11:57 AM Thursday6 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ಹೊಸ ದಿಗಂತ ವಿಶೇಷ ವರದಿಗಾರ  ಬಾಳೆಪುಣಿಗೆ ರಾಜ್ಯಮಟ್ಟದ ಪ್ರತಿಷ್ಠಿತ ಡಾ. ಬಿ.ಆರ್. ಅಂಬೇಡ್ಕರ್ ಪ್ರಶಸ್ತಿ

12/04/2022, 22:51

ಮಂಗಳೂರು(reporterkarnataka.com): ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ ೧೩೧ನೇ ಜನ್ಮ ದಿನಾಚರಣೆ ಅಂಗವಾಗಿ ರಾಜ್ಯ ಸರಕಾರದಿಂದ ನೀಡಲ್ಪಡುವ ರಾಜ್ಯ ಮಟ್ಟದ ಪ್ರತಿಷ್ಠಿತ ‘ಡಾ. ಬಿ.ಆರ್. ಅಂಬೇಡ್ಕರ್ ಪ್ರಶಸ್ತಿ’ಗೆ ಹೊಸ ದಿಗಂತ ಮಂಗಳೂರು ಆವೃತ್ತಿಯ ವಿಶೇಷ ವರದಿಗಾರ ಗುರುವಪ್ಪ ಎನ್.ಟಿ. ಬಾಳೇಪುಣಿ ಆಯ್ಕೆಯಾಗಿದ್ದಾರೆ.

ಏ.೧೪ರಂದು ಬೆಳಗ್ಗೆ ೧೦.೩೦ಕ್ಕೆ ಬೆಂಗಳೂರು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದು, ಪ್ರಶಸ್ತಿಯು ೫ ಲಕ್ಷ ರೂ. ನಗದು, ೨೦ ಗ್ರಾಂನ ಚಿನ್ನದ ಪದಕ ಹಾಗೂ ಪ್ರಶಸ್ತಿಪತ್ರ ಒಳಗೊಂಡಿದೆ.

ಹೊಸ ದಿಗಂತ ಪತ್ರಿಕೆಯಲ್ಲಿ ಕಳೆದ ೨೫ ವರ್ಷಗಳಿಂದ ಕಾರ್ಯನಿರ್ವಸುತ್ತಿರುವ ಬಾಳೇಪುಣಿ ಅವರು, ಪತ್ರಿಕೋದ್ಯಮದಲ್ಲಿ ಒಟ್ಟು ೩೬ ವರ್ಷಗಳ ಅನುಭವ ಹೊಂದಿದ್ದಾರೆ. ಅಭಿವೃದ್ಧಿ ಪತ್ರಿಕೋದ್ಯಮದಲ್ಲಿ ಹೆಸರು ಗಳಿಸಿರುವ ಅವರು, ಹಲವಾರು ಮಂದಿ ಎಲೆಮರೆಕಾಯಿಯಂತಿದ್ದ ಸಾಧಕರನ್ನು ಬೆಳಕಿಗೆ ತಂದು ಅವರಿಗೆ ಪ್ರಶಸ್ತಿ ದೊರಕಲು ಕಾರಣರಾಗಿದ್ದಾರೆ. ಪದ್ಮಶ್ರೀ ಹರೇಕಳ ಹಾಜಬ್ಬ ಅವರನ್ನು  ಮೊದಲ ಬಾರಿಗೆ ಜಗತ್ತಿಗೆ ಪರಿಚಯಿಸಿದ ಕೀರ್ತಿ ಬಾಳೇಪುಣಿ ಅವರಿಗೆ ಸಲ್ಲುತ್ತಿದೆ. ಬಾಳೇಪುಣಿ ಅವರಿಗೆ ಈ ಹಿಂದೆ ೨೦೧೧ರಲ್ಲಿ ರಾಷ್ಟ್ರಮಟ್ಟದ ಸರೋಜಿನಿ ನಾಯ್ಡು ಪ್ರಶಸ್ತಿ, ೨೦೦೪ರಲ್ಲಿ ಪ.ಗೋ. ಗ್ರಾಮೀಣ ವರದಿಗಾರಿಕೆ ಪ್ರಶಸ್ತಿ, ೨೦೧೪ರಲ್ಲಿ ದ.ಕ. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ, ೨೦೧೨ರಲ್ಲಿ ಕಾಂತಾವರ ಪುರಸ್ಕಾರ ದೊರೆತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು