5:33 AM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಹಿರಿಯಡ್ಕ: ದನದ ಕೊಟ್ಟಿಗೆಯಲ್ಲಿ ಬೆಂಕಿ‌ ಅವಘಡ; ಮನನೊಂದ ವ್ಯಕ್ತಿ‌ ನೇಣಿಗೆ ಶರಣು

14/12/2022, 11:56

ಹಿರಿಯಡ್ಕ(reporterkarnataka.com): ಮನೆಯಲ್ಲಿ ನಡೆದ ಬೆಂಕಿ ಅವಘಡದಿಂದ ಚಿಂತೆಗೀಡಾಗಿದ್ದ ವ್ಯಕ್ತಿಯೊಬ್ಬರು ಮನನೊಂದು‌ ಆತ್ಮಹತ್ಯೆಗೆ ಶರಣಾದ ಘಟನೆ ಬೊಮ್ಮರಬೆಟ್ಟು ಗ್ರಾಮದ ಕೊಲ್ಯಾರು‌ ಎಂಬಲ್ಲಿ‌ ನಡೆದಿದೆ.

ಬೊಮ್ಮರಬೆಟ್ಟು ಗ್ರಾಮದ ಕೊಲ್ಯಾರು‌ ನಿವಾಸಿ ಶಾಂತೇಶ್ ಶೆಟ್ಟಿ(59) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಡಿ.9ರಂದು ಇವರ ಮನೆಯ ಬಳಿಯ ದನದ ಕೊಟ್ಟಿಗೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಸುಟ್ಟು ಹೋಗಿತ್ತು. ಇದರಿಂದ ಕೊಟ್ಟಿಗೆಯಲ್ಲಿದ್ದ ತೆಂಗಿನಕಾಯಿ ಹಾಗೂ ಬೈಹುಲ್ಲು ಸಂಪೂರ್ಣ ಸುಟ್ಟು ಕರಕಲಾಗಿತ್ತು. ಈ ವಿಚಾರದಲ್ಲಿ ಮಾನಸಿಕವಾಗಿ ನೊಂದ ಶಾಂತೇಶ್ ಶೆಟ್ಟಿ ಅವರು ಡಿ. 11ರ ರಾತ್ರಿ 10‌ಗಂಟೆಯಿಂದ ಡಿ. 12ರ‌ ಬೆಳಿಗ್ಗಿನ ಮಧ್ಯಾವಧಿಯಲ್ಲಿ ಮನೆಯ ಹಿಂಬದಿಯಲ್ಲಿರುವ ಹಲಸಿನ ಮರದ ಕೊಂಬೆಗೆ‌ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಹಿರಿಯಡ್ಕ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು