4:13 AM Tuesday25 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಬೆಂಗಳೂರಿನಲ್ಲಿ ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾಸಂಸ್ಥೆಯಿಂದ ಹೋಳಿ ಆಚರಣೆ: ಓಕುಳಿಯಾಟ

16/03/2025, 19:58

ಬೆಂಗಳೂರು(reporterkarnataka.com): ಬೆಂಗಳೂರಿನಲ್ಲಿರುವ ಉತ್ತರ ಕರ್ನಾಟಕ ಸಂಘ ಸಂಸ್ಥೆ ವತಿಯಿಂದ ರಾಜಾಜಿನಗರದ ರಾಮಮಂದಿರ ಮೈದಾನದಲ್ಲಿ ಭಾನುವಾರ ಅದ್ದೂರಿ ಹೋಳಿ ಹಬ್ಬ ಆಚರಿಸಲಾಯಿತು.
ಕಾಮನ ಮೂರ್ತಿ ದಹನ ಮಾಡಿ ಎಲ್ಲರೂ ಸಂಭ್ರಮದಿಂದ ಒಬ್ಬರಿಗೊಬ್ಬರು ಬಣ್ಣದ ಓಕುಳಿ ಆಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾಸಂಸ್ಥೆ ಅಧ್ಯಕ್ಷ ಶಿವಕುಮಾಥ ಮೇಟಿ ಮಾತನಾಡಿ, ಕಾಮ, ಕ್ರೋಧ, ಲೋಭ, ಮದ, ಮತ್ಸರ ಎಂಬ ಕೆಟ್ಟ ಗುಣಗಳನ್ನು ಕಾಮ ದಹನದ ಮೂಲಕ ಸುಟ್ಟು ಹಾಕಿ ಒಳ್ಳೆಯ ಗುಣಗಳನ್ನು ಬೆಳೆಸಿಕೊಂಡು ಹೋಗಬೇಕು ಎಂದು ಹೋಳಿ ಹಬ್ಬ ಆಚರಿಸುತ್ತೆವೆ ಎಂದು ಹೇಳಿದರು.
ಹಿರಿಯರಾದ ಡಾ. ಬಸವರಾಜ ದಿಂಡೂರು ಮಾತನಾಡಿ, ಉತ್ತರ ಕರ್ನಾಟಕ ಭಾಗದಲ್ಲಿ ಐದು ದಿನ ಹೋಳಿ ಹಬ್ಬವನ್ನು ಅದ್ದೂರಿಯಾಗಿ ಆಚರಣೆ ಮಾಡುತ್ತೇವೆ. ನಮ್ಮ ಭಾಗದ ಸಂಸ್ಕೃತಿಯನ್ನು ಉಳಿಸಿ ಬೆಳೆಸಿಕೊಂಡು ಹೋಗುವ ದೃಷ್ಟಿಯಿಂದ ಬೆಂಗಳೂರಿನಲ್ಲಿ ಹೋಳಿ ಹಬ್ಬ ಆವರಿಸುತ್ತೇವೆ. ಉತ್ತರ ಕರ್ನಾಟಕ ಸಂಸ್ಕೃತಿ ಬೆಳೆಸುವಲ್ಲಿ ಯಾವಾಗಲೂ ಎತ್ತರದಲ್ಲಿ ಇರುತ್ತದೆ ಎಂದು ಹೇಳಿದರು.
ಕಿರುತೆರೆ ನಟಿ ಶ್ರೀದೇವಿ ಮೆಳ್ಳಿಗಟ್ಟಿ ಮಾತನಾಡಿ, ಉತ್ತರ ಕರ್ನಾಟಕದ ಗಂಡು ಹಬ್ಬ ಹೋಳಿ ಹಬ್ಬವನ್ನು ಎಲ್ಲರೂ ಸೇರಿ ಸಂಭ್ರಮದಿಂದ ಆಚರಿಸಿ, ನಾವೆಲ್ಲರೂ ಬಣ್ಣ ಆಡುವ ಮೂಲಕ ಖುಷಿಪಟ್ಟು ನಮ್ಮ ಸಂಸ್ಕೃತಿ ಉಳಿಸಲು ಈ ರೀತಿಯ ಹಬ್ಬಗಳನ್ನು ಆಚರಣೆ ಮಾಡಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾಸಂಸ್ಥೆ ಪ್ರಧಾನ ಕಾರ್ಯದರ್ಶಿ ಶಂಕರ ಪಾಗೋಜಿ, ಕಾರ್ಯದರ್ಶಿ ಬಸಯ್ಯ ನಂದಿಕೋಲ, ಶಾಂತೇಶ್ ಹಿರೇಮಠ, ಶಿವನಗೌಡ ಬಿರಾದಾರ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು