7:27 AM Sunday10 - May 2026
ಬ್ರೇಕಿಂಗ್ ನ್ಯೂಸ್
ನಂಜನಗೂಡು ತಾಲೂಕು ಮಟ್ಟದ ಕ್ರಿಕೆಟ್ ಪಂದ್ಯಾವಳಿ: ಚಿಕ್ಕರಂಗನಾಯಕ ಚಾಲನೆ ಚಿಕ್ಕಮಗಳೂರು | ಕಾಡಿನೊಳಗೂ ಕಳ್ಳರ ಕೈಚಳಕ: ಮುತ್ತೋಡಿ ಅರಣ್ಯ ವಲಯದಲ್ಲಿದ್ದ ಕ್ಯಾಮೆರಾ ಹೊತ್ತೊಯ್ದ… ಚಾಲಕನಿಗೆ ಹಠಾತ್ ಕಾಣಿಸಿಕೊಂಡ ಎದೆನೋವು: ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಮಗುಚಿದ ಖಾಸಗಿ… ಮೂಡಿಗೆರೆ: ಬಾಳೂರು ಪೊಲೀಸರ 12 ತಾಸುಗಳ ಕಾರ್ಯಾಚರಣೆ ಬಳಿಕ ಪತ್ತೆಯಾದ ಒಂದೂವರೆ ವರ್ಷದ… Shivamogga | ತೀರ್ಥಹಳ್ಳಿ: ವಾಹನದಲ್ಲಿ ಅಕ್ರಮ ಗೋ ಸಾಗಾಟ; ಮೂವರು ವಶಕ್ಕೆ ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ

ಇತ್ತೀಚಿನ ಸುದ್ದಿ

Horanadu | ಸಂಸದ ತೇಜಸ್ವಿ ಸೂರ್ಯ- ಶಿವಶ್ರೀ ದಂಪತಿ ಬಸ್ ಯಾತ್ರೆ: ಹೊರನಾಡಿಗೆ ಆಗಮಿಸಿದ ನವಜೋಡಿಯಿಂದ ದೇವಿಗೆ ವಿಶೇಷ ಪೂಜೆ

16/03/2025, 15:23

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಸಂಸದ ತೇಜಸ್ವಿ ಸೂರ್ಯ ನವದಂಪತಿ ಕಾರು ಬಿಟ್ಟು ಸಾರ್ವಜನಿಕ ಸಾರಿಗೆ ಬಸ್ ನಲ್ಲಿ ಪ್ರಯಾಣ ಬೆಳೆಸಿ ಹೊಸ ಅನುಭವ ಪಡೆದರು. ಸೂರ್ಯ ದಂಪತಿ ಚಿಕ್ಕಮಗಳೂರು ಜಿಲ್ಲೆಯ ಕಳಸ, ಹೊರನಾಡು ಭಾಗದಲ್ಲಿ ಬಸ್ ಪ್ರಯಾಣ ನಡೆಸಿ ಸಾರ್ವಜನಿಕರ ಗಮನ ಸೆಳೆದರು.


ತೇಜಸ್ವಿ ಸೂರ್ಯ ದಂಪತಿ ತಮ್ಮ ಕಾರು ಬಿಟ್ಟು, ಕಳಸ-ಹೊರನಾಡಿನ ಹಾವು-ಬಳುಕಿನ ರಸ್ತೆಗಳಲ್ಲಿ ಖಾಸಗಿ ಬಸ್ಸಿನಲ್ಲಿ ಸಂಚಾರ ಮಾಡಿ ಪ್ರಕೃತಿಯ ಧಾರಾಳತನವನ್ನು ಆಸ್ವಾದಿಸಿದರು. ತೇಜಸ್ವಿ-ಶಿವಶ್ರೀ ದಂಪತಿ ಮಲೆನಾಡಿನ ಹಸಿರು ಪರ್ವತಗಳು ಮತ್ತು ಮನಮೋಹಕ ವಾತಾವರಣವನ್ನು ಆನಂದಿಸಿದರು. ತೇಜಸ್ವಿ ದಂಪತಿ ಶನಿವಾರ ಹೊರನಾಡಿನ ಶ್ರೀ ಅನ್ನಪೂರ್ಣೇಶ್ವರಿ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ದೇವಾಲಯ ದರ್ಶನದ ನಂತರ, ಅವರು ಕಳಸ ತಾಲೂಕಿನ ಪ್ರಮುಖ ಪ್ರವಾಸಿ ತಾಣಗಳಿಗೆ ಬಸ್ ಮೂಲಕ ಭೇಟಿ ನೀಡಿದರು. ತೇಜಸ್ವಿ ದಂಪತಿ ತಮ್ಮ ಪ್ರವಾಸದ ಸಮಯದಲ್ಲಿ ಜನ ಸಾಮಾನ್ಯರೊಂದಿಗೆ ಸಂವಾದ ನಡೆಸಿದ್ದು, ಅಪರೂಪಕ್ಕೆ ರಾಜಕೀಯ ನಾಯಕರಿಂದ ಬಸ್ಸಿನಲ್ಲಿ ಪ್ರಯಾಣ ನಡೆಸುವ ಅನುಭವ ಸ್ಥಳೀಯರಲ್ಲಿಯೂ ಕುತೂಹಲ ಮೂಡಿಸಿದೆ. ಮಲೆನಾಡಿನ ಶೀತಳ ವಾತಾವರಣದಲ್ಲಿ ಈ ಪ್ರವಾಸ ದಂಪತಿಗೆ ಹೊಸ ಅನುಭವ ನೀಡಿದಂತಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು