಭೆ;… Terrorist Attack | ಕಾಶ್ಮೀರದಲ್ಲಿ ಮತ್ತೆ ಉಗ್ರರ ಅಟ್ಟಹಾಸ: ಭೀಕರ ನರಮೇಧಕ್ಕೆ ಸಾವಿನ… Mandya | ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ವರದಿ ಸರಿಯಿಲ್ಲವೆನ್ನಲು ಬಿಜೆಪಿಗೆ ನೈತಿಕ… ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ಉಗ್ರರ ದಾಳಿ: ಶಿವಮೊಗ್ಗದ ಉದ್ಯಮಿ ಸಹಿತ 5ಕ್ಕೂ ಹೆಚ್ಚು… Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ…

ಇತ್ತೀಚಿನ ಸುದ್ದಿ

ಹಿಂದಿಯೇತರ ಭಾಷೆಗಳ ಉಳಿವಿಗಾಗಿ ಕೇಂದ್ರ ಸರಕಾರ ಭಾಷಾ ನಿರ್ದೇಶಕರನ್ನು ನೇಮಿಸಲಿ: ಡಾ.ಪುರುಷೋತ್ತಮ ಬಿಳಿಮಲೆ

12/12/2024, 22:25

*ದಕ್ಷಿಣ ಭಾರತದ ರಾಜ್ಯಗಳು ಸಂಘಟಿತರಾಗಲು ಕರ್ನಾಟಕವೇ ಮುಂದಡಿ ಇಡಲು ಮುಖ್ಯಮಂತ್ರಿಗಳಿಗೆ ಆಗ್ರಹ*

ಬೆಂಗಳೂರು(reporterkarnataka.com):ದೇಶಾದ್ಯಂತ ಹಿಂದಿ ಹೇರಿಕೆಯ ಪ್ರಾಬಲ್ಯ ಹೆಚ್ಚುತ್ತಿರುವ ಈ ದಿನಗಳಲ್ಲಿ ಇದನ್ನು ಸಮರ್ಥವಾಗಿ ಎದುರಿಸಲು ದಕ್ಷಿಣ ಭಾರತೀಯ ರಾಜ್ಯಗಳು ಸಂಘಟಿತರಾಗಬೇಕಿದೆ. ಸಾಂವಿಧಾನಿಕ ಅವಕಾಶವನ್ನು ಸಮರ್ಪಕವಾಗಿ ಬಳಸಿಕೊಳ್ಳುವಲ್ಲಿ ಈ ರಾಜ್ಯಗಳು ರಾಜಕೀಯ ಇಚ್ಛಾಶಕ್ತಿಯನ್ನು ಪ್ರದರ್ಶಿಸಬೇಕಿದ್ದು, ಕರ್ನಾಟಕದಿಂದಲೇ ಈ ಹೋರಾಟ ಆರಂಭವಾಗಬೇಕಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರ ಡಾ.ಪುರುಷೋತ್ತಮ ಬಿಳಿಮಲೆ ಅಭಿಪ್ರಾಯಿಸಿದ್ದಾರೆ.
ಈ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪತ್ರ ಬರೆದಿರುವ ಅವರು, ಸಂವಿಧಾನದ 350 (ಬಿ) ಅನುಚ್ಛೇದವು ಭಾಷಾ ಸಮಸ್ಯೆಗಳನ್ನು ಪರಿಹರಿಸಲು ಕೇಂದ್ರ ಸರ್ಕಾರಕ್ಕೆ ಭಾಷಾ ನಿರ್ದೇಶಕರನ್ನು ನೇಮಿಸುವ ಅಧಿಕಾರವನ್ನು ನೀಡಿದ್ದು, ಹಿಂದಿಯೇತರ ರಾಜ್ಯಗಳ ಪರಸ್ಪರ ಭಿನ್ನಾಭಿಪ್ರಾಯಗಳು ಈ ಸಂಘಟಿತ ಹೋರಾಟಕ್ಕೆ ಅಡ್ಡಿಯಾಗಿರುವ ಕಾರಣ ಅಭಿಪ್ರಾಯ ಭೇದವನ್ನು ತೊಡೆದು ಮಹಾರಾಷ್ಟ್ರ ಸೇರಿದಂತೆ ದಕ್ಷಿಣ ಭಾರತದ ಎಲ್ಲ ರಾಜ್ಯಗಳು ಒಗ್ಗೂಡಿ ಭಾಷಾ ನಿರ್ದೇಶಕರ ನೇಮಕಕ್ಕೆ ಕೇಂದ್ರ ಸರ್ಕಾರವನ್ನು ಆಗ್ರಹಿಸಬೇಕಿದೆ ಎಂದಿದ್ದಾರೆ.
ಕರ್ನಾಟಕ ರಾಜ್ಯ ಈ ಕುರಿತಂತೆ ಮೊದಲ ಹೆಜ್ಜೆಯನ್ನು ಇಡುವುದು ಸಕಾಲಿಕ ನಿಲುವಾಗಲಿದೆ ಎಂದಿರುವ ಡಾ.ಬಿಳಿಮಲೆ, ನೆರೆ ರಾಜ್ಯಗಳಾದ ಆಂಧ್ರ ಪ್ರದೇಶ, ತೆಲಂಗಾಣ, ತಮಿಳುನಾಡು, ಕೇರಳ ಹಾಗೂ ಮಹಾರಾಷ್ಟ್ರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದು ಭಾಷಾ ನಿರ್ದೇಶನಾಲಯವನ್ನು ಸ್ಥಾಪಿಸಲು ಕೇಂದ್ರ ಸರ್ಕಾರವನ್ನು ಒತ್ತಾಯಿಸಲು ರಾಜ್ಯ ಸರ್ಕಾರವನ್ನು ಕೋರಿದ್ದಾರೆ. ಇದು ನೆರೆ ರಾಜ್ಯಗಳ ಹಾಗೂ ಕರ್ನಾಟಕದಲ್ಲಿ ವಾಸಿಸುವ ಭಾಷಾ ಅಲ್ಪಸಂಖ್ಯಾತರುಗಳ ಸಂವಿಧಾನಿಕ ಹಕ್ಕುಗಳನ್ನು ಸಮರ್ಪಕವಾಗಿ ಒದಗಿಸುವಲ್ಲಿ ಸಹಕಾರಿಯಾಗಲಿದೆ ಎಂದು ಅವರು ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು