3:40 PM Tuesday25 - August 2026
ಬ್ರೇಕಿಂಗ್ ನ್ಯೂಸ್
ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.…

ಇತ್ತೀಚಿನ ಸುದ್ದಿ

ಪವಿತ್ರ ಕಾವೇರಿ ತೀರ್ಥೋದ್ಭವದ ದಿನಾಂಕ ನಿಗದಿ: ಅಕ್ಟೋಬರ್ 17ರ ಮಧ್ಯಾಹ್ನ 1 ಗಂಟೆ 44 ನಿಮಿಷಕ್ಕೆ ಉಗಮ

15/09/2025, 20:47

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಜೀವನದಿ ಕಾವೇರಿ ಪವಿತ್ರ ಕ್ಷೇತ್ರ ಕೊಡಗಿನ ತಲಕಾವೇರಿಯಲ್ಲಿ ವರ್ಷಕೊಮ್ಮೆ ಜರುಗಲಿರುವ ತೀರ್ಥೋದ್ಬವ ಈ ಭಾರಿ ಅಕ್ಟೋಬರ್ 17ರ ಮಧ್ಯಾಹ್ನ 1 ಗಂಟೆ 44 ನಿಮಿಷಕ್ಕೆ ಮಕರ ಲಗ್ನದಲ್ಲಿ ತೀರ್ಥರೂಪಿಣಿಯಾಗಿ ಕಾವೇರಿ ದರ್ಶನ ಕೊಡಲಿದ್ದಾಳೆ.


ಸೆಪ್ಟೆಂಬರ್ 26ರಿಂದಲೇ ಬೆಳಗ್ಗೆ 9:31ಕ್ಕೆ ತುಲಾ ಲಗ್ನದಲ್ಲಿ ಪತ್ತಾಯಕ್ಕೆ ಅಕ್ಕಿ ಹಾಕುವುದು,ಅಕ್ಟೋಬರ್ 4ರ ಬೆಳಗ್ಗೆ 8:33ರ ತುಲಾ ಲಗ್ನದಲ್ಲಿ ಆಜ್ಞಾ ಮುಹೂರ್ತ,ಅಕ್ಟೋಬರ್. 14ರ ಬೆಳಗ್ಗೆ 11:45ಕ್ಕೆ ಧನುರ್ ಲಗ್ನದಲ್ಲಿ ಅಕ್ಷಯ ಪಾತ್ರೆ ಇರಿಸುವುದು,ಅದೇ ದಿನ ಸಂಜೆ 4:45ಕ್ಕೆ ಮೀನಾ ಲಗ್ನದಲ್ಲಿ ಕಾಣಿಕೆ ಡಬ್ಬಿ ಇರಿಸುವುದು,ಅಕ್ಟೋಬರ್ 17ರ ಮಧ್ಯಾಹ್ನ 1:44 ಮಕರ ಲಗ್ನದಲ್ಲಿ ಪವಿತ್ರ ತೀರ್ಥೋದ್ಭವ ನಡೆಯಲಿದೆ. ಇಂದು ಭಾಗಮಂಡಲದಲ್ಲಿ ಕಾವೇರಿ ಜಾತ್ರೆ ಸಂಬಂಧ ಜಿಲ್ಲಾ ಉಸ್ತುವಾರಿ ಸಚಿವ ಎನ್. ಎಸ್ ಭೋಸರಾಜು ಸಮ್ಮುಖದಲ್ಲಿ, ಸ್ಥಳೀಯ ಶಾಸಕ ಎ. ಎಸ್. ಪೊನ್ನಣ್ಣ ಸಮ್ಮುಖದಲ್ಲಿ ಜಿಲ್ಲಾಡಳಿತ ಹಿಂದೂ ಧಾರ್ಮಿಕ ಮತ್ತು ದತ್ತಿ ಇಲಾಖೆಯಿಂದ ಸಭೆ ನಡೆಸಿ ಅಧಿಕೃತ ಮಾಹಿತಿ ನೀಡಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು