9:41 PM Saturday25 - April 2026
ಬ್ರೇಕಿಂಗ್ ನ್ಯೂಸ್
ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು… ಶಿವಮೊಗ್ಗ | ಹುಡುಗಿ ವಿಚಾರಕ್ಕೆ ಅಪ್ರಾಪ್ತನಿಗೆ ಲಾಂಗಿನೇಟು: ತಲೆಗೇ ಸಿಲುಕಿಕೊಂಡ ಲಾಂಗ್ ಕಾಂತಾರ ದೈವ ಪಾತ್ರದ ಅನುಕರಣೆ ವಿವಾದ: ಬಾಲಿವುಡ್ ನಟ ರಣವೀರ್ ಚಾಮುಂಡೇಶ್ವರಿಯಲ್ಲಿ ಕ್ಷಮೆ… ಚಿಕ್ಕಮಗಳೂರು: ಸೊಪ್ಪು ತರಲು ಹೋದ ವೃದ್ಧೆ ಹೇಮಾವತಿ ನದಿಯಲ್ಲಿ ನೀರುಪಾಲು ಮೇಕೆದಾಟು ಕಾವೇರಿ ಸಂಗಮದಲ್ಲಿ ಆಟವಾಡುತ್ತಿದ್ದವರ ಮೇಲೆ ನುಗ್ಗಿಬಂದ ಕಾಡಾನೆ: ಎದ್ದು ಬಿದ್ದೋಡಿದ ಪ್ರವಾಸಿಗರು Kodagu | ವಿರಾಜಪೇಟೆ: 9 ಕಾಡಾನೆಗಳನ್ನು ಅರಣ್ಯಕ್ಕೆ ಅಟ್ಟಿದ ಅರಣ್ಯ ಇಲಾಖೆ ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ

ಇತ್ತೀಚಿನ ಸುದ್ದಿ

ತೀರ್ಥಹಳ್ಳಿ: ಹಿಂದುಳಿದ ವರ್ಗಗಳ ಮಹಿಳಾ ಪಲಾನುಭವಿಗಳಿಗೆ ಹೊಲಿಗೆ ಯಂತ್ರ ವಿತರಣೆ

10/10/2024, 12:28

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ಸರ್ಕಾರದಲ್ಲಿ ಹಣದ ಕೊರತೆ ಇದೆ. ಹಾಗಾಗಿ ಕೊಡುವ ಸೌಲಭ್ಯದಲ್ಲೂ ಕಡಿಮೆಯಾಗುತ್ತಿದೆ. ನನ್ನ ರಾಜಕೀಯ ಅವಧಿಯಲ್ಲಿ ಬಟ್ಟೆ ಹಾಕುವವರಿಗೆ ಕೊಟ್ಟ ಹಾಗೆ ಹೊಲಿಗೆ ಯಂತ್ರವನ್ನು ಕೊಟ್ಟಿದ್ದೇವೆ. ಆದರೆ ಹೊಲಿಗೆ ಹೊಲಿಯುವವರ ಸಂಖ್ಯೆ ಕಡಿಮೆ ಆಗಿದೆ. ಇತ್ತೀಚಿಗೆ ರೆಡಿಮೇಡ್ ಬಟ್ಟೆಗಳು ಬಂದಿರುವುದರಿಂದ ಹೊಲಿಗೆ ಹೊಲೆಯುವವರ ಸಂಖ್ಯೆ ಕಡಿಮೆ ಆಗಿದೆ ಎಂದು ಶಾಸಕ ಆರಗ ಜ್ಞಾನೇಂದ್ರ ಹೇಳಿದರು.
ಸೋಮವಾರ ಪಟ್ಟಣದ ಗ್ರಾಮೀಣಾಭಿವೃದ್ಧಿ ಭವನದಲ್ಲಿ ಹಿಂದುಳಿದ ವರ್ಗಗಳ ಮಹಿಳಾ ಪಲಾನುಭವಿಗಳಿಗೆ ಹೊಲಿಗೆ ಯಂತ್ರಗಳನ್ನು ವಿತರಿಸಿ ಮಾತನಾಡಿದ ಅವರು, 300 ರಕ್ಕೂ ಹೆಚ್ಚು ಅರ್ಜಿ ಬಂದಿತ್ತು. ಆದರೆ ನಮಗೆ 36 ಅರ್ಜಿಗೆ ಯಂತ್ರವನ್ನು ವಿತರಿಸಲು ಅವಕಾಶ ಇತ್ತು. ಸರ್ಕಾರದಿಂದ ಸಿಗುವುದು ಕಡಿಮೆ. ಯಾರಿಗೆಲ್ಲ ಸಿಗಲಿಲ್ಲ ಅವರಿಗೆ ಮುಂದಿನ ಭಾರಿ ನೀಡಲಾಗುತ್ತದೆ ಎಂದು ತಿಳಿಸಿದರು.
ಯಾರು ಸಿನಿಮಾ ನೋಡದಿದ್ದರೂ ಟೈಲರ್ ಸಿನಿಮಾ ನೋಡಬೇಕು. ಅದರಲ್ಲಿ ಬರುವ ಹೊಸ ಹೊಸ ಡಿಸೈನ್ ನೋಡಿ ಬಟ್ಟೆ ಹೊಲಿಯಬೇಕಾಗುತ್ತದೆ, ಕಾಲ ಬದಲಾವಣೆ ಆದಂತೆ ಉಡುಪಗಳಲ್ಲಿಯೂ ಬದಲಾವಣೆ ಆಗುತ್ತದೆ. ಈಗ ಬ್ಲೌಸ್ ಹೊಲಿಯಲು 3000 ರೂ ಅಂತೆ. ಹಾಗಾಗಿ ರೆಡಿಮೇಡ್ ಬಟ್ಟೆಗಳು ಬಂದಿದೆ ಎಂದು ಹಾಸ್ಯ ಚಟಾಕಿ ಹಾರಿಸಿದರು.
ಸರ್ಕಾರದಿಂದ ನೀಡಿರುವ ಈ ಸೌಲಭ್ಯ ಬದುಕಿಗೆ ನೆರವು ಕೊಡುತ್ತದೆ. ಸರ್ಕಾರದಿಂದ ನೀಡಲಾಗುತ್ತಿರುವ ಈ ಸೌಲಭ್ಯವನ್ನು ಸದುಪಯೋಗ ಪಡಿಸಿಕೊಳ್ಳಿ. ಮೊದಲೆಲ್ಲ ಊಟಕ್ಕೆ ಅನ್ನ ಇಲ್ಲದ ಪರಿಸ್ಥಿತಿ ಇತ್ತು ಆದರೆ ಈಗ ಹಾಗಿಲ್ಲ. ಯಂತ್ರವನ್ನು ಪಡೆದು ಸ್ವಾಭಿಮಾನದ ಬದುಕು ಕಟ್ಟಿಕೊಳ್ಳಿ ಎಂದರು.
ಡಿ ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಅಧಿಕಾರಿ ಮಹಾದೇವಿ ಮಾತನಾಡಿ, ಮಹಿಳೆಯರು ಆರ್ಥಿಕವಾಗಿ ಸಬಲತೆ ಹೊಂದಬೇಕು, ಹಿಂದುಳಿದ ವರ್ಗದ ಕಟ್ಟ ಕಡೆಯ ವ್ಯಕ್ತಿಗೂ ಸಹ ಯೋಜನೆ ಸಿಗಬೇಕು, ಹಲವು ಯೋಜನೆ ಅಡಿಯಲ್ಲಿ ಬೇರೆ ಬೇರೆ ರೀತಿಯ ಸೌಲಭ್ಯಗಳಿವೆ. ಅದನ್ನು ಸದುಪಯೋಗ ಪಡಿಸಿಕೊಳ್ಳಬೇಕು. ಹೆಣ್ಣೊಂದು ಕಲಿತರೆ ಶಾಲೆಯೊಂದು ತೆರೆದಂತೆ ಎನ್ನುತ್ತಾರೆ ಹಾಗೆ ಮಹಿಳೆಯರು ಆರ್ಥಿಕವಾಗಿ ಸದೃಢವಾಗಬೇಕು ಎಂದು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು