6:15 AM Saturday27 - December 2025
ಬ್ರೇಕಿಂಗ್ ನ್ಯೂಸ್
ಕೊಡಗಿನಲ್ಲಿ ಅರಣ್ಯ ರಕ್ಷಕರಿಂದಲೇ ಮರಗಳ ಲೂಟಿ: ಲೋಡರ್ ಬಂಧನ; ನಾಲ್ವರು ಪರಾರಿ ಖಾಸಗಿ ವಾಹನಕ್ಕೆ ನಾಮಫಲಕ | ಪೊಲೀಸಪ್ಪನಿಂದೇ ಕಾನೂನು ಉಲ್ಲಂಘನೆ: ದಂಡ ಯಾವತ್ತೇ ವಿಧಾನಸಭೆ ಚುನಾವಣೆ ನಡೆದರೂ ಬಿಜೆಪಿಗೆ ಬಹುಮತ: ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ವಿಶ್ವಾಸ ಭಾರತ ರತ್ನ ವಾಜಪೇಯಿ ಗ್ರಂಥಾಲಯ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಉದ್ಘಾಟನೆ ಜಿಲ್ಲಾ ಮತ್ತು ಕ್ಲಸ್ಟರ್ ಮಟ್ಟದಲ್ಲಿ ಡಿಜಿಟಲ್ ಆರ್ಥಿಕತೆಗೆ ಒತ್ತು: ಕೆಡಿಇಎಂ ಮತ್ತು ಎಫ್‌ಕೆಸಿಸಿಐ… ಪ್ರೀತಿಯ ಸಂಸ್ಕೃತಿ ಬೆಳೆಸಿ: ರೊಸಾರಿಯೋ ಕೆಥೆಡ್ರಲ್‌ನಲ್ಲಿ ಬಿಷಪ್ ಡಾ. ಸಲ್ಡಾನರಿಂದ ಕ್ರಿಸ್ಮಸ್ ಸಂದೇಶ ಕಲಬುರ್ಗಿಯಲ್ಲಿ ಟೆಕ್ಸ್ ಟೈಲ್ ಪಾರ್ಕ್ | ಮುಂದಿನ ತಿಂಗಳು ಉನ್ನತ ಮಟ್ಟದ ಸಭೆ:… ಮೂಡಿಗೆರೆ ತಾಪಂ ಇಒ ದರ್ಬಾರ್‌: ಸರ್ಕಾರಿ ಜೀಪ್‌ ಖಾಸಗಿಯಾಗಿ ದುರ್ಬಳಕೆ; ನಿತ್ಯ 60… ಸಂಸದ ಯದುವೀರ್‌ ಪ್ರಯತ್ನದ ಫಲಶ್ರುತಿ : ತಂಬಾಕು ಮಾರಾಟಕ್ಕೆ ಅನುಮತಿ ರಾಮೇಶ್ವರಂ ಕೆಫೆ ವಿರುದ್ಧದ ಪ್ರಕರಣದಲ್ಲಿ ಹೆಚ್ಚಿನ ತನಿಖೆಗೆ ಕರ್ನಾಟಕ ಹೈಕೋರ್ಟ್ ವತಿಯಿಂದ ತಡೆಯಾಜ್ಞೆ;…

ಇತ್ತೀಚಿನ ಸುದ್ದಿ

ಹೊಸ ವರ್ಷ ಆಚರಣೆಗೆ ಕಾಫಿನಾಡು ಕಾತರ: ಜಿಲ್ಲಾಡಳಿತದಿಂದ ಮಾರ್ಗಸೂಚಿ ಬಿಡುಗಡೆ

30/12/2024, 15:26

*ಈಗಾಗಲೇ ಪ್ರವಾಸಿಗರಿಂದ ತುಂಬಿರೋ ಕಾಫಿನಾಡು ಚಿಕ್ಕಮಗಳೂರು*

*31ರ ಸಂಜೆ 6 ರಿಂದ 1ರ ಬೆಳಗ್ಗೆ 6ರವರೆಗೆ ಪ್ರವಾಸಿ ತಾಣಗಳಿಗೆ ಸಂಪೂರ್ಣ ನಿರ್ಬಂಧ*

*ರಾಜ್ಯದ ಅತ್ಯಂತ ಎತ್ತರ ಪ್ರದೇಶವಾದ ಮುಳ್ಳಯ್ಯನಗಿರಿ, ದತ್ತಪೀಠ, ದೇವರಮನೆ ಸೇರಿದಂತೆ ಝರಿ ಫಾಲ್ಸ್ , ಮಾಣಿಕ್ಯಧಾರ ಫಾಲ್ಸ್ ನ ಪ್ರಮುಖ ಪ್ರವಾಸಿತಾಣಗಳಿಗೆ ನಿರ್ಬಂಧ*

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಹೊಸ ವರ್ಷದ ಆಚರಣೆಗೆ ಕಾಫಿನಾಡು ಚಿಕ್ಕಮಗಳೂರು ಜಿಲ್ಲೆ ಕಾತರದಿಂದ ಕಾಯುತ್ತಿದ್ದು, ಜಿಲ್ಲಾಡಳಿತ ಮಾರ್ಗಸೂಚಿ ಬಿಡುಗಡೆ ಮಾಡಿದೆ.
ಮಾರ್ಗಸೂಚಿ ಪ್ರಕಾರ ಡಿ. 31ರ ಸಂಜೆ 6ರಿಂದ 1ರ ಬೆಳಗ್ಗೆ 6ರವರೆಗೆ ಪ್ರವಾಸಿ ತಾಣಗಳಿಗೆ ಸಂಪೂರ್ಣ ನಿರ್ಬಂಧ ಹೇರಲಾಗಿದೆ. ರಾಜ್ಯದ ಅತ್ಯಂತ ಎತ್ತರ ಪ್ರದೇಶವಾದ ಮುಳ್ಳಯ್ಯನಗಿರಿ, ದತ್ತಪೀಠ, ದೇವರಮನೆ ಸೇರಿದಂತೆ ಝರಿ ಫಾಲ್ಸ್ , ಮಾಣಿಕ್ಯಧಾರ ಫಾಲ್ಸ್ ನ ಪ್ರಮುಖ ಪ್ರವಾಸಿ ತಾಣಗಳು ಕೂಡ ನಿರ್ಬಂಧದಲ್ಲಿ ಸೇರಿವೆ.
ಕಡ್ಡಾಯವಾಗಿ ರೇವ್ ಪಾರ್ಟಿ ರೀತಿಯ ಕಾರ್ಯಕ್ರಮಗಳಿಗೆ ಅವಕಾಶ ನೀಡಿಲ್ಲ. ಆಯೋಜಕರ ಮೇಲೆಯೇ ಪ್ರಕರಣ ದಾಖಲಿಸಲಾಗುತ್ತದೆ.
ರಾತ್ರಿ 10ರ ನಂತರ ಔಟ್ ಡೋರ್ ಡಿಜೆಗೆ ಸಂಪೂರ್ಣ ನಿಷೇಧ ಹೇರಲಾಗಿದೆ.
ಸಿಎಲ್ 5 ಲೈಸನ್ಸ್ ಪಡೆದವರು ಸಿಸಿ ಕ್ಯಾಮರಾ ಹಾಕಬೇಕು, ಪೊಲೀಸ್ ಅನುಮತಿ ಪಡೆಯಬೇಕು.
ಆದಾಯಕ್ಕಾಗಿ ಇದೇ ಮೊದಲ ಬಾರಿಗೆ ಸಿ.ಎಲ್. 5 ಗೆ ಅನುಮತಿ ಸರ್ಕಾರ ನೀಡಿದೆ.
ಒಂದು ದಿನದ ಅನುಮತಿಗೆ 12000 ಸಾವಿರ ನಿಗಧಿ ಮಾಡಿದೆ. ಮುಖ್ಯರಸ್ತೆಯಲ್ಲಿ ಜಿಗ್ ಜಾಗ್ ರೀತಿ ಬ್ಯಾರಿಕೇಡ್ ಅಳವಡಿಸಲಾಗುವುದು.
ಕುಡಿದು ವಾಹನ ಚಾಲನೆ, ವೀಲ್ಹಿಂಗ್ ಮಾಡೋರ ಮೇಲೆ ಖಾಕಿ ಹದ್ದಿನಕಣ್ಣು ಇರಿಸಿದೆ. ಈ ಕುರಿತು ಚಿಕ್ಕಮಗಳೂರು ಎಸ್ಪಿ ವಿಕ್ರಂ ಅಮಟೆ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು