1:35 AM Thursday19 - March 2026
ಬ್ರೇಕಿಂಗ್ ನ್ಯೂಸ್
Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ… ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ ರಾ.ಹೆ 275 ಬದಿಯ ಅನಧಿಕೃತ ಜಾಹೀರಾತು ಫಲಕ, ಹಣ್ಣಿನ/ಗೂಡಂಗಡಿ ತೆರವುಗೊಳಿಸಲು ಕೊಡಗು ಜಿಲ್ಲಾಡಳಿತ… ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು…

ಇತ್ತೀಚಿನ ಸುದ್ದಿ

ಹಿರಿಯಡಕ: ಪರೀಕ್ಷೆಯ ಭಯದಿಂದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ನೇಣಿಗೆ ಶರಣು

23/02/2022, 14:36

ಹಿರಿಯಡ್ಕ(reporterkarnataka.com): ಪರೀಕ್ಷೆಯ ಭಯದಿಂದ ಬಾಲಕನೋರ್ವ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿ‌ ತಾಲೂಕಿನ ಬೊಮ್ಮರಬೆಟ್ಟು ಗ್ರಾಮದ ಕಾಜರಗುತ್ತು ರಸ್ತೆ ಎಂಬಲ್ಲಿ ನಡೆದಿದೆ.

ಬೊಮ್ಮರಬೆಟ್ಟು ಗ್ರಾಮದ ಕಾಜರಗುತ್ತು ರಸ್ತೆಯ ಕುಕ್ಕುದಕಟ್ಟೆ ನಿವಾಸಿ ಜಿಸಾನ್ ಆತ್ಮಹತ್ಯೆಗೆ ಮಾಡಿಕೊಂಡ ಬಾಲಕ. ಈತ ಮಣಿಪಾಲ ಎಂಜೆಸಿ ಕಾಲೇಜಿನಲ್ಲಿ 10ನೇ ತರಗತಿಯ ಕನ್ನಡ ಮಾಧ್ಯಮದಲ್ಲಿ ವ್ಯಾಸಂಗ ಮಾಡುತ್ತಿದ್ದನು. ಆದರೆ, ಕಳೆದ ಒಂದು ವಾರದಿಂದ ಶಾಲೆಗೆ ಸರಿಯಾಗಿ ಹೋಗದೆ ಮನೆಯಲ್ಲಿಯೇ ಇದ್ದನು. ಅಲ್ಲದೆ, ಫೆ.21ರಂದು ಪರೀಕ್ಷೆ ಇದ್ದು, ಅದಕ್ಕೂ ಹೋಗದೆ ಮನೆಯಲ್ಲಿಯೇ ಇದ್ದನು.‌ ಇದಕ್ಕೆ ತಾಯಿ ಆಕ್ಷೇಪ ವ್ಯಕ್ತಪಡಿಸಿದ್ದರು‌. ತಾಯಿ ಅಂದು ಬೆಳಿಗ್ಗೆ 9:15 ಕ್ಕೆ ಕೆಲಸಕ್ಕೆ ಹೋಗಿದ್ದರು. ಆಗ ಜಿಸಾನ್ ಮನೆಯಲ್ಲಿಯೇ ಇದ್ದನು. ಅವರು ಸಂಜೆ 6:15ಕ್ಕೆ ಕೆಲಸ ಮುಗಿಸಿ ಮನೆಗೆ ಬಂದಾಗ ಎದುರು ಬಾಗಿಲಿನ ಚಿಲಕ ಹಾಕಿದ್ದು, ಹಿಂದಿನ ಬಾಗಿಲಿನಿಂದ ಒಳಗೆ ಹೋಗಿ ನೋಡಿದಾಗ ಜಿಸಾನ್ ಮಲಗುವ ಕೋಣೆಯಲ್ಲಿ ಜಂತಿಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ ಪರೀಕ್ಷೆಯ ಭಯದಿಂದ ಅಥವಾ ಇನ್ಯಾವುದೋ ವೈಯಕ್ತಿಕ ಕಾರಣದಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಈ ಬಗ್ಗೆ ಹಿರಿಯಡಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು