6:39 PM Tuesday25 - August 2026
ಬ್ರೇಕಿಂಗ್ ನ್ಯೂಸ್
ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ

ಇತ್ತೀಚಿನ ಸುದ್ದಿ

ದೆಹಲಿಯಲ್ಲಿ ಭೀಕರ ರಸ್ತೆ ಅಪಘಾತ: ಬೆಳಗಾವಿ ಶಾಸಕ ಅಭಯ ಪಾಟೀಲ್ ಪಾರು; ಇಬ್ಬರು ಗಂಭೀರ

24/08/2026, 15:28

ನವದೆಹಲಿ(reporterkarnataka.com): ದೆಹಲಿಯಲ್ಲಿ ಭೀಕರ ರಸ್ತೆ ಅಪಘಾತದಲ್ಲಿ ಬೆಳಗಾವಿ ಶಾಸಕ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ನಡೆದಿದೆ.
ಬೆಳಗಾವಿ ಶಾಸಕ ಅಭಯ ಪಾಟೀಲ್ ಗೆ ಚಿಕ್ಕ ಪುಟ್ಟ ಗಾಯಗಳಾಗಿದೆ. ನಿನ್ನೆ ರಾತ್ರಿ ದೆಹಲಿಯ Pwd ಕಚೇರಿ ಬಳಿ ಕಾರು ಇನ್ನೊವಾ ಮಧ್ಯೆ ಡಿಕ್ಕಿಯಾಗಿದೆ.ಇನ್ನೊವಾದಲ್ಲಿದ್ದ ಬೆಳಗಾವಿ ದಕ್ಷಿಣ ಮತಕ್ಷೇತ್ರ ಬಿಜೆಪಿ ಶಾಸಕ ಅಭಯ ಪಾಟೀಲ್, ಕಿರಾರಿ ಮತಕ್ಷೇತ್ರ ಬಿಜೆಪಿ ಶಾಸಕ ಅನಿಲ್ ಝಾಗೆ ಗಾಯವಾಗಿದೆ. ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಇನ್ನೊವಾಗೆ ಕಾರು ಗುದ್ದಿದೆ. ಕಾರಿನಲ್ಲಿದ್ದ ಆಶುತೋಷ್ ಪಾಂಡೆ, ಪತ್ನಿ ಮತ್ತಿಬ್ಬರು ಮಕ್ಕಳಿಗೂ ಗಂಭೀರ ಗಾಯಗಳಾಗಿದೆ. ಲಕ್ಷ್ಮಿ ನಗರದಿಂದ ಐಟಿಒ ಕಡೆ ದಂಪತಿ ಕಾರು ಹೋಗುತ್ತಿತ್ತು. ಐಟಿಒದಿಂದ ಲಕ್ಷ್ಮಿ ನಗರದ ಕಡೆ ಶಾಸಕರಿದ್ದ ಇನ್ನೂವಾ ಬರುತ್ತಿತ್ತು. ತಕ್ಷಣವೇ ಎಲ್ಲರನ್ನೂ LNJP ಆಸ್ಪತ್ರೆಗೆ ಚಿಕಿತ್ಸೆ ದಾಖಲಿಸಲಾಗಿದೆ.

ದೆಹಲಿಯ ಐ.ಪಿ.ಎಸ್ಟೇಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು