12:45 AM Wednesday25 - March 2026
ಬ್ರೇಕಿಂಗ್ ನ್ಯೂಸ್
ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ

ಇತ್ತೀಚಿನ ಸುದ್ದಿ

ಹೊಲದಲ್ಲಿ ಕೆಲಸ ಮಾಡುತ್ತಿದ್ದ ಗೃಹಿಣಿ ಮೇಲೆರಗಿದ ಕಾಮುಕ: ಬೊಬ್ಬೆ ಕೇಳಿ ಓಡಿ ಬಂದ ಪತಿ ಜತೆ ಪತ್ನಿಗೂ ಕುಡುಗೋಲಿನಿಂದ ಹಲ್ಲೆ

18/12/2023, 12:19

ಮೋಹನ್ ನಂಜನಗೂಡು ಮೈಸೂರು

info.reporterkarnataka@ gmail.com

ನಂಜನಗೂಡು ತಾಲೂಕಿನ ಹೊಸ ಕಡಜೇಟಿ ಗ್ರಾಮದ ಮಹದೇವಸ್ವಾಮಿ ಆತನ ಪತ್ನಿ ಸುಜಾತ ಎಂಬುವರು ಕಂದೇಗಾಲ ಸಮೀಪವಿರುವ ಮೈಸೂರು ಮೂಲದ ವ್ಯಕ್ತಿಯ ತೋಟ ಒಂದರಲ್ಲಿ ಕೂಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು.


ಕೆಲಸ ಮಾಡುವ ತೋಟದ ಒಳಭಾಗದಲ್ಲಿ ವಿದ್ಯುತ್ ಫೀಸ್ ಹಾಕಲು ತೆರಳಿದ ವಿವಾಹಿತ ಮಹಿಳೆಯ ಪತಿ ಮಹದೇವಸ್ವಾಮಿ ಇಲ್ಲದೆ ಇರುವ ಸಮಯವನ್ನೇ ನೋಡಿ ತೋಟದ ಮನೆಯ ಬಳಿ ಒಬ್ಬಂಟಿ ಮಹಿಳೆ ಇರುವುದನೆ ಗಮನಿಸಿದ ಕಾಮುಕ ನವೀನ ಎಂಬಾತ ಏಕಾಏಕಿ ತಂತಿ ಬೇಲಿಯನ್ನು ಜಿಗಿದು ಕೆಲಸ ಮಾಡುತ್ತಿದ್ದ ವಿವಾಹಿತ ಮಹಿಳೆ ಸುಜಾತ ಎಂಬುವರ ಮೇಲೇರಗಿ ಚಿರಟ ಮಾಡದಂತೆ ಬಾಯಿಗೆ ಬಟ್ಟೆಯನ್ನು ತುರುಕಿ ಬಲತ್ಕಾರಕ್ಕೆ ಮುಂದಾಗಿದ್ದಾನೆ. ಕಿರಾತಕ ನಿಂದ ತಪ್ಪಿಸಿಕೊಳ್ಳುವ ಸಲುವಾಗಿ ಚೀರಾಟ ಮಾಡುತ್ತಿರುವುದನ್ನು ಕೇಳಿ ಸಮೀಪದಲ್ಲಿ ಇದ್ದ ಸುಜಾತಳ ಗಂಡ ಮಹದೇವಸ್ವಾಮಿ ಸ್ಥಳಕ್ಕೆ ಆಗಮಿಸಿದಾಗ ಆತನ ಮೇಲೆಯೂ ಕುಡುಗೋಲಿನಿಂದ ಹಲ್ಲೆ ಮಾಡಿ ಸ್ಥಳದಿಂದ ಕಾಮುಕ ನವೀನ ಪರಾರಿಯಾಗಿದ್ದಾನೆ.
ನಂಜನಗೂಡಿನ ಸರ್ಕಾರಿ ಆಸ್ಪತ್ರೆಯಲ್ಲಿ ಸುಜಾತ ಮತ್ತು ಆತನ ಪತಿ ಮಹದೇವಸ್ವಾಮಿ ತುರ್ತು ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಸುಜಾತಳ ಮೈ ಭಾಗದ ವಿವಿಧ ಭಾಗಗಳಲ್ಲಿ ಕಚ್ಚಿರುವ ಗುರುತು ಮತ್ತು ಕುಡುಗೋಲಿನಿಂದ ಹಲ್ಲೆ ಮಾಡಿರುವ ದೆಸೆಯಿಂದ ನಂಜನಗೂಡು ಸರ್ಕಾರಿ ಆಸ್ಪತ್ರೆಯ ತುರ್ತು ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ವಿಚಾರವಾಗಿ ಹುಲ್ಲಹಳ್ಳಿ ಪೊಲೀಸ್ ಠಾಣೆಯ ಪಿಎಸ್ಐ ರಮೇಶ್ ಕರ್ಕಿ ಕಟ್ಟೆ ದೊಡ್ಡಯ್ಯ ನೇತೃತ್ವದಲ್ಲಿ ಸ್ಥಳ ಪರಿಶೀಲನೆ ಮಾಡಿ ಘಟನೆಯ ಸವಿವಾರವನ್ನು ತಿಳಿದು ಪ್ರಕರಣ ದಾಖಲಿಸಿಕೊಂಡು ಕಿರಾತಕ ಆರೋಪಿಯ ಬಂಧನಕ್ಕೆ ಹುಲ್ಲಹಳ್ಳಿ ಪೊಲೀಸರು ಬಲೆ ಬೀಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು