5:18 PM Monday30 - March 2026
ಬ್ರೇಕಿಂಗ್ ನ್ಯೂಸ್
Madikeri | ಕೊಡಗು ಜಿಲ್ಲೆಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಡಾ. ಎಂ.… Kodagu | ಶನಿವಾರಸಂತೆ: ಟ್ರ್ಯಾಕ್ಟರ್ -ಕಾರು ಅಪಘಾತ; ಟ್ರ್ಯಾಕ್ಟರ್ ಚಾಲಕ ಸಾವು ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ… ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರಕಾರಿ ಶುಶ್ರೂಷಾ ಕಾಲೇಜು 2ನೇ ಘಟಿಕೋತ್ಸವ ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ

ಇತ್ತೀಚಿನ ಸುದ್ದಿ

ಹೋರಾಟಗಾರರ ಜತೆ ಕೂತು ಪ್ರಚಾರ ಪಡೆದ ಯು.ಟಿ. ಖಾದರ್ ಗೆ ಟೋಲ್ ಗೇಟ್ ತೆರವು ಮಾಡಲು ಸಾಧ್ಯವಾಯಿತೆ?: ಶಾಸಕ ಡಾ.ಭರತ್ ಶೆಟ್ಟಿ ತಿರುಗೇಟು

18/11/2022, 19:53

ಮಂಗಳೂರು(reporterkarnataka.com): ಅಧಿಕಾರದಲ್ಲಿದ್ದಾಗ ಟೋಲ್ ಗೇಟ್ ತೆರವು ಮಾಡುವ ಮಾತು ನೀಡಿ ಹೋರಾಟಗಾರರ ಜೊತೆ ಭಾಗವಹಿಸಿ ಪ್ರಚಾರ ಪಡೆದುಕೊಂಡು ಎದ್ದು ಹೋಗಿರುವ ಹೋಗಿರುವ ಶಾಸಕ ಯು. ಟಿ. ಖಾದರ್ ಅವರಿಗೆ ಟೋಲ್ ಗೇಟ್ ತೆರವಿಗೆ ಪ್ರಕ್ರಿಯೆ ಆರಂಭಿಸಲೂ ವಿಫಲರಾಗಿ, ಇದೀಗ ನನ್ನ ವಿರುದ್ಧ ಮಾತನಾಡುತ್ತಿರುವುದು ಹಾಸ್ಯಸ್ಪದ ಎಂದು ಶಾಸಕ ಡಾಕ್ಟರ್ ಭರತ್ ಶೆಟ್ಟಿ ವೈ. ಅವರು ಖಾದರ್ ಆರೋಪಕ್ಕೆ ತಿರುಗೇಟು ನೀಡಿದ್ದಾರೆ.

ರಾಜ್ಯ ಸರಕಾರದ ಪ್ರಧಾನ ಕಾರ್ಯದರ್ಶಿ ಅವರೊಂದಿಗೆ ಮಾತುಕತೆ ಮಾಡಿರುವೆ ಎಂದು ಯು.ಟಿ. ಖಾದರ್ ಹೇಳಿಕೊಂಡು ಬಂದಿದ್ದಾರೆ. ಆದರೆ ರಾಜ್ಯದಿಂದ ಕೇಂದ್ರದ ಹೆದ್ದಾರಿ ಇಲಾಖೆಗೆ
ಕಾನೂನಾತ್ಮಕವಾಗಿ ಅಧಿಕೃತ ಪತ್ರವನ್ನು ಕಳಿಸಲು ಕೂಡ ಇವರಿಗೆ ಸಾಧ್ಯವಾಗಿರಲಿಲ್ಲ.

ಇದೀಗ ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಸರಕಾರ
ಇರುವುದರಿಂದ ವೈಫಲ್ಯವನ್ನು ಮರೆಮಾಚಲು ಯತ್ನಿಸುತ್ತಿದ್ದಾರೆ. ಚುನಾವಣೆ ಹತ್ತಿರ ಬಂದಾಗ ಕಾಂಗ್ರೆಸ್ನಿಂದ ಇಂತಹ ಆರೋಪಗಳು ನಿರೀಕ್ಷಿತ ಎಂದು ಶಾಸಕ ಭರತ್ ಶೆಟ್ಟಿ ಪ್ರತಿಕ್ರಿಯೆ ನೀಡಿದ್ದಾರೆ.

ಇರ್ಕಾನ್ ಸಂಸ್ಥೆ ಹಾಗೂ ನವಯುಗ ಖಾಸಗಿ ಸಂಸ್ಥೆಯು ಟೋಲ್ ಗೇಟ್ ಸ್ಥಾಪಿಸಲು ಅವಕಾಶ ನೀಡುವ ಸಲುವಾಗಿ 2013ರ ಮಾರ್ಚ್ ನಲ್ಲಿ ಹೆಜಮಾಡಿ ಟೋಲ್ ಗೇಟ್, ಜೂನ್ ನಲ್ಲಿ ಸುರತ್ಕಲ್ ನಲ್ಲಿ ಟೋಲ್ ಗೇಟ್ ನಿರ್ಮಿಸಲು ಈ ಹಿಂದಿನ ಯುಪಿಎ ಸರಕಾರವೇ ರಾಜ್ಯ ಪತ್ರದಲ್ಲಿ ಅಧಿಕೃತವಾಗಿ ಪ್ರಕಟಿಸಿ ಕೊಡುಗೆ ನೀಡಿದೆ ಎಂದು ಬಹಿರಂಗ ಪಡಿಸಿರುವ ಡಾ.ಭರತ್ ಶೆಟ್ಟಿ ಅವರು,ಅಂದೇ ಹಿಂಪಡೆಯಲು ಇದ್ದ ಅವಕಾಶವನ್ನು ಕೈಚೆಲ್ಲಿರುವ ಕಾಂಗ್ರೆಸ್ ರಾಜಕೀಯಕ್ಕಾಗಿ ಇದೀಗ ಲಾಭ ಪಡೆಯಲು ಮುಂದಾಗಿದೆ ಎಂದು ಆರೋಪಿಸಿದರು.

ಆಗ 60 ಕಿಲೋಮೀಟರ್ ಒಳಗೆ ಟೋಲ್ ಗೇಟ್ ನಿರ್ಮಾಣ ಕಾನೂನಾತ್ಮಕವಾಗಿ ಸರಿಯಲ್ಲ ಎಂದು ಈ ಹಿಂದೆ ಆಡಳಿತ ನಡೆಸಿದ್ದ ಯುಪಿಎ ಸರಕಾರದ ಹೆದ್ದಾರಿ ಮಂತ್ರಿಗಳಿಗೆ ತಿಳಿದಿರಲಿಲ್ಲವೇ?
ಈಗಿನ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಸಂಸತ್ತಿನಲ್ಲಿಯೇ 60 ಕಿಲೋ ಮೀಟರ್ ವ್ಯಾಪ್ತಿಗಳಲ್ಲ ಒಂದು ಟೋಲ್ ಗೇಟ್ ಇರುವುದು ಸರಿಯಾದ ಕ್ರಮ ಎಂದು ಒಪ್ಪಿಕೊಂಡು ದೇಶದಾದ್ಯಂತ ಇರುವ ಟೋಲ್ ಗೇಟ್ ಗಳ ವಿಲೀನಕ್ಕೆ ಮುಂದಾಗಿರುವುದನ್ನು ಶಾಸಕ ಯು ಟಿ ಖಾದರ್ ಅವರು ಮುಕ್ತ ಮನಸ್ಸಿನಿಂದ ಪ್ರಶಂಶಿಸುವ ಮನಸ್ಸು ಮಾಡಬೇಕು ಎಂದು ಸಲಹೆಯನ್ನು ನೀಡಿದ್ದಾರೆ.

ನನಗೆ ಕೇವಲ ಆಶ್ವಾಸನೆ ನೀಡಿ ಹಿಂದೆ ಹೋಗುವುದರಲ್ಲಿ ಆಸಕ್ತಿ ಇಲ್ಲ. ಗಂಭೀರವಾದ ಪ್ರಯತ್ನವನ್ನು ನಡೆಸಿ ಸಂಸದರ ಮುತುವರ್ಜಿಯಲ್ಲಿ ಟೋಲ್ ಗೇಟ್ ಅನ್ನ ತೆರವುಗೊಳಿಸಲು ಯಶಸ್ವಿಯಾಗಿದ್ದೇವೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು