6:19 PM Thursday19 - March 2026
ಬ್ರೇಕಿಂಗ್ ನ್ಯೂಸ್
ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ ರಾ.ಹೆ 275 ಬದಿಯ ಅನಧಿಕೃತ ಜಾಹೀರಾತು ಫಲಕ, ಹಣ್ಣಿನ/ಗೂಡಂಗಡಿ ತೆರವುಗೊಳಿಸಲು ಕೊಡಗು ಜಿಲ್ಲಾಡಳಿತ… ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ… Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ

ಇತ್ತೀಚಿನ ಸುದ್ದಿ

ಹೊರನಾಡಿಗೆ ಬಾರದ ಸರಕಾರಿ ಬಸ್!: ಕಾದು ಕಾದು ಸುಸ್ತಾಗಿ ರಾತ್ರಿ ವೇಳೆ ಪಿಕ್ ಅಪ್ ವಾಹನವೇರಿದ ಮಹಿಳೆಯರು ಸೇರಿದಂತೆ ಭಕ್ತರು!!

12/08/2023, 17:45

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.ಕಂ

ಸರ್ಕಾರಿ ಬಸ್ ಇಲ್ಲದೆ ಮಹಿಳೆಯರು ಮಕ್ಕಳು ಸೇರಿದಂತೆ ಪ್ರಯಾಣಿಕರು ಪಿಕ್ ಅಪ್ ವಾಹನದಲ್ಲಿ ಯಾನ ಮಾಡಿದ ಘಟನೆ ಕಾಫಿನಾಡಲ್ಲಿ ನಡೆದಿದೆ.
ಕಳಸ ಸಮೀಪದ ಹೊರನಾಡಿನಲ್ಲಿ ಬಸ್ಸಿಗಾಗಿ ಭಕ್ತರು, ಪ್ರವಾಸಿಗರು ಕಾದು ಕುಳಿತ್ತಿದ್ದರು.


ಶುಕ್ರವಾರ ಸಂಜೆಯಿಂದ ರಾತ್ರಿವರೆಗೂ ಬಸ್ಸಿಗಾಗಿ ಕಾದ ಪ್ರವಾಸಿಗರು ಸುಸ್ತಾಗಿದ್ದರು. ನಂತರ ಬಸ್ ಇಲ್ಲದೆ ರಾತ್ರಿ ಪಿಕಪ್ ವಾಹನದಲ್ಲಿ ಮೂಡಿಗೆರೆಗೆ ಪ್ರಯಾಣ ಮಾಡಬೇಕಾಯಿತು.
ಪಿಕಪ್ ವಾಹನ ಹತ್ತಿದವರಲ್ಲಿ 80ಕ್ಕೂ ಹೆಚ್ಚು ಮಹಿಳೆಯರು ಇದ್ದರು. ಶಕ್ತಿ ಯೋಜನೆ ಬಳಿಕ ಬಸ್ ಗಳ ಸಂಖ್ಯೆ ಇಳಿಮುಖವಾಗಿದೆ ಎಂಬ ದೂರು ಕೇಳಿ ಬರುತ್ತಿದೆ. ದಾವಣಗೆರೆ, ಚಿತ್ರದುರ್ಗ, ಹಾಸನ, ತುಮಕೂರು, ಕಡೂರು ಕಡೆಗೆ ಪ್ರಯಾಣಿಸುವ ಪ್ರಯಾಣಿಕರು ಸಂಕಷ್ಟ ಎದುರಿಸಬೇಕಾಯಿತು.
ದುಬಾರಿ ಹಣ ನೀಡಿ ಪಿಕ್ ಅಪ್ ವಾಹನದಲ್ಲಿ ಸಂಚಾರ ಮಾಡಬೇಕಾಯಿತು. ಹೊರ ಜಿಲ್ಲೆಗಳಿಂದ ಬಂದ ಪ್ರವಾಸಿಗರು ಬಸ್ ಸಿಗದಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು