12:18 AM Sunday5 - July 2026
ಬ್ರೇಕಿಂಗ್ ನ್ಯೂಸ್
ಕಳಸ: ಬೈಕಿಗೆ ಸೈಡ್ ಕೊಡಲು ಹೋಗಿ ತೋಟಕ್ಕೆ ನುಗ್ಗಿದ ಕಾರು; ಪ್ರಯಾಣಿಕರು ಪಾರು ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ…

ಇತ್ತೀಚಿನ ಸುದ್ದಿ

ಹೊಡೆಯದಿದ್ರೂ ಕೇಸು ಹಾಕ್ತೀರಿ, ಹಿಂದೂಗಳ ಮೇಲೆ ನಿಮ್ಮದೂ ನೈತಿಕ ಗೂಂಡಾಗಿರಿ: ಶಾಸಕ ಡಾ.ಭರತ್ ಶೆಟ್ಟಿ ಕಿಡಿ

30/11/2023, 01:40

ಸುರತ್ಕಲ್(reporterkarnataka.com):ಕಾಂಗ್ರೆಸ್ ಪೊಲೀಸ್ ಇಲಾಖೆಯ ಮೇಲೆ ಒತ್ತಡ ಹೇರಿ ಕೇಸು ಹಾಕಿಸುತ್ತಿದೆ.
ಹಿಂದೂ ಯುವತಿಯ ಜತೆಗಿದ್ದವನನ್ನು ಕೇವಲ ವಿಚಾರಿಸಿದ ಮಾತ್ರಕ್ಕೆ ಕೇಸು ಹಾಕುದಾದ್ರೆ, ನಿಮ್ಮದೂ ಹಿಂದೂಗಳ ಮೇಲೆ ನೈತಿಕ ಪೊಲೀಸ್ ಗಿರಿಯೆ ಎಂದು ಕಾಂಗ್ರೆಸ್ ಆಡಳಿತವನ್ನು ಶಾಸಕ ಡಾ.ಭರತ್ ಶೆಟ್ಟಿ ವೈ. ಪ್ರಶ್ನಿಸಿದ್ದಾರೆ.
ಮೈ ಕೈ ಮುಟ್ಟದೆ ಪ್ರಶ್ನಿಸಿದರೂ ಕೇಸು, ಹೊಡೆದರೂ ಕೇಸು ಹಾಕುದಾದ್ರೆ‌ ಹಿಂದೂ ಕಾರ್ಯಕರ್ತರಿಗೆ ನೀವೇ ಪರೋಕ್ಷವಾಗಿ ಪ್ರೇರಣೆ ನೀಡುತ್ತಿದ್ದೀರಿ. ಮಂಗಳೂರಿನ ಮಾರ್ಗನ್ಸ್ ಗೇಟ್ ಬಳಿ ಹಿಂದೂ ಯುವತಿಯನ್ನು ಅನ್ಯ ಮತೀಯ ಯುವಕ ಪುಸಲಾಯಿಸಿ ಕರೆದೊಯ್ದದಾಗ ಯಾವುದೇ ಹಲ್ಲೆ ಅಥವಾ ನಿಂದನೆ ಮಾಡದೆ ವಿಚಾರಿಸಿದ್ದೇ ಮಹಾ ಅಪರಾಧ ಎಂಬಂತೆ ಪೊಲೀಸ್ ಇಲಾಖೆಯ ಮೇಲೆ ಒತ್ತಡ ಹೇರಿ ಅವರ ಮೇಲೆ ಕೇಸು ದಾಖಲಿಸಿ ಯುವಕರ ಭವಿಷ್ಯ ಮುಸುಕಾಗಿಸುವ ಹುನ್ನಾರವನ್ನು ಕಾಂಗ್ರೆಸ್ ಸರಕಾರ ಮಾಡುತ್ತಿದೆ.
ಹಿಂದೂ ಸಮಾಜದ ಒಳಿತಿಗಾಗಿ, ನಮ್ಮ ಸಹೋದರಿಯರ ಮಾನ, ಪ್ರಾಣ ರಕ್ಷಣೆಗೆ ಮುಂದೆಯೂ ನಮ್ಮ ಪಕ್ಷ , ನಮ್ಮ ಹಿಂದೂ ಸಂಘಟನೆಯ ಕಾರ್ಯಕರ್ತರು ಇಟ್ಟ ಹೆಜ್ಜೆಯನ್ನು ಹಿಂದೆ ಇಡುವುದಿಲ್ಲ. ಗಡಿಪಾರು, ರೌಡಿ ಶೀಟರ್, ಅನೈತಿಕ ಪೊಲೀಸ್ ಗಿರಿಯಂತಹ ಸೆಕ್ಷನ್ ವಿಧಿಸಿ ಬೆದರಿಕೆಯ ಕೇಸ್ ಹಾಕಿದರೆ ಹೆದರಿ ಮೂಲೆ ಸೇರುತ್ತಾರೆ ಎಂಬುದು ನಿಮ್ಮ ಭ್ರಮೆ. ಅನ್ಯ ಮತೀಯರ ದುಷ್ಟ ಸಂಚನ್ನು ನಮ್ಮ ಕಾರ್ಯಕರ್ತರು ಮುಂದೆಯೂ ಬಯಲಿಗೆಳೆಯುತ್ತಾರೆ. ನಿಮ್ಮಿಂದ ಆಗುವುದಾದರೆ ತಡೆಯಿರಿ ಎಙದು ಡಾ.ಭರತ್ ಶೆಟ್ಟಿ ಸವಾಲು ಹಾಕಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು