12:52 PM Saturday31 - January 2026
ಬ್ರೇಕಿಂಗ್ ನ್ಯೂಸ್
ಕಾನ್ಫಿಡೆಂಟ್‌ ಗ್ರೂಪ್‌ ಚೇರ್‌ಮೆನ್ ಸಿ.ಜೆ. ರಾಯ್‌ ಗುಂಡಿಕ್ಕಿಕೊಂಡು ಆತ್ಮಹತ್ಯೆ: ಐಟಿ ದಾಳಿಗೆ ಹೆದರಿದರೇ… ಕಾಡಾನೆ ದಾಳಿಯಿಂದ ಅದೃಷ್ಟವಶಾತ್ ತಂದೆ- ಮಗಳು ಜಸ್ಟ್ ಮಿಸ್: ಕೊಡಗಿನಲ್ಲಿ ತಪ್ಪಿದ ಭಾರಿ… ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ವಿ ಬಿ ಜಿ ರಾಮ್… 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ ಉದ್ಘಾಟನೆ ಕೊಡಗು: ಮುಂದುವರಿದ ಆನೆ- ಮಾನವ ಸಂಘರ್ಷ; ಕಾಡಾನೆ ದಾಳಿಗೆ ಕಾರ್ಮಿಕ ಬಲಿ ಆರ್ಥಿಕ ಬೆಳವಣಿಗೆಗೆ ಕೇಂದ್ರದ ಆರ್ಥಿಕ ನೀತಿಗಳೇ ಕಾರಣ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ನಮ್ಮ ಸರ್ಕಾರ ಯಾರ ಪೋನ್ ಟ್ಯಾಪ್ ಮಾಡುವುದಿಲ್ಲ: ಸಿಎಂ ಸಿದ್ದರಾಮಯ್ಯ ಕನ್ನಡ ಭಾಷೆ ಎಂದರೆ ಹಲವು ಆಯಾಮಗಳ ಸಾಧ್ಯತೆ: ಪುರುಷೋತ್ತಮ ಬಿಳಿಮಲೆ 600ಕ್ಕೂ ಹೆಚ್ಚು ಜಿಟಿಸಿಸಿ ವಿದ್ಯಾರ್ಥಿಗಳಿಗೆ ಉದ್ಯೋಗ ನೀಡಲಿರುವ ರ‍್ಯಾಂಗ್‌ಸನ್ಸ್‌ ಏರೋಸ್ಪೇಸ್, ​​ಎಕ್ಸೈಡ್ ಎನರ್ಜಿ ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:…

ಇತ್ತೀಚಿನ ಸುದ್ದಿ

ಹೊರನಾಡಿಗೆ ಬಾರದ ಸರಕಾರಿ ಬಸ್!: ಕಾದು ಕಾದು ಸುಸ್ತಾಗಿ ರಾತ್ರಿ ವೇಳೆ ಪಿಕ್ ಅಪ್ ವಾಹನವೇರಿದ ಮಹಿಳೆಯರು ಸೇರಿದಂತೆ ಭಕ್ತರು!!

12/08/2023, 17:45

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.ಕಂ

ಸರ್ಕಾರಿ ಬಸ್ ಇಲ್ಲದೆ ಮಹಿಳೆಯರು ಮಕ್ಕಳು ಸೇರಿದಂತೆ ಪ್ರಯಾಣಿಕರು ಪಿಕ್ ಅಪ್ ವಾಹನದಲ್ಲಿ ಯಾನ ಮಾಡಿದ ಘಟನೆ ಕಾಫಿನಾಡಲ್ಲಿ ನಡೆದಿದೆ.
ಕಳಸ ಸಮೀಪದ ಹೊರನಾಡಿನಲ್ಲಿ ಬಸ್ಸಿಗಾಗಿ ಭಕ್ತರು, ಪ್ರವಾಸಿಗರು ಕಾದು ಕುಳಿತ್ತಿದ್ದರು.


ಶುಕ್ರವಾರ ಸಂಜೆಯಿಂದ ರಾತ್ರಿವರೆಗೂ ಬಸ್ಸಿಗಾಗಿ ಕಾದ ಪ್ರವಾಸಿಗರು ಸುಸ್ತಾಗಿದ್ದರು. ನಂತರ ಬಸ್ ಇಲ್ಲದೆ ರಾತ್ರಿ ಪಿಕಪ್ ವಾಹನದಲ್ಲಿ ಮೂಡಿಗೆರೆಗೆ ಪ್ರಯಾಣ ಮಾಡಬೇಕಾಯಿತು.
ಪಿಕಪ್ ವಾಹನ ಹತ್ತಿದವರಲ್ಲಿ 80ಕ್ಕೂ ಹೆಚ್ಚು ಮಹಿಳೆಯರು ಇದ್ದರು. ಶಕ್ತಿ ಯೋಜನೆ ಬಳಿಕ ಬಸ್ ಗಳ ಸಂಖ್ಯೆ ಇಳಿಮುಖವಾಗಿದೆ ಎಂಬ ದೂರು ಕೇಳಿ ಬರುತ್ತಿದೆ. ದಾವಣಗೆರೆ, ಚಿತ್ರದುರ್ಗ, ಹಾಸನ, ತುಮಕೂರು, ಕಡೂರು ಕಡೆಗೆ ಪ್ರಯಾಣಿಸುವ ಪ್ರಯಾಣಿಕರು ಸಂಕಷ್ಟ ಎದುರಿಸಬೇಕಾಯಿತು.
ದುಬಾರಿ ಹಣ ನೀಡಿ ಪಿಕ್ ಅಪ್ ವಾಹನದಲ್ಲಿ ಸಂಚಾರ ಮಾಡಬೇಕಾಯಿತು. ಹೊರ ಜಿಲ್ಲೆಗಳಿಂದ ಬಂದ ಪ್ರವಾಸಿಗರು ಬಸ್ ಸಿಗದಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು