10:38 AM Sunday12 - July 2026
ಬ್ರೇಕಿಂಗ್ ನ್ಯೂಸ್
ಆಸ್ಟ್ರೇಲಿಯಾ | ಪ್ರಧಾನಿ ಮೋದಿ ತಂಗಿದ್ದ ಆಸೀಸ್‌ ಹೋಟೆಲ್‌ಗೆ ನುಗ್ಗಿ ಭಾರತ ವಿರೋಧಿ… ಬೆಂಗಳೂರು: ಶಾಸಕಿ ನಯನ ಮೋಟಮ್ಮ ಪರ ಕಾರ್ಯಕರ್ತರ ಬ್ಯಾಟಿಂಗ್; ಕೆಪಿಸಿಸಿ ಅಧ್ಯಕ್ಷರಿಗೆ ವಿವರಣೆ ಮಂಡ್ಯ: ಕಟ್ಟಡದ ಮೇಲಿಂದ ಬಿದ್ದು ಫೈಂಟ್ ಮಾಡುತ್ತಿದ್ದ ಕಾರ್ಮಿಕ ದಾರುಣ ಸಾವು ಕೊಡಗು ಜೆಡಿಎಸ್‌ಗೆ ಶೀಘ್ರದಲ್ಲೇ ಜಿಲ್ಲಾಧ್ಯಕ್ಷ?: ಕುಮಾರಸ್ವಾಮಿ ಭೇಟಿ ಮಾಡಿದ ತಾಲೂಕು ಅಧ್ಯಕ್ಷರ ನಿಯೋಗ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ತನಿಖೆಯಲ್ಲಿ ಮಹತ್ವದ ಅಂಶ ಬಹಿರಂಗ; ಶೀಘ್ರದಲ್ಲೇ… ಶೃಂಗೇರಿ | ಗೋರಿಗುಡ್ಡ ಮಸೀದಿ ರಕ್ಷಣೆಗೆ ಕಟ್ಟಿದ್ದ ಕಾಂಕ್ರೀಟ್ ವಾಲ್ ನಲ್ಲಿ ಬಿರುಕು:… ಮಡಿಕೇರಿಯಲ್ಲಿ ಭಾರಿ ಮಳೆಗೆ ಭೂಕುಸಿತ: ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಏರು ರಸ್ತೆ ಹಾನಿ;… Kodagu | ಮಡಿಕೇರಿ ರಾಜಾಸೀಟ್ ನಾಳೆಯಿಂದ ಜುಲೈ 12ರವರೆಗೆ ಕ್ಲೋಸ್: ಜಿಲ್ಲಾಧಿಕಾರಿ ಆದೇಶ ನಾಗರಹೊಳೆ ಉದ್ಯಾನದ ಬೀಟ್‌ಗಾರ್ಡ್ ಮನೆಯಲ್ಲಿ ಅಕ್ರಮ ಜಿಂಕೆ ಪತ್ತೆ: ಬಂಧನ; ಬಂದೂಕು ವಶ ಮೂಗ್ರಹಳ್ಳಿ ಸೇತುವೆ ಕಾಮಗಾರಿಯಲ್ಲಿ ಸುರಕ್ಷತೆ ನಿರ್ಲಕ್ಷ್ಯ ಆರೋಪ; ಕಾಮಗಾರಿ ತಾತ್ಕಾಲಿಕ ಸ್ಥಗಿತಕ್ಕೆ ಗ್ರಾಮಸ್ಥರ…

ಇತ್ತೀಚಿನ ಸುದ್ದಿ

Horanadu | ಸಂಸದ ತೇಜಸ್ವಿ ಸೂರ್ಯ- ಶಿವಶ್ರೀ ದಂಪತಿ ಬಸ್ ಯಾತ್ರೆ: ಹೊರನಾಡಿಗೆ ಆಗಮಿಸಿದ ನವಜೋಡಿಯಿಂದ ದೇವಿಗೆ ವಿಶೇಷ ಪೂಜೆ

16/03/2025, 15:23

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಸಂಸದ ತೇಜಸ್ವಿ ಸೂರ್ಯ ನವದಂಪತಿ ಕಾರು ಬಿಟ್ಟು ಸಾರ್ವಜನಿಕ ಸಾರಿಗೆ ಬಸ್ ನಲ್ಲಿ ಪ್ರಯಾಣ ಬೆಳೆಸಿ ಹೊಸ ಅನುಭವ ಪಡೆದರು. ಸೂರ್ಯ ದಂಪತಿ ಚಿಕ್ಕಮಗಳೂರು ಜಿಲ್ಲೆಯ ಕಳಸ, ಹೊರನಾಡು ಭಾಗದಲ್ಲಿ ಬಸ್ ಪ್ರಯಾಣ ನಡೆಸಿ ಸಾರ್ವಜನಿಕರ ಗಮನ ಸೆಳೆದರು.


ತೇಜಸ್ವಿ ಸೂರ್ಯ ದಂಪತಿ ತಮ್ಮ ಕಾರು ಬಿಟ್ಟು, ಕಳಸ-ಹೊರನಾಡಿನ ಹಾವು-ಬಳುಕಿನ ರಸ್ತೆಗಳಲ್ಲಿ ಖಾಸಗಿ ಬಸ್ಸಿನಲ್ಲಿ ಸಂಚಾರ ಮಾಡಿ ಪ್ರಕೃತಿಯ ಧಾರಾಳತನವನ್ನು ಆಸ್ವಾದಿಸಿದರು. ತೇಜಸ್ವಿ-ಶಿವಶ್ರೀ ದಂಪತಿ ಮಲೆನಾಡಿನ ಹಸಿರು ಪರ್ವತಗಳು ಮತ್ತು ಮನಮೋಹಕ ವಾತಾವರಣವನ್ನು ಆನಂದಿಸಿದರು. ತೇಜಸ್ವಿ ದಂಪತಿ ಶನಿವಾರ ಹೊರನಾಡಿನ ಶ್ರೀ ಅನ್ನಪೂರ್ಣೇಶ್ವರಿ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ದೇವಾಲಯ ದರ್ಶನದ ನಂತರ, ಅವರು ಕಳಸ ತಾಲೂಕಿನ ಪ್ರಮುಖ ಪ್ರವಾಸಿ ತಾಣಗಳಿಗೆ ಬಸ್ ಮೂಲಕ ಭೇಟಿ ನೀಡಿದರು. ತೇಜಸ್ವಿ ದಂಪತಿ ತಮ್ಮ ಪ್ರವಾಸದ ಸಮಯದಲ್ಲಿ ಜನ ಸಾಮಾನ್ಯರೊಂದಿಗೆ ಸಂವಾದ ನಡೆಸಿದ್ದು, ಅಪರೂಪಕ್ಕೆ ರಾಜಕೀಯ ನಾಯಕರಿಂದ ಬಸ್ಸಿನಲ್ಲಿ ಪ್ರಯಾಣ ನಡೆಸುವ ಅನುಭವ ಸ್ಥಳೀಯರಲ್ಲಿಯೂ ಕುತೂಹಲ ಮೂಡಿಸಿದೆ. ಮಲೆನಾಡಿನ ಶೀತಳ ವಾತಾವರಣದಲ್ಲಿ ಈ ಪ್ರವಾಸ ದಂಪತಿಗೆ ಹೊಸ ಅನುಭವ ನೀಡಿದಂತಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು