5:19 AM Monday10 - August 2026
ಬ್ರೇಕಿಂಗ್ ನ್ಯೂಸ್
Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ…

ಇತ್ತೀಚಿನ ಸುದ್ದಿ

ಹೊರನಾಡಿಗೆ ಬಾರದ ಸರಕಾರಿ ಬಸ್!: ಕಾದು ಕಾದು ಸುಸ್ತಾಗಿ ರಾತ್ರಿ ವೇಳೆ ಪಿಕ್ ಅಪ್ ವಾಹನವೇರಿದ ಮಹಿಳೆಯರು ಸೇರಿದಂತೆ ಭಕ್ತರು!!

12/08/2023, 17:45

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.ಕಂ

ಸರ್ಕಾರಿ ಬಸ್ ಇಲ್ಲದೆ ಮಹಿಳೆಯರು ಮಕ್ಕಳು ಸೇರಿದಂತೆ ಪ್ರಯಾಣಿಕರು ಪಿಕ್ ಅಪ್ ವಾಹನದಲ್ಲಿ ಯಾನ ಮಾಡಿದ ಘಟನೆ ಕಾಫಿನಾಡಲ್ಲಿ ನಡೆದಿದೆ.
ಕಳಸ ಸಮೀಪದ ಹೊರನಾಡಿನಲ್ಲಿ ಬಸ್ಸಿಗಾಗಿ ಭಕ್ತರು, ಪ್ರವಾಸಿಗರು ಕಾದು ಕುಳಿತ್ತಿದ್ದರು.


ಶುಕ್ರವಾರ ಸಂಜೆಯಿಂದ ರಾತ್ರಿವರೆಗೂ ಬಸ್ಸಿಗಾಗಿ ಕಾದ ಪ್ರವಾಸಿಗರು ಸುಸ್ತಾಗಿದ್ದರು. ನಂತರ ಬಸ್ ಇಲ್ಲದೆ ರಾತ್ರಿ ಪಿಕಪ್ ವಾಹನದಲ್ಲಿ ಮೂಡಿಗೆರೆಗೆ ಪ್ರಯಾಣ ಮಾಡಬೇಕಾಯಿತು.
ಪಿಕಪ್ ವಾಹನ ಹತ್ತಿದವರಲ್ಲಿ 80ಕ್ಕೂ ಹೆಚ್ಚು ಮಹಿಳೆಯರು ಇದ್ದರು. ಶಕ್ತಿ ಯೋಜನೆ ಬಳಿಕ ಬಸ್ ಗಳ ಸಂಖ್ಯೆ ಇಳಿಮುಖವಾಗಿದೆ ಎಂಬ ದೂರು ಕೇಳಿ ಬರುತ್ತಿದೆ. ದಾವಣಗೆರೆ, ಚಿತ್ರದುರ್ಗ, ಹಾಸನ, ತುಮಕೂರು, ಕಡೂರು ಕಡೆಗೆ ಪ್ರಯಾಣಿಸುವ ಪ್ರಯಾಣಿಕರು ಸಂಕಷ್ಟ ಎದುರಿಸಬೇಕಾಯಿತು.
ದುಬಾರಿ ಹಣ ನೀಡಿ ಪಿಕ್ ಅಪ್ ವಾಹನದಲ್ಲಿ ಸಂಚಾರ ಮಾಡಬೇಕಾಯಿತು. ಹೊರ ಜಿಲ್ಲೆಗಳಿಂದ ಬಂದ ಪ್ರವಾಸಿಗರು ಬಸ್ ಸಿಗದಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು