10:58 PM Tuesday17 - February 2026
ಬ್ರೇಕಿಂಗ್ ನ್ಯೂಸ್
ಆಗುಂಬೆ ಬಸ್ ನಿಲ್ದಾಣ ಬಳಿ ಎರಡು ಪ್ರತ್ಯೇಕ ಅಪಘಾತ: ಇಬ್ಬರಿಗೆ ಗಾಯ ಪ್ರೇಮಿಗಳ ದಿನಾಚರಣೆಯ ಎಫೆಕ್ಟ್ ?: ಪ್ರೇಮ ನಿವೇದನೆ ಒಪ್ಪಿಕೊಳ್ಳದ ಯುವತಿಗೆ ಬಿಯರ್ ಬಾಟ್ಲಿಯಿಂದ… ಕೊಪ್ಪಳದಲ್ಲಿ ವಿದೇಶಿ ಮಹಿಳೆಯ ಅತ್ಯಾಚಾರ, ಕೊಲೆ ಪ್ರಕರಣ: 3 ಮಂದಿ ಆರೋಪಿಗಳಿಗೆ ಗಲ್ಲು ಸಿದ್ದರಾಮಯ್ಯನವರ ಸರ್ಕಾರ ಜೀರೋ ಅಭಿವೃದ್ಧಿಯ ಸರ್ಕಾರ: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಮಹಾಶಿವರಾತ್ರಿ | ಮಲೆ ಮಹದೇಶ್ವರ ಬೆಟ್ಟದಲ್ಲಿ ಮಾದಪ್ಪನಿಗೆ ಎಣ್ಣೆ ಮಜ್ಜನ: ವಿಶೇಷ ಪೂಜೆ ಟಿ20 ವಿಶ್ವಕಪ್: ಪಾಕಿಸ್ತಾನ ವಿರುದ್ದ ಭಾರತಕ್ಕೆ 61 ರನ್ ಜಯ; ಸೂಪರ್ 8… ರಾಜ್ಯದಲ್ಲಿ 2030ರ ವರೆಗೆ ಹಂತ ಹಂತವಾಗಿ ಪೊಲೀಸ್ ವಸತಿಗೃಹ ನಿರ್ಮಾಣ: ಗೃಹ ಸಚಿವ… ಅಮೆರಿಕ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ: ರೈತರು ತೋಳಿಗೆ ಕಪ್ಪುಪಟ್ಟಿ ಕಟ್ಟಿ… ನಿಯಂತ್ರಣ ತಪ್ಪಿದ ಕೆಎಸ್‌ಆರ್‌ಟಿಸಿ ಬಸ್; ಮೈಸೂರಿನಲ್ಲಿ ಸರಣಿ ಅಪಘಾತ; ಟ್ರಾಫಿಕ್ ಜಾಮ್ ಕೊಡಗಿನಲ್ಲಿ ಸೂಪರ್ ಸ್ಟಾರ್ ರಜನಿಕಾಂತ್: ಮಡಿಕೇರಿ ಸಮೀಪ ರೆಸಾರ್ಟ್ ಉದ್ಘಾಟನೆ

ಇತ್ತೀಚಿನ ಸುದ್ದಿ

ಹಿರಿಯಡ್ಕ: ದನದ ಕೊಟ್ಟಿಗೆಯಲ್ಲಿ ಬೆಂಕಿ‌ ಅವಘಡ; ಮನನೊಂದ ವ್ಯಕ್ತಿ‌ ನೇಣಿಗೆ ಶರಣು

14/12/2022, 11:56

ಹಿರಿಯಡ್ಕ(reporterkarnataka.com): ಮನೆಯಲ್ಲಿ ನಡೆದ ಬೆಂಕಿ ಅವಘಡದಿಂದ ಚಿಂತೆಗೀಡಾಗಿದ್ದ ವ್ಯಕ್ತಿಯೊಬ್ಬರು ಮನನೊಂದು‌ ಆತ್ಮಹತ್ಯೆಗೆ ಶರಣಾದ ಘಟನೆ ಬೊಮ್ಮರಬೆಟ್ಟು ಗ್ರಾಮದ ಕೊಲ್ಯಾರು‌ ಎಂಬಲ್ಲಿ‌ ನಡೆದಿದೆ.

ಬೊಮ್ಮರಬೆಟ್ಟು ಗ್ರಾಮದ ಕೊಲ್ಯಾರು‌ ನಿವಾಸಿ ಶಾಂತೇಶ್ ಶೆಟ್ಟಿ(59) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಡಿ.9ರಂದು ಇವರ ಮನೆಯ ಬಳಿಯ ದನದ ಕೊಟ್ಟಿಗೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಸುಟ್ಟು ಹೋಗಿತ್ತು. ಇದರಿಂದ ಕೊಟ್ಟಿಗೆಯಲ್ಲಿದ್ದ ತೆಂಗಿನಕಾಯಿ ಹಾಗೂ ಬೈಹುಲ್ಲು ಸಂಪೂರ್ಣ ಸುಟ್ಟು ಕರಕಲಾಗಿತ್ತು. ಈ ವಿಚಾರದಲ್ಲಿ ಮಾನಸಿಕವಾಗಿ ನೊಂದ ಶಾಂತೇಶ್ ಶೆಟ್ಟಿ ಅವರು ಡಿ. 11ರ ರಾತ್ರಿ 10‌ಗಂಟೆಯಿಂದ ಡಿ. 12ರ‌ ಬೆಳಿಗ್ಗಿನ ಮಧ್ಯಾವಧಿಯಲ್ಲಿ ಮನೆಯ ಹಿಂಬದಿಯಲ್ಲಿರುವ ಹಲಸಿನ ಮರದ ಕೊಂಬೆಗೆ‌ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಹಿರಿಯಡ್ಕ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು