7:56 PM Friday19 - September 2025
ಬ್ರೇಕಿಂಗ್ ನ್ಯೂಸ್
ಮಡಿಕೇರಿ ನಗರಸಭೆಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ: ಸಾರ್ವಜನಿಕರ ದೂರಿಗೆ ಸ್ಪಂದನೆ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್: ತಡೆ ಕೋರಿ ಸಲ್ಲಿಸಿದ ಅರ್ಜಿ ಸುಪ್ರೀಂಕೋರ್ಟ್… ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ

ಇತ್ತೀಚಿನ ಸುದ್ದಿ

Horanadu | ಸಂಸದ ತೇಜಸ್ವಿ ಸೂರ್ಯ- ಶಿವಶ್ರೀ ದಂಪತಿ ಬಸ್ ಯಾತ್ರೆ: ಹೊರನಾಡಿಗೆ ಆಗಮಿಸಿದ ನವಜೋಡಿಯಿಂದ ದೇವಿಗೆ ವಿಶೇಷ ಪೂಜೆ

16/03/2025, 15:23

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಸಂಸದ ತೇಜಸ್ವಿ ಸೂರ್ಯ ನವದಂಪತಿ ಕಾರು ಬಿಟ್ಟು ಸಾರ್ವಜನಿಕ ಸಾರಿಗೆ ಬಸ್ ನಲ್ಲಿ ಪ್ರಯಾಣ ಬೆಳೆಸಿ ಹೊಸ ಅನುಭವ ಪಡೆದರು. ಸೂರ್ಯ ದಂಪತಿ ಚಿಕ್ಕಮಗಳೂರು ಜಿಲ್ಲೆಯ ಕಳಸ, ಹೊರನಾಡು ಭಾಗದಲ್ಲಿ ಬಸ್ ಪ್ರಯಾಣ ನಡೆಸಿ ಸಾರ್ವಜನಿಕರ ಗಮನ ಸೆಳೆದರು.


ತೇಜಸ್ವಿ ಸೂರ್ಯ ದಂಪತಿ ತಮ್ಮ ಕಾರು ಬಿಟ್ಟು, ಕಳಸ-ಹೊರನಾಡಿನ ಹಾವು-ಬಳುಕಿನ ರಸ್ತೆಗಳಲ್ಲಿ ಖಾಸಗಿ ಬಸ್ಸಿನಲ್ಲಿ ಸಂಚಾರ ಮಾಡಿ ಪ್ರಕೃತಿಯ ಧಾರಾಳತನವನ್ನು ಆಸ್ವಾದಿಸಿದರು. ತೇಜಸ್ವಿ-ಶಿವಶ್ರೀ ದಂಪತಿ ಮಲೆನಾಡಿನ ಹಸಿರು ಪರ್ವತಗಳು ಮತ್ತು ಮನಮೋಹಕ ವಾತಾವರಣವನ್ನು ಆನಂದಿಸಿದರು. ತೇಜಸ್ವಿ ದಂಪತಿ ಶನಿವಾರ ಹೊರನಾಡಿನ ಶ್ರೀ ಅನ್ನಪೂರ್ಣೇಶ್ವರಿ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ದೇವಾಲಯ ದರ್ಶನದ ನಂತರ, ಅವರು ಕಳಸ ತಾಲೂಕಿನ ಪ್ರಮುಖ ಪ್ರವಾಸಿ ತಾಣಗಳಿಗೆ ಬಸ್ ಮೂಲಕ ಭೇಟಿ ನೀಡಿದರು. ತೇಜಸ್ವಿ ದಂಪತಿ ತಮ್ಮ ಪ್ರವಾಸದ ಸಮಯದಲ್ಲಿ ಜನ ಸಾಮಾನ್ಯರೊಂದಿಗೆ ಸಂವಾದ ನಡೆಸಿದ್ದು, ಅಪರೂಪಕ್ಕೆ ರಾಜಕೀಯ ನಾಯಕರಿಂದ ಬಸ್ಸಿನಲ್ಲಿ ಪ್ರಯಾಣ ನಡೆಸುವ ಅನುಭವ ಸ್ಥಳೀಯರಲ್ಲಿಯೂ ಕುತೂಹಲ ಮೂಡಿಸಿದೆ. ಮಲೆನಾಡಿನ ಶೀತಳ ವಾತಾವರಣದಲ್ಲಿ ಈ ಪ್ರವಾಸ ದಂಪತಿಗೆ ಹೊಸ ಅನುಭವ ನೀಡಿದಂತಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು