6:00 AM Saturday10 - January 2026
ಬ್ರೇಕಿಂಗ್ ನ್ಯೂಸ್
ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ ನಮ್ಮ ಮೆಟ್ರೋದಲ್ಲಿ ವಿದ್ಯಾರ್ಥಿಗಳಿಗೆ ರಿಯಾಯಿತಿ ಪಾಸ್: ಎಎಪಿ ಯುವ ಘಟಕದಿಂದ ಸಹಿ ಸಂಗ್ರಹಣ… ಬಾಂಗ್ಲಾದವರು ನುಸುಳುವವರೆಗೆ ಕೇಂದ್ರ ಗೃಹ ಇಲಾಖೆ ನಿದ್ದೆಗೆ ಜಾರಿತ್ತಾ?: ಸಚಿವ ಕೃಷ್ಣ ಬೈರೇಗೌಡ… ಇನ್ಫೋಸಿಸ್ ನಿಂದ 53.5 ಎಕರೆ ಭೂಮಿ ರಿಯಲ್ ಎಸ್ಟೇಟ್ ಸಂಸ್ಥೆಗೆ ಮಾರಾಟ: ತನಿಖೆಗೆ…

ಇತ್ತೀಚಿನ ಸುದ್ದಿ

ಹೊಸ ವರ್ಷ ಸ್ವಾಗತಕ್ಕೆ ಕಡಲನಗರಿ ಸಜ್ಜು: ಬೀಚ್ ಗಳಲ್ಲಿ ಜನಸಾಗರ, ಅಲ್ಲಲ್ಲಿ ವಿಶೇಷ ಕಾರ್ಯಕ್ರಮ, ದೇಗುಲ, ಚರ್ಚ್ ಗಳಲ್ಲಿ ವಿಶೇಷ ಪ್ರಾರ್ಥನೆ

31/12/2023, 22:08

ಮಂಗಳೂರು(reporterkarnataka.com): ಹೊಸ ವರ್ಷ 2024 ಬರಮಾಡಿಕೊಳ್ಳಲು ಕಡಲನಗರಿ ಮಂಗಳೂರು ಸಜ್ಜಾಗಿದೆ. ಜಾತಿ, ಧರ್ಮ, ಪ್ರಾಂತ್ಯ, ಭಾಷೆಯ ವೈರುಧ್ಯಗಳ ನಡುವೆ ತುಳುವರು ಹೊಸ ವರ್ಷಕ್ಕೆ ನಗುಮೊಗದಿಂದ ಸಿದ್ದರಾಗಿದ್ದಾರೆ.


ವರ್ಷದ ಕೊನೆಯ ದಿನ ಭಾನುವಾರ ಬಂದಿರುವುದರಿಂದ ಕರಾವಳಿಗರು ಫುಲ್ ಖುಷಿಯಲ್ಲಿದ್ದಾರೆ. ಜಿಲ್ಲೆಯ ಜನತೆ ಇಂದು ಬೆಳಗ್ಗೆಯೇ ಕುಕ್ಕೆ ಸುಬ್ರಹ್ಮಣ್ಯ, ಧರ್ಮಸ್ಥಳ, ಕಟೀಲು, ಪೊಳಲಿ ಮುಂತಾದ ಪುಣ್ಯ ಕ್ಷೇತ್ರಗಳಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ಎಲ್ಲ ದೇಗುಲಗಳು ಇಂದು ಬೆಳಗ್ಗಿನಿಂದಲೇ ರಶ್ ಇತ್ತು. ಕಡಲನಗರಿಯ ಶರವು, ಮಂಗಳಾದೇವಿ. ಕುದ್ರೋಳಿ ದೇಗುಲಗಳಿಗೆ ಸಾಕಷ್ಟು ಜನರು ಧಾವಿಸಿ ದೇವರಿಗೆ ನಮಿಸಿ ಬಂದಿದ್ದಾರೆ.
ಸಂಜೆ 4 ಗಂಟೆ ಕಳೆಯುತ್ತಿದ್ದಂತೆ ಮಂಗಳೂರಿನ ಪಣಂಬೂರು ಬೀಚ್, ತಣ್ಣೀರು ಬಾವಿ ಬೀಚ್, ಉಳ್ಳಾಲ ಸೋಮೇಶ್ವರ ಬೀಚ್, ಸುರತ್ಕಲ್ ಎನ್ ಐಟಿಕೆ ಬೀಚ್, ಸಸಿಹಿತ್ಲು ಬೀಚ್ ಪ್ರವಾಸಿಗರಿಂದ ಮತ್ತು ವಿಹಾರಾರ್ಥಿಗಳಿಂದ ತುಂಬಿತ್ತು. ಪಣಂಬೂರು ಬೀಚ್ ನಲ್ಲಿ ಜನರ ಖುಷಿ ಕಳೆಗಟ್ಟಿತ್ತು. ಗಾಳಿಪಟ ಹಾರಾಟ, ಬೆಲೂನ್ ಹಾರಾಟ ನಡೆಯಿತು.



ದೇಗುಲಗಳ ಜತೆ ಚರ್ಚ್ ಗಳಲ್ಲಿ ವಿಶೇಷ ಸಾಮೂಹಿಕ ಪ್ರಾರ್ಥನೆ ನಡೆಯಿತು. ಮಂಗಳೂರಿನ ಮಿಲಾಗ್ರಿಸ್ ಚರ್ಚ್,ವೆಲೆಂನ್ಸಿಯ ದೇರೆಬೈಲ್ ಚರ್ಚ್, ರೊಸಾರಿಯೊ ಚರ್ಚ್, ಬಿಜೈ ಚರ್ಚ್, ಸೈಂಟ್ ಸೆಬಾಸ್ಟಿಯನ್ ಚರ್ಚ್ ಸೇರಿದಂತೆ ಎಲ್ಲ ಚರ್ಚ್ ಗಳಲ್ಲಿ ಹೊಸ ವರ್ಷದ ಪ್ರಯುಕ್ತ ವಿಶೇಷ ಪ್ರಾರ್ಥನೆ ನೆರವೇರಿತು.

ಇತ್ತೀಚಿನ ಸುದ್ದಿ

ಜಾಹೀರಾತು