5:57 PM Saturday10 - May 2025
ಬ್ರೇಕಿಂಗ್ ನ್ಯೂಸ್
Vatican City | ನೂತನ ಪೋಪ್‌ ಆಗಿ ಅಮೆರಿಕದ ರಾಬರ್ಟ್ ಫ್ರಾನ್ಸಿಸ್‌ ಪ್ರಿವೊಸ್ಟ್‌… Indo- Pak | ಯುದ್ಧ ಕಾರ್ಮೋಡ: ಹೊರನಾಡು ಅನ್ನಪೂರ್ಣೇಶ್ವರಿ ಕ್ಷೇತ್ರದಿಂದ ಭಾರತೀಯ ಸೇನೆಗೆ… ಮಾರಣಾಂತಿಕ ಹೀಮೋಫೀಲಿಯಾ ಬಾಧಿತ ಗರ್ಭಿಣಿ ಮಹಿಳೆಗೆ ಯಶಸ್ವೀ ಶಸ್ತ್ರಚಿಕಿತ್ಸೆ: ತಾಯಿ – ಮಗುವಿಗೆ… Airport | ಕಲಬುರಗಿ ವಿಮಾನ ನಿಲ್ದಾಣ: ಭದ್ರತಾ ತಪಾಸಣೆ; ನಿಗದಿತ ಸಮಯಕ್ಕೆ ಪ್ರಯಾಣಿಕರು… J&K | ಆಪರೇಶನ್ ಸಿಂಧೂರ್: ಕರ್ನಲ್ ಸೋಫಿಯಾ ಖುರೇಷಿ: ಕರ್ನಾಟಕದ ಸೊಸೆ ರೀ..!! Karnataka CM | ಮೈಶುಗರ್ ಕಾರ್ಖಾನೆಗೆ 50 ಕೋಟಿ ಕೊಟ್ಟಿದ್ದಷ್ಟೆ ಅಲ್ಲ, ವಿದ್ಯುತ್… ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಸ್ವಾಗತಿಸಿದ ಮಾಜಿ… ಬೆಂಗಳೂರು ಜ್ಞಾನಭಾರತಿ ವಿಶ್ವವಿದ್ಯಾಲಯದಲ್ಲಿ ರಿಜಿಸ್ಟ್ರಾರ್ ಹುದ್ದೆಗೆ 35 ಲಕ್ಷ ರೂ. ವಂಚನೆ: ಎಫ್… Doddaballapura | ಘಾಟಿ ಸುಬ್ರಹ್ಮಣ್ಯ ಕ್ಷೇತ್ರ: ಸರಳ ಸಾಮೂಹಿಕ ವಿವಾಹದಲ್ಲಿ 66 ಜೋಡಿಗಳಿಗೆ… Ex CM | ಸಿಂಧೂರ ಕಳೆದುಕೊಂಡ ಹೆಣ್ಣು ಮಕ್ಕಳ ಪ್ರತೀಕಾರ: ಮಾಜಿ ಮುಖ್ಯಮಂತ್ರಿ…

ಇತ್ತೀಚಿನ ಸುದ್ದಿ

ಹೊಡೆಯದಿದ್ರೂ ಕೇಸು ಹಾಕ್ತೀರಿ, ಹಿಂದೂಗಳ ಮೇಲೆ ನಿಮ್ಮದೂ ನೈತಿಕ ಗೂಂಡಾಗಿರಿ: ಶಾಸಕ ಡಾ.ಭರತ್ ಶೆಟ್ಟಿ ಕಿಡಿ

30/11/2023, 01:40

ಸುರತ್ಕಲ್(reporterkarnataka.com):ಕಾಂಗ್ರೆಸ್ ಪೊಲೀಸ್ ಇಲಾಖೆಯ ಮೇಲೆ ಒತ್ತಡ ಹೇರಿ ಕೇಸು ಹಾಕಿಸುತ್ತಿದೆ.
ಹಿಂದೂ ಯುವತಿಯ ಜತೆಗಿದ್ದವನನ್ನು ಕೇವಲ ವಿಚಾರಿಸಿದ ಮಾತ್ರಕ್ಕೆ ಕೇಸು ಹಾಕುದಾದ್ರೆ, ನಿಮ್ಮದೂ ಹಿಂದೂಗಳ ಮೇಲೆ ನೈತಿಕ ಪೊಲೀಸ್ ಗಿರಿಯೆ ಎಂದು ಕಾಂಗ್ರೆಸ್ ಆಡಳಿತವನ್ನು ಶಾಸಕ ಡಾ.ಭರತ್ ಶೆಟ್ಟಿ ವೈ. ಪ್ರಶ್ನಿಸಿದ್ದಾರೆ.
ಮೈ ಕೈ ಮುಟ್ಟದೆ ಪ್ರಶ್ನಿಸಿದರೂ ಕೇಸು, ಹೊಡೆದರೂ ಕೇಸು ಹಾಕುದಾದ್ರೆ‌ ಹಿಂದೂ ಕಾರ್ಯಕರ್ತರಿಗೆ ನೀವೇ ಪರೋಕ್ಷವಾಗಿ ಪ್ರೇರಣೆ ನೀಡುತ್ತಿದ್ದೀರಿ. ಮಂಗಳೂರಿನ ಮಾರ್ಗನ್ಸ್ ಗೇಟ್ ಬಳಿ ಹಿಂದೂ ಯುವತಿಯನ್ನು ಅನ್ಯ ಮತೀಯ ಯುವಕ ಪುಸಲಾಯಿಸಿ ಕರೆದೊಯ್ದದಾಗ ಯಾವುದೇ ಹಲ್ಲೆ ಅಥವಾ ನಿಂದನೆ ಮಾಡದೆ ವಿಚಾರಿಸಿದ್ದೇ ಮಹಾ ಅಪರಾಧ ಎಂಬಂತೆ ಪೊಲೀಸ್ ಇಲಾಖೆಯ ಮೇಲೆ ಒತ್ತಡ ಹೇರಿ ಅವರ ಮೇಲೆ ಕೇಸು ದಾಖಲಿಸಿ ಯುವಕರ ಭವಿಷ್ಯ ಮುಸುಕಾಗಿಸುವ ಹುನ್ನಾರವನ್ನು ಕಾಂಗ್ರೆಸ್ ಸರಕಾರ ಮಾಡುತ್ತಿದೆ.
ಹಿಂದೂ ಸಮಾಜದ ಒಳಿತಿಗಾಗಿ, ನಮ್ಮ ಸಹೋದರಿಯರ ಮಾನ, ಪ್ರಾಣ ರಕ್ಷಣೆಗೆ ಮುಂದೆಯೂ ನಮ್ಮ ಪಕ್ಷ , ನಮ್ಮ ಹಿಂದೂ ಸಂಘಟನೆಯ ಕಾರ್ಯಕರ್ತರು ಇಟ್ಟ ಹೆಜ್ಜೆಯನ್ನು ಹಿಂದೆ ಇಡುವುದಿಲ್ಲ. ಗಡಿಪಾರು, ರೌಡಿ ಶೀಟರ್, ಅನೈತಿಕ ಪೊಲೀಸ್ ಗಿರಿಯಂತಹ ಸೆಕ್ಷನ್ ವಿಧಿಸಿ ಬೆದರಿಕೆಯ ಕೇಸ್ ಹಾಕಿದರೆ ಹೆದರಿ ಮೂಲೆ ಸೇರುತ್ತಾರೆ ಎಂಬುದು ನಿಮ್ಮ ಭ್ರಮೆ. ಅನ್ಯ ಮತೀಯರ ದುಷ್ಟ ಸಂಚನ್ನು ನಮ್ಮ ಕಾರ್ಯಕರ್ತರು ಮುಂದೆಯೂ ಬಯಲಿಗೆಳೆಯುತ್ತಾರೆ. ನಿಮ್ಮಿಂದ ಆಗುವುದಾದರೆ ತಡೆಯಿರಿ ಎಙದು ಡಾ.ಭರತ್ ಶೆಟ್ಟಿ ಸವಾಲು ಹಾಕಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು