12:23 PM Wednesday4 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

ಬೆಂಗಳೂರಿನಲ್ಲಿ ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾಸಂಸ್ಥೆಯಿಂದ ಹೋಳಿ ಆಚರಣೆ: ಓಕುಳಿಯಾಟ

16/03/2025, 19:58

ಬೆಂಗಳೂರು(reporterkarnataka.com): ಬೆಂಗಳೂರಿನಲ್ಲಿರುವ ಉತ್ತರ ಕರ್ನಾಟಕ ಸಂಘ ಸಂಸ್ಥೆ ವತಿಯಿಂದ ರಾಜಾಜಿನಗರದ ರಾಮಮಂದಿರ ಮೈದಾನದಲ್ಲಿ ಭಾನುವಾರ ಅದ್ದೂರಿ ಹೋಳಿ ಹಬ್ಬ ಆಚರಿಸಲಾಯಿತು.
ಕಾಮನ ಮೂರ್ತಿ ದಹನ ಮಾಡಿ ಎಲ್ಲರೂ ಸಂಭ್ರಮದಿಂದ ಒಬ್ಬರಿಗೊಬ್ಬರು ಬಣ್ಣದ ಓಕುಳಿ ಆಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾಸಂಸ್ಥೆ ಅಧ್ಯಕ್ಷ ಶಿವಕುಮಾಥ ಮೇಟಿ ಮಾತನಾಡಿ, ಕಾಮ, ಕ್ರೋಧ, ಲೋಭ, ಮದ, ಮತ್ಸರ ಎಂಬ ಕೆಟ್ಟ ಗುಣಗಳನ್ನು ಕಾಮ ದಹನದ ಮೂಲಕ ಸುಟ್ಟು ಹಾಕಿ ಒಳ್ಳೆಯ ಗುಣಗಳನ್ನು ಬೆಳೆಸಿಕೊಂಡು ಹೋಗಬೇಕು ಎಂದು ಹೋಳಿ ಹಬ್ಬ ಆಚರಿಸುತ್ತೆವೆ ಎಂದು ಹೇಳಿದರು.
ಹಿರಿಯರಾದ ಡಾ. ಬಸವರಾಜ ದಿಂಡೂರು ಮಾತನಾಡಿ, ಉತ್ತರ ಕರ್ನಾಟಕ ಭಾಗದಲ್ಲಿ ಐದು ದಿನ ಹೋಳಿ ಹಬ್ಬವನ್ನು ಅದ್ದೂರಿಯಾಗಿ ಆಚರಣೆ ಮಾಡುತ್ತೇವೆ. ನಮ್ಮ ಭಾಗದ ಸಂಸ್ಕೃತಿಯನ್ನು ಉಳಿಸಿ ಬೆಳೆಸಿಕೊಂಡು ಹೋಗುವ ದೃಷ್ಟಿಯಿಂದ ಬೆಂಗಳೂರಿನಲ್ಲಿ ಹೋಳಿ ಹಬ್ಬ ಆವರಿಸುತ್ತೇವೆ. ಉತ್ತರ ಕರ್ನಾಟಕ ಸಂಸ್ಕೃತಿ ಬೆಳೆಸುವಲ್ಲಿ ಯಾವಾಗಲೂ ಎತ್ತರದಲ್ಲಿ ಇರುತ್ತದೆ ಎಂದು ಹೇಳಿದರು.
ಕಿರುತೆರೆ ನಟಿ ಶ್ರೀದೇವಿ ಮೆಳ್ಳಿಗಟ್ಟಿ ಮಾತನಾಡಿ, ಉತ್ತರ ಕರ್ನಾಟಕದ ಗಂಡು ಹಬ್ಬ ಹೋಳಿ ಹಬ್ಬವನ್ನು ಎಲ್ಲರೂ ಸೇರಿ ಸಂಭ್ರಮದಿಂದ ಆಚರಿಸಿ, ನಾವೆಲ್ಲರೂ ಬಣ್ಣ ಆಡುವ ಮೂಲಕ ಖುಷಿಪಟ್ಟು ನಮ್ಮ ಸಂಸ್ಕೃತಿ ಉಳಿಸಲು ಈ ರೀತಿಯ ಹಬ್ಬಗಳನ್ನು ಆಚರಣೆ ಮಾಡಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾಸಂಸ್ಥೆ ಪ್ರಧಾನ ಕಾರ್ಯದರ್ಶಿ ಶಂಕರ ಪಾಗೋಜಿ, ಕಾರ್ಯದರ್ಶಿ ಬಸಯ್ಯ ನಂದಿಕೋಲ, ಶಾಂತೇಶ್ ಹಿರೇಮಠ, ಶಿವನಗೌಡ ಬಿರಾದಾರ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು