5:10 PM Saturday2 - May 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್…

ಇತ್ತೀಚಿನ ಸುದ್ದಿ

ಹಿರಿಯಡ್ಕ: ಎಂಡೋ ಸಲ್ಫಾನ್ ಸಂತ್ರಸ್ತರಿಗೆ ನ್ಯಾಷನಲ್ ಹೆಲ್ತ್ ಮಿಷನ್ ಯೋಜನೆಯಡಿ ಫಿಸಿಯೋಥೆರಪಿ ‌ಸೌಲಭ್ಯ

20/01/2024, 13:01

ಉಡುಪಿ(reporterkarnataka.com): ಎಂಡೋ ಸಲ್ಫಾನ್ ಸಂತ್ರಸ್ತರಿಗೆ ನ್ಯಾಷನಲ್ ಹೆಲ್ತ್ ಮಿಷನ್ ಯೋಜನೆಯಡಿ ಹಿರಿಯಡ್ಕದಲ್ಲಿ ನಿರ್ಮಿಸಿರುವ ಕಟ್ಟಡದಲ್ಲಿ ಫಿಸಿಯೋಥೆರಪಿ ‌ಸೌಲಭ್ಯ ಒದಗಿಸಲಾಗಿದೆ.
80ರ ದಶಕದಲ್ಲಿ ಗೋಡಂಬಿ ಕೃಷಿಗೆ ಬಳಸಿದ ಕೀಟನಾಶಕದ ದುಷ್ಪರಿಣಾಮಗಳ ಬಗ್ಗೆ ನಮಗರಿವಿದೆ. ಆ ಕೀಟನಾಶಕದ ಬಳಕೆ ಈಗ ನಿಷೇಧವಿದೆ. ಆದರೆ ಆಗ ಸಿಂಪಡಿಸಿದ ಎಂಡೋಸಲ್ಫಾನ್ ನಿಂದ ಆ ಭಾಗದ ಜನರು ನರ ದೌರ್ಬಲ್ಯ, ಮಾಂಸ ಖಂಡಗಳ ಸೆವೆತ, ಬುದ್ದಿ ಮಾಂದ್ಯತೆ, ಬಂಜೆತನ ಇನ್ನಿತ್ಯಾದಿ ಸಮಸ್ಯೆ ಗಳಿಂದ ಬಳಲುತ್ತಿದ್ದಾರೆ. ಎಂಡೋ ಸಲ್ಫಾನ್ ಪೀಡಿತರ ಹಲವು ಬೇಡಿಕೆಗಳಲ್ಲಿ ಉತ್ತಮ ಫಿಸಿಯೋಥೆರಪಿ ‌ಸೌಲಭ್ಯ ಕೂಡ ಒಂದು. ಅದು ಮನೆಗೆ ಹತ್ತಿರವಿದ್ದರೆ ಒಳಿತು. ಎಂಡೋ ಸಲ್ಫಾನ್ ಪೀಡಿತರಿಗೆ ಆರೋಗ್ಯ ಚಿಕಿತ್ಸೆ ಶಿಬಿರ ನಡೆಸಿದ ಒನ್ ಗುಡ್ ಸ್ಟೆಪ್ ಸಂಸ್ಥೆಯು ಹಿರಿಯಡ್ಕ ಪ್ರಾಥಮಿಕ ಆರೋಗ್ಯ ಕೇಂದ್ರ ಆವರಣದಲ್ಲಿ, ನ್ಯಾಷನಲ್ ಹೆಲ್ತ್ ಮಿಷನ್ ಯೋಜನೆಯಡಿ ನಿರ್ಮಿಸಿರುವ ಕಟ್ಟಡದಲ್ಲಿ ಸುಸಜ್ಜಿತ ಆಧುನಿಕ ಫಿಸಿಯೋಥೆರಪಿ ಸೌಲಭ್ಯಗಳನ್ನು ಪ್ರಾರಂಭಿಸುತ್ತಿದೆ. ದಿನಾಂಕ ಜನವರಿ ೨೦ ರಂದು ಮದ್ಯಾಹ್ನ 2ಗಂಟೆಗೆ ಉಡುಪಿ ಜಿಲ್ಲೆಯ ಮಾನ್ಯ ಜಿಲ್ಲಾಧಿಕಾರಿಗಳಾದ ಡಾ ವಿದ್ಯಾ ಕುಮಾರಿಯವರು ಈ ಕೇಂದ್ರವನ್ನು ಉದ್ಘಾಟಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ಡಾ ಐ.ಪಿ. ಗಡದ್, ವಲಯಾಧಿಕಾರಿ ಡಾ ಪ್ರಶಾಂತ್ ಭಟ್, ಧನಸಹಾಯ ಮಾಡಿದ ಜೆನಿಸಿಸ್ ಪ್ಯಾಕೇಜಿಂಗ್ ಪ್ರೈ ಲಿ ನ ಮಾಲಕ ಕೌಶಲ್ ವೋರಾ, ಒನ್ ಗುಡ್ ಸ್ಟೆಪ್ ಸಂಸ್ಥೆಯ ನಿರ್ದೇಶಕಿ ಅಮಿತಾ ಪೈ,ಎಂಡೋ ಸಲ್ಫಾನ್ ಸಂತ್ರಸ್ತ ರ ಬೇಡಿಕೆಗಳಿಗಾಗಿ ಶ್ರಮಿಸುತ್ತಿರುವ ಡಾ ರವೀಂದ್ರ ನಾಥ್ ಶಾನುಭಾಗ್, ಎಂಸಿಎಚ್ ಪಿಯ ಡೀನ್ ಡಾ ಅರುಣ್ ಮಯ್ಯ, ಶ್ರೀ ರಾಜೇಶ್ ನಾವಡ, ಡಾ ಪಿ.ವಿ. ಭಂಡಾರಿ ಇನ್ನಿತರರು ಇರುತ್ತಾರೆ.
ಮುಂದಿನ ದಿನಗಳಲ್ಲಿ ಜಿಲ್ಲೆಯ ಉಳಿದ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಫಿಸಿಯೋಥೆರಪಿ ಸೌಲಭ್ಯಗಳನ್ನು ಪ್ರಾರಂಭಿಸುವ ಯೋಜನೆಯಿದೆ, ಎಂಡೋ ಸಲ್ಫಾನ್ ಸಂತ್ರಸ್ಥರಲ್ಲದೆ ಫಿಸಿಯೋಥೆರಪಿ ಅಗತ್ಯ ಇರುವ ಸುತ್ತ ಮುತ್ತಲಿನ ಪರಿಸರದ ಜನ ಈ ಸೌಲಭ್ಯ ಗಳನ್ನು ಬೆಳೆಸಿಕೊಳ್ಳುವಂತೆ ಒನ್ ಗುಡ್ ಸ್ಟೆಪ್ ಸಂಸ್ಥೆಯ ನಿರ್ದೇಶಕಿ ಅಮಿತಾ ಪೈ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು