3:12 AM Saturday28 - June 2025
ಬ್ರೇಕಿಂಗ್ ನ್ಯೂಸ್
ಸಿದ್ದರಾಮಯ್ಯರಿಗೆ ಅಂಬೇಡ್ಕರ್ ಸಂವಿಧಾನ ಬೇಕಾ, ಇಂದಿರಾ ಗಾಂಧಿ ಸಂವಿಧಾನ ಬೇಕಾ: ಬಸವರಾಜ ಬೊಮ್ಮಾಯಿ… Mandya | ಕಾವೇರಿ ಜಲಾಯನ ಪ್ರದೇಶದಲ್ಲಿ ವ್ಯಾಪಕ ಮಳೆ: ಹ ಕೆಆರ್ ಎಸ್… ವಿಜೃಂಭಣೆ ರಭಸದಲ್ಲಿ ದಸರಾದ ಚಾರಿತ್ರಿಕ‌ ಮಹತ್ವ ಮರೆಯಾಗಬಾರದು: ಸೆ. 22ರಂದು ದಸರಾಕ್ಕೆ ಚಾಲನೆ:… ಹುಲಿಗಳ ಸಾವು ಸಂಪೂರ್ಣ ತನಿಖೆಯಾಗಲಿ; ಕಾಂಗ್ರೆಸ್ ಕಚ್ಚಾಟದಲ್ಲಿ ರಾಜ್ಯ ಅಭಿವೃದ್ಧಿ ಶೂನ್ಯ: ಬಸವರಾಜ… ಕೆಂಪೇಗೌಡರು ಎಲ್ಲರನ್ನೊಳಗೊಂಡ ಸಮಾಜ ನಿರ್ಮಾಣದ ದೂರದೃಷ್ಟಿಯ ಮುತ್ಸದ್ದಿ ನಾಯಕ: ಸಿಎಂ ಸಿದ್ದರಾಮಯ್ಯ ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಇಂಧನ ಸಚಿವ… ಮೂಕ ಪ್ರಾಣಿಗಳ ಮೇಲೆ ಕ್ರೌರ್ಯ ಕಂಡು ಬಂದರೆ ಕಠಿಣ ಕ್ರಮ; ಪೆಟ್ ಶಾಪ್‍ಗಳ… BNG | ಪ್ರತಿ ಜಿಲ್ಲೆಗೆ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ, ಟ್ರಾಮಾ ಸೆಂಟರ್, ಕ್ಯಾನ್ಸರ್… ಭ್ರಷ್ಟಾಚಾರದಿಂದ ರಾಜ್ಯ ಸರ್ಕಾರ ದಿಕ್ಕು ದೆಸೆ ಇಲ್ಲದೆ ನಡೆದಿದೆ: ಬಸವರಾಜ ಬೊಮ್ಮಾಯಿ ಬೆಂಗಳೂರಿಗೆ ಅತ್ಯಾಧುನಿಕ ಭೂಗತ ರಸ್ತೆ ಜಾಲ, ಪೆರಿಫೆರಲ್ ರಿಂಗ್ ರಸ್ತೆ: ಹೆದ್ದಾರಿ ಸಚಿವ…

ಇತ್ತೀಚಿನ ಸುದ್ದಿ

Hombelaku | ಸಹ್ಯಾದ್ರಿ ಮೈದಾನದಲ್ಲಿ ತೆರೆದುಕೊಂಡ ಸಾಂಸ್ಕೃತಿಕ ವೈಭವ: ಸುಗ್ಗಿ ಕುಣಿತ, ವೀರಗಾಸೆ, ಟೈಗರ್ ಡ್ಯಾನ್ಸ್ ಜತೆಗೆ ಕೋಲಾಟದ ಮೇಲಾಟ!

24/02/2025, 01:16

ಅನುಷ್ ಪಂಡಿತ್ ಮಂಗಳೂರು

info.reporterkarnataka@gmail.com

ಗ್ರಾಮ ಸ್ವರಾಜ್ ಪ್ರತಿಷ್ಠಾನ ನೇತೃತ್ವದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಪಂಚಾಯತ್ ಹಾಗೂ ಇತರ ಸ್ಥಳೀಯಾಡಳಿತ ಸಂಸ್ಥೆಗಳ ಸಹಕಾರದೊಂದಿಗೆ ಮಂಗಳೂರಿನ ಹೊರವಲಯದ ಅಡ್ಯಾರ್ ಸಹ್ಯಾದ್ರಿ ಕ್ಯಾಂಪಸ್ ನಲ್ಲಿ ನಡೆದ ‘ಹೊಂಬೆಳಕು’ ಕಾರ್ಯಕ್ರಮದಲ್ಲಿ ಸ್ಥಳೀಯಾಡಳಿತ ಸಂಸ್ಥೆಗಳ ಜನಪ್ರತಿನಿಧಿಗಳು ಹಾಗೂ ಸ್ಥಳೀಯಾಡಳಿತ ಸಂಸ್ಥೆಗಳ ಸಿಬ್ಬಂದಿಗಳಿಗೆ ವಿವಿಧ ಸಾಂಸ್ಕೃತಿಕ ಸ್ಪರ್ಧೆ ನಡೆಯಿತು.


ಸಹ್ಯಾದ್ರಿ ಕಾಲೇಜಿನ ವಿಶಾಲವಾದ ಮೈದಾನದಲ್ಲಿ ಸಾಂಸ್ಕೃತಿಕ ಲೋಕ ತೆರೆದುಕೊಂಡಿತು.



ಸುಗ್ಗಿ ಕುಣಿತ, ಕೋಲಾಟ, ಪೂಜಾ ಕುಣಿತ, ವೀರಗಾಸೆ, ಹುಲಿ ಕುಣಿತ, ಮಹಿಷ ಮರ್ಧಿನಿ ಮುಂತಾದ ಸಾಂಸ್ಕೃತಿಕ ವೈಭವ ನಡೆಯಿತು. ನಂತರ ಪೌರ ಕಾರ್ಮಿಕರಿಂದ ಆಕರ್ಷಕ ಪಥಸಂಚನ ನಡೆಯಿತು.


ಸಮಾರಂಭದಲ್ಲಿ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ, ಜನಪ್ರತಿನಿಧಿಗಳು, ಉಭಯ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಹಾಗೂ ಹಿರಿಯ ಸರಕಾರಿ ಅಧಿಕಾರಿಗಳು ಪಾಲ್ಗೊಂಡಿದ್ದರು.



*ಸನ್ಮಾನ:* ಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ. ಎನ್.ಎಂ. ರಾಜೇಂದ್ರ ಕುಮಾರ್ ಅವರ ಉತ್ತಮ ಕಾರ್ಯವೈಖರಿಗೆ ಸನ್ಮಾನಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು