8:57 PM Friday3 - April 2026
ಬ್ರೇಕಿಂಗ್ ನ್ಯೂಸ್
ವಿರಾಜಪೇಟೆಯಲ್ಲಿ ಸಂಭ್ರಮದ ಹನುಮ ಜಯಂತಿ ಆಚರಣೆ: ಸಹಸ್ರಾರು ಸಂಖ್ಯೆಯಲ್ಲಿ ಸಮಾಗಮ ಪಾಟೀಲ್ – ಯತ್ನಾಳ್ ವಾಕ್ಸಮರ | ಒಂದು ದಿನ ಅವರೇ ಅಪ್ಪ-ಮಕ್ಕಳನ್ನು ಕೈಬಿಟ್ಟು… ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ…

ಇತ್ತೀಚಿನ ಸುದ್ದಿ

ಹೊಸ ದಿಗಂತ ವಿಶೇಷ ವರದಿಗಾರ  ಬಾಳೆಪುಣಿಗೆ ರಾಜ್ಯಮಟ್ಟದ ಪ್ರತಿಷ್ಠಿತ ಡಾ. ಬಿ.ಆರ್. ಅಂಬೇಡ್ಕರ್ ಪ್ರಶಸ್ತಿ

12/04/2022, 22:51

ಮಂಗಳೂರು(reporterkarnataka.com): ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ ೧೩೧ನೇ ಜನ್ಮ ದಿನಾಚರಣೆ ಅಂಗವಾಗಿ ರಾಜ್ಯ ಸರಕಾರದಿಂದ ನೀಡಲ್ಪಡುವ ರಾಜ್ಯ ಮಟ್ಟದ ಪ್ರತಿಷ್ಠಿತ ‘ಡಾ. ಬಿ.ಆರ್. ಅಂಬೇಡ್ಕರ್ ಪ್ರಶಸ್ತಿ’ಗೆ ಹೊಸ ದಿಗಂತ ಮಂಗಳೂರು ಆವೃತ್ತಿಯ ವಿಶೇಷ ವರದಿಗಾರ ಗುರುವಪ್ಪ ಎನ್.ಟಿ. ಬಾಳೇಪುಣಿ ಆಯ್ಕೆಯಾಗಿದ್ದಾರೆ.

ಏ.೧೪ರಂದು ಬೆಳಗ್ಗೆ ೧೦.೩೦ಕ್ಕೆ ಬೆಂಗಳೂರು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದು, ಪ್ರಶಸ್ತಿಯು ೫ ಲಕ್ಷ ರೂ. ನಗದು, ೨೦ ಗ್ರಾಂನ ಚಿನ್ನದ ಪದಕ ಹಾಗೂ ಪ್ರಶಸ್ತಿಪತ್ರ ಒಳಗೊಂಡಿದೆ.

ಹೊಸ ದಿಗಂತ ಪತ್ರಿಕೆಯಲ್ಲಿ ಕಳೆದ ೨೫ ವರ್ಷಗಳಿಂದ ಕಾರ್ಯನಿರ್ವಸುತ್ತಿರುವ ಬಾಳೇಪುಣಿ ಅವರು, ಪತ್ರಿಕೋದ್ಯಮದಲ್ಲಿ ಒಟ್ಟು ೩೬ ವರ್ಷಗಳ ಅನುಭವ ಹೊಂದಿದ್ದಾರೆ. ಅಭಿವೃದ್ಧಿ ಪತ್ರಿಕೋದ್ಯಮದಲ್ಲಿ ಹೆಸರು ಗಳಿಸಿರುವ ಅವರು, ಹಲವಾರು ಮಂದಿ ಎಲೆಮರೆಕಾಯಿಯಂತಿದ್ದ ಸಾಧಕರನ್ನು ಬೆಳಕಿಗೆ ತಂದು ಅವರಿಗೆ ಪ್ರಶಸ್ತಿ ದೊರಕಲು ಕಾರಣರಾಗಿದ್ದಾರೆ. ಪದ್ಮಶ್ರೀ ಹರೇಕಳ ಹಾಜಬ್ಬ ಅವರನ್ನು  ಮೊದಲ ಬಾರಿಗೆ ಜಗತ್ತಿಗೆ ಪರಿಚಯಿಸಿದ ಕೀರ್ತಿ ಬಾಳೇಪುಣಿ ಅವರಿಗೆ ಸಲ್ಲುತ್ತಿದೆ. ಬಾಳೇಪುಣಿ ಅವರಿಗೆ ಈ ಹಿಂದೆ ೨೦೧೧ರಲ್ಲಿ ರಾಷ್ಟ್ರಮಟ್ಟದ ಸರೋಜಿನಿ ನಾಯ್ಡು ಪ್ರಶಸ್ತಿ, ೨೦೦೪ರಲ್ಲಿ ಪ.ಗೋ. ಗ್ರಾಮೀಣ ವರದಿಗಾರಿಕೆ ಪ್ರಶಸ್ತಿ, ೨೦೧೪ರಲ್ಲಿ ದ.ಕ. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ, ೨೦೧೨ರಲ್ಲಿ ಕಾಂತಾವರ ಪುರಸ್ಕಾರ ದೊರೆತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು