5:09 AM Thursday27 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಮೂಡಿಗೆರೆಯಲ್ಲಿ ಭಯಾನಕ ಅಪಘಾತ | ಬೈಕ್ ಮೇಲೇರಿದ ಕ್ರೇನ್: ಮಹಿಳೆ ಸ್ಥಳದಲ್ಲೇ ಸಾವು; ಇನ್ನೊಬ್ಬರು ಗಂಭೀರ

08/10/2025, 19:23

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ನಿಯಂತ್ರಣ ತಪ್ಪಿ ಕ್ರೇನ್ ಟಯರ್ ಬೈಕ್ ಮೇಲೆ ಹತ್ತಿದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನೊಬ್ಬರು ಗಂಭೀರ ಗಾಯಗೊಂಡ ಘಟನೆ ಮೂಡಿಗೆರೆ ಪಟ್ಟಣದ ಸಂತೆ‌ ಮೈದಾನದ ಬಳಿ ನಡೆದಿದೆ.
ಮೃತಪಟ್ಟ ಮಹಿಳೆಯನ್ನು ಅಂಗನವಾಡಿ ಸಿಬ್ಬಂದಿ ಸುಪ್ರಿತಾ (26) ಎಂದು ಗುರುತಿಸಲಾಗಿದೆ. ಕ್ರೇನ್ ಬೈಕಿಗೆ ಡಿಕ್ಕಿ ಹೊಡೆದು
ಬೈಕ್ ಹಾಗೂ ಮಹಿಳೆಯ ಮೇಲೆ ಹತ್ತಿದೆ. ಇದರಿಂದ
ಸುಪ್ರಿತಾ ಅವರು ಸ್ಥಳದಲ್ಲೇ ಸಾವು, ಮತ್ತೋರ್ವ ಮಹಿಳೆ ಗಂಭೀರ ಗಾಯಗೊಂಡಿದ್ದಾರೆ.
ಜಲಜೀವನ್ ಮಿಷನ್ ಕಾಮಗಾರಿಗೆ ಕ್ರೇನ್ ಬಂದಿತ್ತು.
ಮೂಡಿಗೆರೆ ಪಟ್ಟಣದಿಂದ ಹೆಸ್ಗಲ್ ಗ್ರಾಮಕ್ಕೆ ಸಂಪರ್ಕಿಸುವ ರಸ್ತೆ ಕಾಮಗಾರಿಗಾಗಿ ಕ್ರೇನ್ ತರಿಸಲಾಗಿತ್ತು.
ಕ್ರೇನ್ ಬ್ರೇಕ್ ಫೇಲ್ ಆಗಿತ್ತೇ ಅಥವಾ ಚಾಲಕನ ಅಜಾಗರೂಕತೆಯೇ ಎನ್ನುವ ಬಗ್ಗೆ ಪೊಲೀಸರ ತನಿಖೆ ನಡೆಯಬೇಕಿದೆ.

ಇತ್ತೀಚಿನ ಸುದ್ದಿ

ಜಾಹೀರಾತು