9:17 PM Saturday2 - May 2026
ಬ್ರೇಕಿಂಗ್ ನ್ಯೂಸ್
ಅಂಜನಾದ್ರಿ ದರ್ಶನಕ್ಕೆ ಹೊರಟಿದ್ದ ಭಕ್ತರ ವಾಹನದ ಟಯರ್ ಬ್ಲಾಸ್ಟ್: ಓರ್ವ ಸಾವು, 7… ಶೃಂಗೇರಿ ವಿಧಾನಸಭಾ ಕ್ಷೇತ್ರ: ಮರು ಮತ ಎಣಿಕೆಯಲ್ಲೂ ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡಗೆ… ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ…

ಇತ್ತೀಚಿನ ಸುದ್ದಿ

ಹೊಡೆಯದಿದ್ರೂ ಕೇಸು ಹಾಕ್ತೀರಿ, ಹಿಂದೂಗಳ ಮೇಲೆ ನಿಮ್ಮದೂ ನೈತಿಕ ಗೂಂಡಾಗಿರಿ: ಶಾಸಕ ಡಾ.ಭರತ್ ಶೆಟ್ಟಿ ಕಿಡಿ

30/11/2023, 01:40

ಸುರತ್ಕಲ್(reporterkarnataka.com):ಕಾಂಗ್ರೆಸ್ ಪೊಲೀಸ್ ಇಲಾಖೆಯ ಮೇಲೆ ಒತ್ತಡ ಹೇರಿ ಕೇಸು ಹಾಕಿಸುತ್ತಿದೆ.
ಹಿಂದೂ ಯುವತಿಯ ಜತೆಗಿದ್ದವನನ್ನು ಕೇವಲ ವಿಚಾರಿಸಿದ ಮಾತ್ರಕ್ಕೆ ಕೇಸು ಹಾಕುದಾದ್ರೆ, ನಿಮ್ಮದೂ ಹಿಂದೂಗಳ ಮೇಲೆ ನೈತಿಕ ಪೊಲೀಸ್ ಗಿರಿಯೆ ಎಂದು ಕಾಂಗ್ರೆಸ್ ಆಡಳಿತವನ್ನು ಶಾಸಕ ಡಾ.ಭರತ್ ಶೆಟ್ಟಿ ವೈ. ಪ್ರಶ್ನಿಸಿದ್ದಾರೆ.
ಮೈ ಕೈ ಮುಟ್ಟದೆ ಪ್ರಶ್ನಿಸಿದರೂ ಕೇಸು, ಹೊಡೆದರೂ ಕೇಸು ಹಾಕುದಾದ್ರೆ‌ ಹಿಂದೂ ಕಾರ್ಯಕರ್ತರಿಗೆ ನೀವೇ ಪರೋಕ್ಷವಾಗಿ ಪ್ರೇರಣೆ ನೀಡುತ್ತಿದ್ದೀರಿ. ಮಂಗಳೂರಿನ ಮಾರ್ಗನ್ಸ್ ಗೇಟ್ ಬಳಿ ಹಿಂದೂ ಯುವತಿಯನ್ನು ಅನ್ಯ ಮತೀಯ ಯುವಕ ಪುಸಲಾಯಿಸಿ ಕರೆದೊಯ್ದದಾಗ ಯಾವುದೇ ಹಲ್ಲೆ ಅಥವಾ ನಿಂದನೆ ಮಾಡದೆ ವಿಚಾರಿಸಿದ್ದೇ ಮಹಾ ಅಪರಾಧ ಎಂಬಂತೆ ಪೊಲೀಸ್ ಇಲಾಖೆಯ ಮೇಲೆ ಒತ್ತಡ ಹೇರಿ ಅವರ ಮೇಲೆ ಕೇಸು ದಾಖಲಿಸಿ ಯುವಕರ ಭವಿಷ್ಯ ಮುಸುಕಾಗಿಸುವ ಹುನ್ನಾರವನ್ನು ಕಾಂಗ್ರೆಸ್ ಸರಕಾರ ಮಾಡುತ್ತಿದೆ.
ಹಿಂದೂ ಸಮಾಜದ ಒಳಿತಿಗಾಗಿ, ನಮ್ಮ ಸಹೋದರಿಯರ ಮಾನ, ಪ್ರಾಣ ರಕ್ಷಣೆಗೆ ಮುಂದೆಯೂ ನಮ್ಮ ಪಕ್ಷ , ನಮ್ಮ ಹಿಂದೂ ಸಂಘಟನೆಯ ಕಾರ್ಯಕರ್ತರು ಇಟ್ಟ ಹೆಜ್ಜೆಯನ್ನು ಹಿಂದೆ ಇಡುವುದಿಲ್ಲ. ಗಡಿಪಾರು, ರೌಡಿ ಶೀಟರ್, ಅನೈತಿಕ ಪೊಲೀಸ್ ಗಿರಿಯಂತಹ ಸೆಕ್ಷನ್ ವಿಧಿಸಿ ಬೆದರಿಕೆಯ ಕೇಸ್ ಹಾಕಿದರೆ ಹೆದರಿ ಮೂಲೆ ಸೇರುತ್ತಾರೆ ಎಂಬುದು ನಿಮ್ಮ ಭ್ರಮೆ. ಅನ್ಯ ಮತೀಯರ ದುಷ್ಟ ಸಂಚನ್ನು ನಮ್ಮ ಕಾರ್ಯಕರ್ತರು ಮುಂದೆಯೂ ಬಯಲಿಗೆಳೆಯುತ್ತಾರೆ. ನಿಮ್ಮಿಂದ ಆಗುವುದಾದರೆ ತಡೆಯಿರಿ ಎಙದು ಡಾ.ಭರತ್ ಶೆಟ್ಟಿ ಸವಾಲು ಹಾಕಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು