4:18 AM Monday21 - April 2025
ಬ್ರೇಕಿಂಗ್ ನ್ಯೂಸ್
Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ…

ಇತ್ತೀಚಿನ ಸುದ್ದಿ

ತೀರ್ಥಹಳ್ಳಿ: ಹಿಂದುಳಿದ ವರ್ಗಗಳ ಮಹಿಳಾ ಪಲಾನುಭವಿಗಳಿಗೆ ಹೊಲಿಗೆ ಯಂತ್ರ ವಿತರಣೆ

10/10/2024, 12:28

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ಸರ್ಕಾರದಲ್ಲಿ ಹಣದ ಕೊರತೆ ಇದೆ. ಹಾಗಾಗಿ ಕೊಡುವ ಸೌಲಭ್ಯದಲ್ಲೂ ಕಡಿಮೆಯಾಗುತ್ತಿದೆ. ನನ್ನ ರಾಜಕೀಯ ಅವಧಿಯಲ್ಲಿ ಬಟ್ಟೆ ಹಾಕುವವರಿಗೆ ಕೊಟ್ಟ ಹಾಗೆ ಹೊಲಿಗೆ ಯಂತ್ರವನ್ನು ಕೊಟ್ಟಿದ್ದೇವೆ. ಆದರೆ ಹೊಲಿಗೆ ಹೊಲಿಯುವವರ ಸಂಖ್ಯೆ ಕಡಿಮೆ ಆಗಿದೆ. ಇತ್ತೀಚಿಗೆ ರೆಡಿಮೇಡ್ ಬಟ್ಟೆಗಳು ಬಂದಿರುವುದರಿಂದ ಹೊಲಿಗೆ ಹೊಲೆಯುವವರ ಸಂಖ್ಯೆ ಕಡಿಮೆ ಆಗಿದೆ ಎಂದು ಶಾಸಕ ಆರಗ ಜ್ಞಾನೇಂದ್ರ ಹೇಳಿದರು.
ಸೋಮವಾರ ಪಟ್ಟಣದ ಗ್ರಾಮೀಣಾಭಿವೃದ್ಧಿ ಭವನದಲ್ಲಿ ಹಿಂದುಳಿದ ವರ್ಗಗಳ ಮಹಿಳಾ ಪಲಾನುಭವಿಗಳಿಗೆ ಹೊಲಿಗೆ ಯಂತ್ರಗಳನ್ನು ವಿತರಿಸಿ ಮಾತನಾಡಿದ ಅವರು, 300 ರಕ್ಕೂ ಹೆಚ್ಚು ಅರ್ಜಿ ಬಂದಿತ್ತು. ಆದರೆ ನಮಗೆ 36 ಅರ್ಜಿಗೆ ಯಂತ್ರವನ್ನು ವಿತರಿಸಲು ಅವಕಾಶ ಇತ್ತು. ಸರ್ಕಾರದಿಂದ ಸಿಗುವುದು ಕಡಿಮೆ. ಯಾರಿಗೆಲ್ಲ ಸಿಗಲಿಲ್ಲ ಅವರಿಗೆ ಮುಂದಿನ ಭಾರಿ ನೀಡಲಾಗುತ್ತದೆ ಎಂದು ತಿಳಿಸಿದರು.
ಯಾರು ಸಿನಿಮಾ ನೋಡದಿದ್ದರೂ ಟೈಲರ್ ಸಿನಿಮಾ ನೋಡಬೇಕು. ಅದರಲ್ಲಿ ಬರುವ ಹೊಸ ಹೊಸ ಡಿಸೈನ್ ನೋಡಿ ಬಟ್ಟೆ ಹೊಲಿಯಬೇಕಾಗುತ್ತದೆ, ಕಾಲ ಬದಲಾವಣೆ ಆದಂತೆ ಉಡುಪಗಳಲ್ಲಿಯೂ ಬದಲಾವಣೆ ಆಗುತ್ತದೆ. ಈಗ ಬ್ಲೌಸ್ ಹೊಲಿಯಲು 3000 ರೂ ಅಂತೆ. ಹಾಗಾಗಿ ರೆಡಿಮೇಡ್ ಬಟ್ಟೆಗಳು ಬಂದಿದೆ ಎಂದು ಹಾಸ್ಯ ಚಟಾಕಿ ಹಾರಿಸಿದರು.
ಸರ್ಕಾರದಿಂದ ನೀಡಿರುವ ಈ ಸೌಲಭ್ಯ ಬದುಕಿಗೆ ನೆರವು ಕೊಡುತ್ತದೆ. ಸರ್ಕಾರದಿಂದ ನೀಡಲಾಗುತ್ತಿರುವ ಈ ಸೌಲಭ್ಯವನ್ನು ಸದುಪಯೋಗ ಪಡಿಸಿಕೊಳ್ಳಿ. ಮೊದಲೆಲ್ಲ ಊಟಕ್ಕೆ ಅನ್ನ ಇಲ್ಲದ ಪರಿಸ್ಥಿತಿ ಇತ್ತು ಆದರೆ ಈಗ ಹಾಗಿಲ್ಲ. ಯಂತ್ರವನ್ನು ಪಡೆದು ಸ್ವಾಭಿಮಾನದ ಬದುಕು ಕಟ್ಟಿಕೊಳ್ಳಿ ಎಂದರು.
ಡಿ ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಅಧಿಕಾರಿ ಮಹಾದೇವಿ ಮಾತನಾಡಿ, ಮಹಿಳೆಯರು ಆರ್ಥಿಕವಾಗಿ ಸಬಲತೆ ಹೊಂದಬೇಕು, ಹಿಂದುಳಿದ ವರ್ಗದ ಕಟ್ಟ ಕಡೆಯ ವ್ಯಕ್ತಿಗೂ ಸಹ ಯೋಜನೆ ಸಿಗಬೇಕು, ಹಲವು ಯೋಜನೆ ಅಡಿಯಲ್ಲಿ ಬೇರೆ ಬೇರೆ ರೀತಿಯ ಸೌಲಭ್ಯಗಳಿವೆ. ಅದನ್ನು ಸದುಪಯೋಗ ಪಡಿಸಿಕೊಳ್ಳಬೇಕು. ಹೆಣ್ಣೊಂದು ಕಲಿತರೆ ಶಾಲೆಯೊಂದು ತೆರೆದಂತೆ ಎನ್ನುತ್ತಾರೆ ಹಾಗೆ ಮಹಿಳೆಯರು ಆರ್ಥಿಕವಾಗಿ ಸದೃಢವಾಗಬೇಕು ಎಂದು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು