4:03 AM Monday26 - January 2026
ಬ್ರೇಕಿಂಗ್ ನ್ಯೂಸ್
ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ… ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ

ಇತ್ತೀಚಿನ ಸುದ್ದಿ

ಹೊನ್ನಾವರದ ಗೇರುಸೊಪ್ಪಾ: ವಿದ್ಯೋದಯ ಶಾಲೆಯಲ್ಲಿ ಉಚಿತ ಬೇಸಿಗೆ ರಜಾ ಶಿಬಿರ 

23/04/2022, 11:04

ಕಾರವಾರ(reporterkarnataka.con):

ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲ್ಲೂಕಿನ ಗೇರುಸೊಪ್ಪಾದ ಕೃಷ್ಣ ಕೆರೆಯಲ್ಲಿರುವ ವಿದ್ಯೋದಯ ಶಾಲೆಯಲ್ಲಿ ಉಚಿತ ಬೇಸಿಗೆ ರಜಾ ಶಿಬಿರ ಪ್ರಾರಂಭಗೊಂಡಿತು. 

ಪ್ರಥಮ ದಿನವಾದ ಏಪ್ರಿಲ್ 21 ರಂದು ಇಂಗ್ಲಿಷ್ ಲರ್ನಿಂಗ್ ವಿತ್ ಫನ್, ಚಿತ್ರಕಲೆ, ಇಂಗ್ಲಿಷ್ ಗ್ರಾಮರ್, ಹಾಡು ಇನ್ನು ಮುಂತಾದ ಅನೇಕ ಚಟುವಿಕೆಗಳೊಂದಿಗೆ ಮಕ್ಕಳು ನಲಿಯುತ್ತ ಕಲಿಯುತ್ತಾ ಸಂಭ್ರಮಿಸಿದರು. ಸಂಸ್ಥೆಯ ಆಡಳಿತಾಧಿಕಾರಿ ವಿ. ಟಿ. ನಾಯ್ಕ್ ರವರು ಮಕ್ಕಳೊಂದಿಗೆ ಸಂಭ್ರಮಿಸುತ್ತಾ ತಣ್ಣನೆಯ ಐಸ್ ಕ್ರೀಂ ಮತ್ತು ಬಿಸ್ಕೆಟ್ ಗಳನ್ನು ಹಂಚಿದರು. ಮುಖ್ಯಾಧ್ಯಾಪಕಿ ಭಾರತಿ ಕುಲಕರ್ಣಿ ಮಕ್ಕಳಿಗೆ ಮಾರ್ಗದರ್ಶನ ಮಾಡುವುದರ ಜೊತೆಗೆ ಮಾತನಾಡಿ ಬೇಸಿಗೆ ರಜಾ ಶಿಬಿರ ಉಚಿತವಾಗಿ ಏಪ್ರಿಲ್ 21 ರಿಂದ ಮೇ 1ರ ವರೆಗೆ ನಡೆಯುತ್ತಿರುವುದರಿಂದ ಇದರ ಪ್ರಯೋಜನವನ್ನು ಇನ್ನೂ ಹೆಚ್ಚಿನ ಬಡ ವಿದ್ಯಾರ್ಥಿಗಳು ಪಡೆದುಕೊಳ್ಳುವಂತಾಗಬೇಕು ಎಂದರು.

ಶಿಕ್ಷಕರಾದ ಮೇಟಿಲ್ದಾ ಮಿರಾಂದ, ಅನಿತಾ ನಾಯ್ಕ್,  ಸುಜಾತಾ ನಾಯ್ಕ್ ಶಿಬಿರದ ಮಾರ್ಗದರ್ಶಕರಾಗಿದ್ದರು. ಪಾಲಕರು ಮಕ್ಕಳ ಕಲಿಕೆಯ ಆಸಕ್ತಿಯನ್ನು ಕಂಡು ಸಂತಸಪಟ್ಟರು.

ಇತ್ತೀಚಿನ ಸುದ್ದಿ

ಜಾಹೀರಾತು