2:50 PM Sunday30 - November 2025
ಬ್ರೇಕಿಂಗ್ ನ್ಯೂಸ್
ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ… ಶಾಲೆಯಂಗಳದಲ್ಲಿ ತಾರಾಲಯ: ಗ್ರಾಮೀಣ ಮಕ್ಕಳಲ್ಲಿ ಖಗೋಳ ವಿಜ್ಞಾನ ಕೌತುಕ ಬಿತ್ತುವ ಗುರಿ; ಮುಖ್ಯಮಂತ್ರಿ…

ಇತ್ತೀಚಿನ ಸುದ್ದಿ

ಪವಿತ್ರ ಕಾವೇರಿ ತೀರ್ಥೋದ್ಭವದ ದಿನಾಂಕ ನಿಗದಿ: ಅಕ್ಟೋಬರ್ 17ರ ಮಧ್ಯಾಹ್ನ 1 ಗಂಟೆ 44 ನಿಮಿಷಕ್ಕೆ ಉಗಮ

15/09/2025, 20:47

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಜೀವನದಿ ಕಾವೇರಿ ಪವಿತ್ರ ಕ್ಷೇತ್ರ ಕೊಡಗಿನ ತಲಕಾವೇರಿಯಲ್ಲಿ ವರ್ಷಕೊಮ್ಮೆ ಜರುಗಲಿರುವ ತೀರ್ಥೋದ್ಬವ ಈ ಭಾರಿ ಅಕ್ಟೋಬರ್ 17ರ ಮಧ್ಯಾಹ್ನ 1 ಗಂಟೆ 44 ನಿಮಿಷಕ್ಕೆ ಮಕರ ಲಗ್ನದಲ್ಲಿ ತೀರ್ಥರೂಪಿಣಿಯಾಗಿ ಕಾವೇರಿ ದರ್ಶನ ಕೊಡಲಿದ್ದಾಳೆ.


ಸೆಪ್ಟೆಂಬರ್ 26ರಿಂದಲೇ ಬೆಳಗ್ಗೆ 9:31ಕ್ಕೆ ತುಲಾ ಲಗ್ನದಲ್ಲಿ ಪತ್ತಾಯಕ್ಕೆ ಅಕ್ಕಿ ಹಾಕುವುದು,ಅಕ್ಟೋಬರ್ 4ರ ಬೆಳಗ್ಗೆ 8:33ರ ತುಲಾ ಲಗ್ನದಲ್ಲಿ ಆಜ್ಞಾ ಮುಹೂರ್ತ,ಅಕ್ಟೋಬರ್. 14ರ ಬೆಳಗ್ಗೆ 11:45ಕ್ಕೆ ಧನುರ್ ಲಗ್ನದಲ್ಲಿ ಅಕ್ಷಯ ಪಾತ್ರೆ ಇರಿಸುವುದು,ಅದೇ ದಿನ ಸಂಜೆ 4:45ಕ್ಕೆ ಮೀನಾ ಲಗ್ನದಲ್ಲಿ ಕಾಣಿಕೆ ಡಬ್ಬಿ ಇರಿಸುವುದು,ಅಕ್ಟೋಬರ್ 17ರ ಮಧ್ಯಾಹ್ನ 1:44 ಮಕರ ಲಗ್ನದಲ್ಲಿ ಪವಿತ್ರ ತೀರ್ಥೋದ್ಭವ ನಡೆಯಲಿದೆ. ಇಂದು ಭಾಗಮಂಡಲದಲ್ಲಿ ಕಾವೇರಿ ಜಾತ್ರೆ ಸಂಬಂಧ ಜಿಲ್ಲಾ ಉಸ್ತುವಾರಿ ಸಚಿವ ಎನ್. ಎಸ್ ಭೋಸರಾಜು ಸಮ್ಮುಖದಲ್ಲಿ, ಸ್ಥಳೀಯ ಶಾಸಕ ಎ. ಎಸ್. ಪೊನ್ನಣ್ಣ ಸಮ್ಮುಖದಲ್ಲಿ ಜಿಲ್ಲಾಡಳಿತ ಹಿಂದೂ ಧಾರ್ಮಿಕ ಮತ್ತು ದತ್ತಿ ಇಲಾಖೆಯಿಂದ ಸಭೆ ನಡೆಸಿ ಅಧಿಕೃತ ಮಾಹಿತಿ ನೀಡಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು