11:05 PM Wednesday5 - March 2025
ಬ್ರೇಕಿಂಗ್ ನ್ಯೂಸ್
Budget Session | ದೇವಾಲಯಗಳ ಅರ್ಚಕರು/ ನೌಕರರ ವೇತನ ತಾರತಮ್ಯ ಸರಿಪಡಿಸಲು ಸಮಿತಿ… Forest Minister | ವಾಯುಪಡೆ ಸ್ವಾಧೀನದ ಪೀಣ್ಯ, ಜಾರಕಬಂಡೆ ಅರಣ್ಯಭೂಮಿ ಮರುವಶಕ್ಕೆ: ಸಚಿವ… Budget Session | ರಾಜ್ಯದ ಗ್ರಾಮ ಆಡಳಿತ ಅಧಿಕಾರಿಗಳಿಗೆ ಕರ್ತವ್ಯ ನಿರ್ವಹಿಸಲು ಎಲ್ಲ… Yakshagana | ಯಕ್ಷಗಾನ ಪ್ರದರ್ಶನಕ್ಕೆ ಧ್ವನಿವರ್ಧಕ ಅನುಮತಿ ಸರಳಗೊಳಿಸಲಾಗುವುದು: ಡಿಸಿಎಂ ಡಿ.ಕೆ.ಶಿವಕುಮಾರ್ Budget Session | ಅನಿಲ ವಿತರಣೆ ಯೋಜನೆಯನ್ನು ಅನುಷ್ಠಾನಗೊಳಿಸಲು ಅಗತ್ಯ ಕ್ರಮ: ಸಚಿವ… Budget Session | ಸ್ಮಾರ್ಟ್ ಸಿಟಿ ಯೋಜನೆ ಅವ್ಯವಹಾರಗಳ ಬಗ್ಗೆ ಅಗತ್ಯ ಕ್ರಮ:… Legislative Assembly | ಕರಾವಳಿ ಕರ್ನಾಟಕದ ಪ್ರವಾಸೋದ್ಯಮಕ್ಕೆ ವಿಶೇಷ ಒತ್ತು: ಬೈಂದೂರು ಶಾಸಕರ… ಎಲೆ ಚುಕ್ಕೆ ರೋಗ, ಹಳದಿ ಎಲೆ ರೋಗಗಳಿಂದ ತೊಂದರೆಗೊಳಗಾದ ರೈತರಿಗೆ ಪರಿಹಾರ ನೀಡಲು… Food | ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಖರೀದಿಸುವ ಆಹಾರ ಧಾನ್ಯಗಳ… State Budget | ಬಿಜೆಪಿಯಿಂದ ಮಾರ್ಚ್ 7 ಬಜೆಟ್ ಮಂಡನೆ ದಿನ ಶಾಸಕರ…

ಇತ್ತೀಚಿನ ಸುದ್ದಿ

Home Minister | ರಾಜ್ಯದಲ್ಲಿ 137 ಅಕ್ರಮ ವಲಸೆಗಾರರನ್ನು ಪತ್ತೆ ಹಚ್ಚಿ ಕಾನೂನು ಕ್ರಮ: ಗೃಹ ಸಚಿವ ಡಾ.ಜಿ.ಪರಮೇಶ್ವರ್

05/03/2025, 23:00

ಬೆಂಗಳೂರು(reporterkarnataka.com);ರಾಜ್ಯದಲ್ಲಿ ಪಾಕಿಸ್ತಾನ ಹಾಗೂ ಬಾಂಗ್ಲಾ ದೇಶದ 137 ಅಕ್ರಮ ವಲಸೆಗಾರರನ್ನು ಪತ್ರೆ ಹಚ್ಚಿ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು.
ಇಂದು ವಿಧಾನಸಭೆಯ ಅಧಿವೇಶನದಲ್ಲಿ ಶಾಸಕ ಬಸನಗೌಡ ಆರ್.ಪಾಟೀಲ್ ಅವರ ಗಮನ ಸೆಳೆಯುವ ಸೂಚನೆಗೆ ಉತ್ತರಿಸಿದ ಸಚಿವರು, ರಾಜ್ಯದಲ್ಲಿ ಕಳೆದ 10 ವರ್ಷಗಳಿಂದ ಅಕ್ರಮವಾಗಿ ನೆಲೆಸಿದ್ದಾರೆ ಎಂದರು.
ಬಿಜಾಪುರದಲ್ಲಿ ಸುಮಾರು 27 ಭೂಮಾಫಿಯಾ ಪ್ರಕರಣಗಳನ್ನು ದಾಖಲಿಸಿದ್ದು, 8 ಪ್ರಕರಣಗಳಲ್ಲಿ ದೋಷಾರೋಪಣೆ ಪ್ರಕರಣ ದಾಖಲಿಸಿದೆ. 9 ಪ್ರಕರಣಗಳ ತನಿಖೆ ಮುಂದುವರಿಸಲಾಗಿದೆ. ಇವರುಗಳು ವಯೋವೃದ್ಧರನ್ನು ಗುರಿಯಾಗಿಟ್ಟುಕೊಂಡು ರೇಷನ್ ಕಾರ್ಡ್, ಚುನಾವಣಾ ಗುರುತಿನ ಚೀಟಿಯನ್ನು ನಕಲು ಮಾಡಿ ಬೇರೆಯವರಿಗೆ ಮಾರಾಟ ಅಥವಾ ಬೇರೆ ಕೆಲಸಕ್ಕೆ ಬಳಸಿಕೊಳ್ಳುತ್ತಿರುವುದು ಕಂಡು ಬಂದಿದ್ದು ಆರೋಪಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗಿದೆ ಎಂದರು.
ಪಡಿತರ ಸರಬರಾಜಿನಲ್ಲೂ ಅವ್ಯವಹಾರ ಕಂಡು ಬಂದಿದ್ದು ಅವರ ವಿರುದ್ಧವು ಕಠಿಣ ಕ್ರಮಕೈಗೊಳ್ಳಲಾಗಿದೆ.
ಕಂಟ್ರಿ ಪಿಸ್ತೂಲ್ ಮತ್ತು ಗುಂಡುಗಳನ್ನು ವಶಪಡಿಸಿಕೊಂಡು ಕ್ರಮಕೈಗೊಳ್ಳಲಾಗಿದೆ ಎಂದರು.
ಬಿಜಾಪುರದಲ್ಲಿ ಎನ್.ಐ.ಎ ಘಟಕ ಸ್ಥಾಪಿಸುವಂತೆ ಪ್ರಸ್ತಾಪಿಸಿದ್ದು, ಕೇಂದ್ರದವರು ಮಾಡಬಹುದು ಎಂದು ಸದನಕ್ಕೆ ಮಾಹಿತಿ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು