2:24 PM Tuesday20 - January 2026
ಬ್ರೇಕಿಂಗ್ ನ್ಯೂಸ್
ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ

ಇತ್ತೀಚಿನ ಸುದ್ದಿ

ಹೊಡೆಯದಿದ್ರೂ ಕೇಸು ಹಾಕ್ತೀರಿ, ಹಿಂದೂಗಳ ಮೇಲೆ ನಿಮ್ಮದೂ ನೈತಿಕ ಗೂಂಡಾಗಿರಿ: ಶಾಸಕ ಡಾ.ಭರತ್ ಶೆಟ್ಟಿ ಕಿಡಿ

30/11/2023, 01:40

ಸುರತ್ಕಲ್(reporterkarnataka.com):ಕಾಂಗ್ರೆಸ್ ಪೊಲೀಸ್ ಇಲಾಖೆಯ ಮೇಲೆ ಒತ್ತಡ ಹೇರಿ ಕೇಸು ಹಾಕಿಸುತ್ತಿದೆ.
ಹಿಂದೂ ಯುವತಿಯ ಜತೆಗಿದ್ದವನನ್ನು ಕೇವಲ ವಿಚಾರಿಸಿದ ಮಾತ್ರಕ್ಕೆ ಕೇಸು ಹಾಕುದಾದ್ರೆ, ನಿಮ್ಮದೂ ಹಿಂದೂಗಳ ಮೇಲೆ ನೈತಿಕ ಪೊಲೀಸ್ ಗಿರಿಯೆ ಎಂದು ಕಾಂಗ್ರೆಸ್ ಆಡಳಿತವನ್ನು ಶಾಸಕ ಡಾ.ಭರತ್ ಶೆಟ್ಟಿ ವೈ. ಪ್ರಶ್ನಿಸಿದ್ದಾರೆ.
ಮೈ ಕೈ ಮುಟ್ಟದೆ ಪ್ರಶ್ನಿಸಿದರೂ ಕೇಸು, ಹೊಡೆದರೂ ಕೇಸು ಹಾಕುದಾದ್ರೆ‌ ಹಿಂದೂ ಕಾರ್ಯಕರ್ತರಿಗೆ ನೀವೇ ಪರೋಕ್ಷವಾಗಿ ಪ್ರೇರಣೆ ನೀಡುತ್ತಿದ್ದೀರಿ. ಮಂಗಳೂರಿನ ಮಾರ್ಗನ್ಸ್ ಗೇಟ್ ಬಳಿ ಹಿಂದೂ ಯುವತಿಯನ್ನು ಅನ್ಯ ಮತೀಯ ಯುವಕ ಪುಸಲಾಯಿಸಿ ಕರೆದೊಯ್ದದಾಗ ಯಾವುದೇ ಹಲ್ಲೆ ಅಥವಾ ನಿಂದನೆ ಮಾಡದೆ ವಿಚಾರಿಸಿದ್ದೇ ಮಹಾ ಅಪರಾಧ ಎಂಬಂತೆ ಪೊಲೀಸ್ ಇಲಾಖೆಯ ಮೇಲೆ ಒತ್ತಡ ಹೇರಿ ಅವರ ಮೇಲೆ ಕೇಸು ದಾಖಲಿಸಿ ಯುವಕರ ಭವಿಷ್ಯ ಮುಸುಕಾಗಿಸುವ ಹುನ್ನಾರವನ್ನು ಕಾಂಗ್ರೆಸ್ ಸರಕಾರ ಮಾಡುತ್ತಿದೆ.
ಹಿಂದೂ ಸಮಾಜದ ಒಳಿತಿಗಾಗಿ, ನಮ್ಮ ಸಹೋದರಿಯರ ಮಾನ, ಪ್ರಾಣ ರಕ್ಷಣೆಗೆ ಮುಂದೆಯೂ ನಮ್ಮ ಪಕ್ಷ , ನಮ್ಮ ಹಿಂದೂ ಸಂಘಟನೆಯ ಕಾರ್ಯಕರ್ತರು ಇಟ್ಟ ಹೆಜ್ಜೆಯನ್ನು ಹಿಂದೆ ಇಡುವುದಿಲ್ಲ. ಗಡಿಪಾರು, ರೌಡಿ ಶೀಟರ್, ಅನೈತಿಕ ಪೊಲೀಸ್ ಗಿರಿಯಂತಹ ಸೆಕ್ಷನ್ ವಿಧಿಸಿ ಬೆದರಿಕೆಯ ಕೇಸ್ ಹಾಕಿದರೆ ಹೆದರಿ ಮೂಲೆ ಸೇರುತ್ತಾರೆ ಎಂಬುದು ನಿಮ್ಮ ಭ್ರಮೆ. ಅನ್ಯ ಮತೀಯರ ದುಷ್ಟ ಸಂಚನ್ನು ನಮ್ಮ ಕಾರ್ಯಕರ್ತರು ಮುಂದೆಯೂ ಬಯಲಿಗೆಳೆಯುತ್ತಾರೆ. ನಿಮ್ಮಿಂದ ಆಗುವುದಾದರೆ ತಡೆಯಿರಿ ಎಙದು ಡಾ.ಭರತ್ ಶೆಟ್ಟಿ ಸವಾಲು ಹಾಕಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು