4:51 PM Monday21 - April 2025
ಬ್ರೇಕಿಂಗ್ ನ್ಯೂಸ್
DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಇತ್ತೀಚಿನ ಸುದ್ದಿ

ಹೊರನಾಡಿಗೆ ಬಾರದ ಸರಕಾರಿ ಬಸ್!: ಕಾದು ಕಾದು ಸುಸ್ತಾಗಿ ರಾತ್ರಿ ವೇಳೆ ಪಿಕ್ ಅಪ್ ವಾಹನವೇರಿದ ಮಹಿಳೆಯರು ಸೇರಿದಂತೆ ಭಕ್ತರು!!

12/08/2023, 17:45

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.ಕಂ

ಸರ್ಕಾರಿ ಬಸ್ ಇಲ್ಲದೆ ಮಹಿಳೆಯರು ಮಕ್ಕಳು ಸೇರಿದಂತೆ ಪ್ರಯಾಣಿಕರು ಪಿಕ್ ಅಪ್ ವಾಹನದಲ್ಲಿ ಯಾನ ಮಾಡಿದ ಘಟನೆ ಕಾಫಿನಾಡಲ್ಲಿ ನಡೆದಿದೆ.
ಕಳಸ ಸಮೀಪದ ಹೊರನಾಡಿನಲ್ಲಿ ಬಸ್ಸಿಗಾಗಿ ಭಕ್ತರು, ಪ್ರವಾಸಿಗರು ಕಾದು ಕುಳಿತ್ತಿದ್ದರು.


ಶುಕ್ರವಾರ ಸಂಜೆಯಿಂದ ರಾತ್ರಿವರೆಗೂ ಬಸ್ಸಿಗಾಗಿ ಕಾದ ಪ್ರವಾಸಿಗರು ಸುಸ್ತಾಗಿದ್ದರು. ನಂತರ ಬಸ್ ಇಲ್ಲದೆ ರಾತ್ರಿ ಪಿಕಪ್ ವಾಹನದಲ್ಲಿ ಮೂಡಿಗೆರೆಗೆ ಪ್ರಯಾಣ ಮಾಡಬೇಕಾಯಿತು.
ಪಿಕಪ್ ವಾಹನ ಹತ್ತಿದವರಲ್ಲಿ 80ಕ್ಕೂ ಹೆಚ್ಚು ಮಹಿಳೆಯರು ಇದ್ದರು. ಶಕ್ತಿ ಯೋಜನೆ ಬಳಿಕ ಬಸ್ ಗಳ ಸಂಖ್ಯೆ ಇಳಿಮುಖವಾಗಿದೆ ಎಂಬ ದೂರು ಕೇಳಿ ಬರುತ್ತಿದೆ. ದಾವಣಗೆರೆ, ಚಿತ್ರದುರ್ಗ, ಹಾಸನ, ತುಮಕೂರು, ಕಡೂರು ಕಡೆಗೆ ಪ್ರಯಾಣಿಸುವ ಪ್ರಯಾಣಿಕರು ಸಂಕಷ್ಟ ಎದುರಿಸಬೇಕಾಯಿತು.
ದುಬಾರಿ ಹಣ ನೀಡಿ ಪಿಕ್ ಅಪ್ ವಾಹನದಲ್ಲಿ ಸಂಚಾರ ಮಾಡಬೇಕಾಯಿತು. ಹೊರ ಜಿಲ್ಲೆಗಳಿಂದ ಬಂದ ಪ್ರವಾಸಿಗರು ಬಸ್ ಸಿಗದಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು