6:03 PM Saturday2 - May 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್…

ಇತ್ತೀಚಿನ ಸುದ್ದಿ

ಹಿರಿಯ ಮುಖಂಡ, ಕಾಫಿ ಬೆಳೆಗಾರ ನಾರ್ಬಾಟ್ ಸಾಲ್ದಾನ ನಿಧನ

07/01/2024, 21:24

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಹಿರಿಯ ಮುಖಂಡ, ಕಾಫಿ ಬೆಳೆಗಾರ, ಉದ್ಯಮಿ ನಾರ್ಬಾಟ್ ಸಾಲ್ದಾನ(70)ನಿಧನರಾಗಿದ್ದಾರೆ.
ಶನಿವಾರ ಬೆಳಿಗ್ಗೆ ಸುಮಾರು 10-30ರ ಹೊತ್ತಿಗೆ ಮೂಡಿಗೆರೆ ತಾಲ್ಲೂಕಿನ ಕುಂದೂರು ಗ್ರಾಮದಲ್ಲಿರುವ ತಮ್ಮ ಕಾಫಿ ಎಸ್ಟೇಟ್ ನಲ್ಲಿ ಮನೆಯ ಸಮೀಪ ಅಚಾನಕ್ಕಾಗಿ ಬಿದ್ದು ಗಾಯಗೊಂಡಿದ್ದರು ಎನ್ನಲಾಗಿದೆ. ಅವರ ತಲೆ ಮತ್ತು ಕಣ್ಣಿನ ಭಾಗಕ್ಕೆ ಗಾಯವಾಗಿತ್ತು. ತಕ್ಷಣ ಅವರನ್ನು ಬಣಕಲ್ ನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ನಂತರ ಮಂಗಳೂರಿಗೆ ಕರೆದೊಯ್ಯಲಾಗಿತ್ತು. ಅವರು ದಾರಿಮಧ್ಯೆಯೇ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.
ನಾರ್ಬಾಟ್ ಸಾಲ್ದಾನ ಅವರು ಚಿಕ್ಕಮಗಳೂರು ಜಿಲ್ಲೆಯ ಪ್ರಮುಖ ಕಾಫಿ ಬೆಳೆಗಾರರಲ್ಲಿ ಒಬ್ಬರಾಗಿದ್ದರು. ಹಲವು ಕಡೆಗಳಲ್ಲಿ ಅವರು ಕಾಫಿ ಎಸ್ಟೇಟ್ ಹೊಂದಿದ್ದರು. ಕಾಫಿ ಉದ್ದಿಮೆದಾರರಾಗಿಯೂ ಹೆಸರು ಮಾಡಿದ್ದರು. ಅವರ ಕುಟುಂಬ ಬೇಲೂರಿನಲ್ಲಿ ಕಾಫಿ ಕ್ಯೂರಿಂಗ್ ನಡೆಸುತ್ತಿದೆ. ಮೂಡಿಗೆರೆ ಪಟ್ಟಣದಲ್ಲಿ ಕುಂದೂರು ಕಾಂಪ್ಲೆಕ್ಸ್, ಸಿಂಡಿಕೇಟ್ ಬ್ಯಾಂಕ್ ಕಟ್ಟಡ ಸೇರಿದಂತೆ ಅನೇಕ ವಾಣಿಜ್ಯ ಕಟ್ಟಡಗಳ ಮಾಲೀಕರಾಗಿರುತ್ತಾರೆ.
ರಾಜಕೀಯವಾಗಿ ಅವರು ಕಾಂಗ್ರೇಸ್ ಪಕ್ಷದಲ್ಲಿ ಗುರುತಿಸಿಕೊಂಡು ಪಕ್ಷದ ವಿವಿಧ ಹುದ್ದೆಗಳನ್ನು ನಿಭಾಯಿಸಿದ್ದಾರೆ. ಕುಂದೂರು ಗ್ರಾಮ ಪಂಚಾಯಿತಿ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದರು. ಮೂಡಿಗೆರೆ ಬೆಳೆಗಾರರ ಸಂಘದ ನಿರ್ದೇ‍ಶಕರಾಗಿದ್ದರು.
ಕೊಡುಗೈ ದಾನಿಗಳಾಗಿದ್ದ ನಾರ್ಬಾಟ್ ಸಾಲ್ದಾನ ಬಣಕಲ್ ನಝರತ್ ಶಾಲೆಗೆ ಭೂಮಿ ದಾನ ಸೇರಿದಂತೆ ಅನೇಕ ಶಿಕ್ಷಣ ಸಂಸ್ಥೆಗಳಿಗೆ, ಸಾಮಾಜಿಕ ಕಾರ್ಯಗಳಿಗೆ ಉದಾರವಾಗಿ ದಾನವನ್ನು ನೀಡಿದ್ದಾರೆ.
ನಾರ್ಬಾಟ್ ಸಾಲ್ದಾನ ಅವರು ಅತ್ಯಂತ ಸರಳ ವ್ಯಕ್ತಿತ್ವದವರಾಗಿದ್ದರು. ಕುಂದೂರು ಸುತ್ತಮುತ್ತಲ ಪ್ರದೇಶಗಳ ಜನರೊಂದಿಗೆ ಅವರು ತುಂಬಾ ಪ್ರೀತಿ ವಿಶ್ವಾಸದಿಂದ ಇದ್ದರು. ಸ್ಥಳೀಯರ ಕಷ್ಟಸುಖಗಳಲ್ಲಿ ಸದಾ ಭಾಗಿಯಾಗುತ್ತಿದ್ದರು. ಇವರ ನಿಧನದ ಸುದ್ದಿ ಕೇಳಿ ಕುಂದೂರು ಸುತ್ತಮುತ್ತಲ ಗ್ರಾಮಸ್ಥರು, ಇವರ ಸ್ನೇಹಿತರು, ಬಂಧುಗಳು ತೀವ್ರ ಆಘಾತ ವ್ಯಕ್ತಪಡಿಸಿದ್ದಾರೆ.
ಮೃತರು ಪತ್ನಿ, ಇಬ್ಬರು ಪುತ್ರರು, ಇಬ್ಬರು ಪುತ್ರಿಯರು ಮತ್ತು ಅಪಾರ ಬಂಧುಗಳನ್ನು ಅಗಲಿದ್ದಾರೆ.
ಸದ್ಯ ಅವರ ಪಾರ್ಥೀವ ಶರೀರ ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಇದ್ದು, ಅವರ ಅಂತ್ಯಸಂಸ್ಕಾರದ ದಿನಾಂಕ ಮತ್ತು ಸ್ಥಳಕ್ಕೆ ಬಗ್ಗೆ ಇದುವರೆಗೂ ಸ್ಪಷ್ಟ ಮಾಹಿತಿ ಲಭ್ಯವಾಗಿಲ್ಲ.

ಇತ್ತೀಚಿನ ಸುದ್ದಿ

ಜಾಹೀರಾತು