1:30 PM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಬೆಂಗಳೂರಿನಲ್ಲಿ ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾಸಂಸ್ಥೆಯಿಂದ ಹೋಳಿ ಆಚರಣೆ: ಓಕುಳಿಯಾಟ

16/03/2025, 19:58

ಬೆಂಗಳೂರು(reporterkarnataka.com): ಬೆಂಗಳೂರಿನಲ್ಲಿರುವ ಉತ್ತರ ಕರ್ನಾಟಕ ಸಂಘ ಸಂಸ್ಥೆ ವತಿಯಿಂದ ರಾಜಾಜಿನಗರದ ರಾಮಮಂದಿರ ಮೈದಾನದಲ್ಲಿ ಭಾನುವಾರ ಅದ್ದೂರಿ ಹೋಳಿ ಹಬ್ಬ ಆಚರಿಸಲಾಯಿತು.
ಕಾಮನ ಮೂರ್ತಿ ದಹನ ಮಾಡಿ ಎಲ್ಲರೂ ಸಂಭ್ರಮದಿಂದ ಒಬ್ಬರಿಗೊಬ್ಬರು ಬಣ್ಣದ ಓಕುಳಿ ಆಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾಸಂಸ್ಥೆ ಅಧ್ಯಕ್ಷ ಶಿವಕುಮಾಥ ಮೇಟಿ ಮಾತನಾಡಿ, ಕಾಮ, ಕ್ರೋಧ, ಲೋಭ, ಮದ, ಮತ್ಸರ ಎಂಬ ಕೆಟ್ಟ ಗುಣಗಳನ್ನು ಕಾಮ ದಹನದ ಮೂಲಕ ಸುಟ್ಟು ಹಾಕಿ ಒಳ್ಳೆಯ ಗುಣಗಳನ್ನು ಬೆಳೆಸಿಕೊಂಡು ಹೋಗಬೇಕು ಎಂದು ಹೋಳಿ ಹಬ್ಬ ಆಚರಿಸುತ್ತೆವೆ ಎಂದು ಹೇಳಿದರು.
ಹಿರಿಯರಾದ ಡಾ. ಬಸವರಾಜ ದಿಂಡೂರು ಮಾತನಾಡಿ, ಉತ್ತರ ಕರ್ನಾಟಕ ಭಾಗದಲ್ಲಿ ಐದು ದಿನ ಹೋಳಿ ಹಬ್ಬವನ್ನು ಅದ್ದೂರಿಯಾಗಿ ಆಚರಣೆ ಮಾಡುತ್ತೇವೆ. ನಮ್ಮ ಭಾಗದ ಸಂಸ್ಕೃತಿಯನ್ನು ಉಳಿಸಿ ಬೆಳೆಸಿಕೊಂಡು ಹೋಗುವ ದೃಷ್ಟಿಯಿಂದ ಬೆಂಗಳೂರಿನಲ್ಲಿ ಹೋಳಿ ಹಬ್ಬ ಆವರಿಸುತ್ತೇವೆ. ಉತ್ತರ ಕರ್ನಾಟಕ ಸಂಸ್ಕೃತಿ ಬೆಳೆಸುವಲ್ಲಿ ಯಾವಾಗಲೂ ಎತ್ತರದಲ್ಲಿ ಇರುತ್ತದೆ ಎಂದು ಹೇಳಿದರು.
ಕಿರುತೆರೆ ನಟಿ ಶ್ರೀದೇವಿ ಮೆಳ್ಳಿಗಟ್ಟಿ ಮಾತನಾಡಿ, ಉತ್ತರ ಕರ್ನಾಟಕದ ಗಂಡು ಹಬ್ಬ ಹೋಳಿ ಹಬ್ಬವನ್ನು ಎಲ್ಲರೂ ಸೇರಿ ಸಂಭ್ರಮದಿಂದ ಆಚರಿಸಿ, ನಾವೆಲ್ಲರೂ ಬಣ್ಣ ಆಡುವ ಮೂಲಕ ಖುಷಿಪಟ್ಟು ನಮ್ಮ ಸಂಸ್ಕೃತಿ ಉಳಿಸಲು ಈ ರೀತಿಯ ಹಬ್ಬಗಳನ್ನು ಆಚರಣೆ ಮಾಡಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾಸಂಸ್ಥೆ ಪ್ರಧಾನ ಕಾರ್ಯದರ್ಶಿ ಶಂಕರ ಪಾಗೋಜಿ, ಕಾರ್ಯದರ್ಶಿ ಬಸಯ್ಯ ನಂದಿಕೋಲ, ಶಾಂತೇಶ್ ಹಿರೇಮಠ, ಶಿವನಗೌಡ ಬಿರಾದಾರ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು