7:28 AM Thursday18 - June 2026
ಬ್ರೇಕಿಂಗ್ ನ್ಯೂಸ್
ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ

ಇತ್ತೀಚಿನ ಸುದ್ದಿ

ಹೊಲದಲ್ಲಿ ಕೆಲಸ ಮಾಡುತ್ತಿದ್ದ ಗೃಹಿಣಿ ಮೇಲೆರಗಿದ ಕಾಮುಕ: ಬೊಬ್ಬೆ ಕೇಳಿ ಓಡಿ ಬಂದ ಪತಿ ಜತೆ ಪತ್ನಿಗೂ ಕುಡುಗೋಲಿನಿಂದ ಹಲ್ಲೆ

18/12/2023, 12:19

ಮೋಹನ್ ನಂಜನಗೂಡು ಮೈಸೂರು

info.reporterkarnataka@ gmail.com

ನಂಜನಗೂಡು ತಾಲೂಕಿನ ಹೊಸ ಕಡಜೇಟಿ ಗ್ರಾಮದ ಮಹದೇವಸ್ವಾಮಿ ಆತನ ಪತ್ನಿ ಸುಜಾತ ಎಂಬುವರು ಕಂದೇಗಾಲ ಸಮೀಪವಿರುವ ಮೈಸೂರು ಮೂಲದ ವ್ಯಕ್ತಿಯ ತೋಟ ಒಂದರಲ್ಲಿ ಕೂಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು.


ಕೆಲಸ ಮಾಡುವ ತೋಟದ ಒಳಭಾಗದಲ್ಲಿ ವಿದ್ಯುತ್ ಫೀಸ್ ಹಾಕಲು ತೆರಳಿದ ವಿವಾಹಿತ ಮಹಿಳೆಯ ಪತಿ ಮಹದೇವಸ್ವಾಮಿ ಇಲ್ಲದೆ ಇರುವ ಸಮಯವನ್ನೇ ನೋಡಿ ತೋಟದ ಮನೆಯ ಬಳಿ ಒಬ್ಬಂಟಿ ಮಹಿಳೆ ಇರುವುದನೆ ಗಮನಿಸಿದ ಕಾಮುಕ ನವೀನ ಎಂಬಾತ ಏಕಾಏಕಿ ತಂತಿ ಬೇಲಿಯನ್ನು ಜಿಗಿದು ಕೆಲಸ ಮಾಡುತ್ತಿದ್ದ ವಿವಾಹಿತ ಮಹಿಳೆ ಸುಜಾತ ಎಂಬುವರ ಮೇಲೇರಗಿ ಚಿರಟ ಮಾಡದಂತೆ ಬಾಯಿಗೆ ಬಟ್ಟೆಯನ್ನು ತುರುಕಿ ಬಲತ್ಕಾರಕ್ಕೆ ಮುಂದಾಗಿದ್ದಾನೆ. ಕಿರಾತಕ ನಿಂದ ತಪ್ಪಿಸಿಕೊಳ್ಳುವ ಸಲುವಾಗಿ ಚೀರಾಟ ಮಾಡುತ್ತಿರುವುದನ್ನು ಕೇಳಿ ಸಮೀಪದಲ್ಲಿ ಇದ್ದ ಸುಜಾತಳ ಗಂಡ ಮಹದೇವಸ್ವಾಮಿ ಸ್ಥಳಕ್ಕೆ ಆಗಮಿಸಿದಾಗ ಆತನ ಮೇಲೆಯೂ ಕುಡುಗೋಲಿನಿಂದ ಹಲ್ಲೆ ಮಾಡಿ ಸ್ಥಳದಿಂದ ಕಾಮುಕ ನವೀನ ಪರಾರಿಯಾಗಿದ್ದಾನೆ.
ನಂಜನಗೂಡಿನ ಸರ್ಕಾರಿ ಆಸ್ಪತ್ರೆಯಲ್ಲಿ ಸುಜಾತ ಮತ್ತು ಆತನ ಪತಿ ಮಹದೇವಸ್ವಾಮಿ ತುರ್ತು ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಸುಜಾತಳ ಮೈ ಭಾಗದ ವಿವಿಧ ಭಾಗಗಳಲ್ಲಿ ಕಚ್ಚಿರುವ ಗುರುತು ಮತ್ತು ಕುಡುಗೋಲಿನಿಂದ ಹಲ್ಲೆ ಮಾಡಿರುವ ದೆಸೆಯಿಂದ ನಂಜನಗೂಡು ಸರ್ಕಾರಿ ಆಸ್ಪತ್ರೆಯ ತುರ್ತು ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ವಿಚಾರವಾಗಿ ಹುಲ್ಲಹಳ್ಳಿ ಪೊಲೀಸ್ ಠಾಣೆಯ ಪಿಎಸ್ಐ ರಮೇಶ್ ಕರ್ಕಿ ಕಟ್ಟೆ ದೊಡ್ಡಯ್ಯ ನೇತೃತ್ವದಲ್ಲಿ ಸ್ಥಳ ಪರಿಶೀಲನೆ ಮಾಡಿ ಘಟನೆಯ ಸವಿವಾರವನ್ನು ತಿಳಿದು ಪ್ರಕರಣ ದಾಖಲಿಸಿಕೊಂಡು ಕಿರಾತಕ ಆರೋಪಿಯ ಬಂಧನಕ್ಕೆ ಹುಲ್ಲಹಳ್ಳಿ ಪೊಲೀಸರು ಬಲೆ ಬೀಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು