6:06 PM Saturday11 - April 2026
ಬ್ರೇಕಿಂಗ್ ನ್ಯೂಸ್
3 ದಿನಗಳಿಂದ ನಾಪತ್ತೆಯಾಗಿದ್ದ ಬಾಲಕಿಯ ಮೃತದೇಹ ಪತ್ತೆ: ಚಂದ್ರದ್ರೋಣ ಪರ್ವತದ 2 ಸಾವಿರ… ಪ್ರಧಾನಿ‌ ಮೋದಿಗೆ ಸಂಬಂಧಿಸಿದ ಗೌಪ್ಯ ಮಾಹಿತಿ ರವಾನೆ: ವಿದೇಶಿ ಏಜೆನ್ಸಿಗಳ ಜತೆ ಸಂಪರ್ಕ;… ಉತ್ತರ ಪ್ರದೇಶದಲ್ಲಿ ಭೀಕರ ದೋಣಿ ದುರಂತ: ಪ್ರವಾಸಿಗರಿದ್ದ ಸ್ಟೀಮರ್ ಪಲ್ಟಿಯಾಗಿ 10 ಮಂದಿ… ಚಾಮರಾಜನಗರ; ಮಹಿಳೆಯರ ಒಳ ಉಡುಪು ಕದಿಯುತ್ತಿದ್ದ ‘ಸೈಕೋ’ ಕಳ್ಳನ ಬಂಧನ ಫೇಲಾದವರಿಗೆ ಇನ್ನೊಂದು ಚಾನ್ಸ್: ದ್ವಿತೀಯ ಪಿಯುಸಿ ಪರೀಕ್ಷೆ-2 ದಿನಾಂಕ ಪ್ರಕಟ Suratkal | ಅಮಾನತುಗೊಂಡಿದ್ದ ಎನ್‌ಐಟಿಕೆ ಕುಲಸಚಿವ ರವೀಂದ್ರನಾಥ್ ಸೇವೆಯಿಂದ ವಜಾ ಪತಿಯ ಶವದ ಜತೆ 10 ದಿನ ಕಳೆದ ಪತ್ನಿ: ಮಲೆನಾಡು ಚಿಕ್ಕಮಗಳೂರಿನಲ್ಲಿ ವಿಚಿತ್ರ… ಕಾಂಗ್ರೆಸ್‌ನಿಂದ ಕೋಟ್ಯಂತರ ರೂಪಾಯಿ ಹಣ ಹಂಚಿಕೆ: ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಆರೋಪ ಅಮ್ಮನ ಸಾವಿನ ದುಃಖದಲ್ಲೂ ಛಲ ಬಿಡದೆ ಪರೀಕ್ಷೆ ಬರೆದ ದಿಶಾ ಸ್ಟೇಟ್ ಗೆ… ದಾವಣಗೆರೆ ದಕ್ಷಿಣ: ಮತಗಟ್ಟೆ ಬಳಿ ಟೇಬಲ್ ವಿಚಾರವಾಗಿ ಕಾಂಗ್ರೆಸ್-ಎಸ್ ಡಿಪಿಐ ಕಾರ್ಯಕರ್ತರ ಜಟಾಪಟಿ

ಇತ್ತೀಚಿನ ಸುದ್ದಿ

ಹಿರಿಯಡ್ಕ: ದನದ ಕೊಟ್ಟಿಗೆಯಲ್ಲಿ ಬೆಂಕಿ‌ ಅವಘಡ; ಮನನೊಂದ ವ್ಯಕ್ತಿ‌ ನೇಣಿಗೆ ಶರಣು

14/12/2022, 11:56

ಹಿರಿಯಡ್ಕ(reporterkarnataka.com): ಮನೆಯಲ್ಲಿ ನಡೆದ ಬೆಂಕಿ ಅವಘಡದಿಂದ ಚಿಂತೆಗೀಡಾಗಿದ್ದ ವ್ಯಕ್ತಿಯೊಬ್ಬರು ಮನನೊಂದು‌ ಆತ್ಮಹತ್ಯೆಗೆ ಶರಣಾದ ಘಟನೆ ಬೊಮ್ಮರಬೆಟ್ಟು ಗ್ರಾಮದ ಕೊಲ್ಯಾರು‌ ಎಂಬಲ್ಲಿ‌ ನಡೆದಿದೆ.

ಬೊಮ್ಮರಬೆಟ್ಟು ಗ್ರಾಮದ ಕೊಲ್ಯಾರು‌ ನಿವಾಸಿ ಶಾಂತೇಶ್ ಶೆಟ್ಟಿ(59) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಡಿ.9ರಂದು ಇವರ ಮನೆಯ ಬಳಿಯ ದನದ ಕೊಟ್ಟಿಗೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಸುಟ್ಟು ಹೋಗಿತ್ತು. ಇದರಿಂದ ಕೊಟ್ಟಿಗೆಯಲ್ಲಿದ್ದ ತೆಂಗಿನಕಾಯಿ ಹಾಗೂ ಬೈಹುಲ್ಲು ಸಂಪೂರ್ಣ ಸುಟ್ಟು ಕರಕಲಾಗಿತ್ತು. ಈ ವಿಚಾರದಲ್ಲಿ ಮಾನಸಿಕವಾಗಿ ನೊಂದ ಶಾಂತೇಶ್ ಶೆಟ್ಟಿ ಅವರು ಡಿ. 11ರ ರಾತ್ರಿ 10‌ಗಂಟೆಯಿಂದ ಡಿ. 12ರ‌ ಬೆಳಿಗ್ಗಿನ ಮಧ್ಯಾವಧಿಯಲ್ಲಿ ಮನೆಯ ಹಿಂಬದಿಯಲ್ಲಿರುವ ಹಲಸಿನ ಮರದ ಕೊಂಬೆಗೆ‌ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಹಿರಿಯಡ್ಕ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು